Andolana originals

ಜಂಬೂ ಸವಾರಿ ಮಾರ್ಗದ ಮರದ ಕಾಂಡ ತೆರವಾಗುತ್ತಾ..?

 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿಜಯದಶಮಿಯಂದು ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂ ಸವಾರಿ ಮೆರವಣಿಗೆ ಸಾಗುವ ಸಯ್ಯಾಜಿರಾವ್ ರಸ್ತೆಯ ಬಂಬೂ ಬಜಾರ್‌ನ ಪಾದಚಾರಿ ಮಾರ್ಗದಲ್ಲಿ ಉರುಳಿ ಬಿದ್ದಿರುವ ಮರದ ಬೃಹತ್ ಕಾಂಡವನ್ನು ಕಳೆದ ಎರಡು ವರ್ಷಗಳಿಂದ ತೆರವುಗೊಳಿಸದೇ ಇರುವುದು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ದಸರಾ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಅದರಲ್ಲೂ ವಿಶೇಷವಾಗಿ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಜನ ಸಾಗರ ಇದ್ದೇ ಇರುತ್ತದೆ. ಲಕ್ಷಾಂತರ ಜನರು ಮಹೋತ್ಸವದ ಅಂತಿಮ ದಿನದ ಆ ಒಂದು ವೈಭವವನ್ನು ಕಣ್ಣುಂಬಿಕೊಳ್ಳಲು ಕಾತರದಿಂದ ಕಾಯುತ್ತಿರುತ್ತಾರೆ.

ಇಂಥ ವಿಶೇಷ ದಿನಗಳಲ್ಲಿ ನಗರದ ಸ್ವಚ್ಛತೆ ಬಗ್ಗೆ ಗಮನ ಹರಿಸಿದರಷ್ಟೇ ಸಾಲದು, ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಒಣಗಿದ ಮರದ ರೆಂಬೆಗಳ ತೆರವು, ರಸ್ತೆ ಮಗ್ಗುಲಲ್ಲೇ ಬಿದ್ದಿರುವ ಮರಗಳು, ಬಂಬೂ ಬಜಾರ್‌ನಲ್ಲಿರುವ ಮೆಟ್ಟಿಲುಗಳ ಮೇಲೆ ಬೆಳೆದಿರುವ ಕುರುಚಲು ಹಾಗೂ ಮುಳ್ಳಿನ ಗಿಡಗಳನ್ನೂ ತೆರವು ಗೊಳಿಸಬೇಕಾಗಿದೆ.

ಅಪಾಯಕಾರಿಯಾಗಿರುವ ಒಣಗಿದ ರೆಂಬೆಗಳು: ಜಂಬೂ ಸವಾರಿ ಸಾಗುವ ಮಾರ್ಗದ ಎರಡೂ ಕಡೆಗಳಲ್ಲಿ ಸಾಲು ಮರಗಳಿದ್ದು, ಅವುಗಳಲ್ಲಿ ಒಣಗಿದ ರೆಂಬೆಗಳೂ ಇವೆ. ದಸರಾ ಮೆರವಣಿಗೆಗೂ ಮುನ್ನ ಈ ರೆಂಬೆಗಳ ತೆರವು ಕಾರ್ಯ ಪೂರ್ಣಗೊಳ್ಳಬೇಕಿದೆ. ಆಕಸ್ಮಿಕವಾಗಿ ಯಾವುದೇ ಒಂದು ಸಣ್ಣ ಕೊಂಬೆ ಜಂಬೂ ಸವಾರಿ ವೀಕ್ಷಕರ ಮೇಲೆ ಬಿದ್ದರೂ ಅನಾಹುತ ಸಂಭವಿ ಸುತ್ತದೆ. ಹೀಗಾಗದಿರಲು ಪಾಲಿಕೆಯಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಇದಲ್ಲದೇ ಸಯ್ಯಾಜಿರಾವ್ ರಸ್ತೆಯಲ್ಲಿ ಮೋಟು ಮರವೊಂದಿದ್ದು, ಅದು ಕೂಡ ಚಿಗುರಿ ರೆಂಬೆಯೊಂದು ಎತ್ತರಕ್ಕೆ ಬೆಳೆದಿದ್ದು, ಇದನ್ನು ತೆರವುಗೊಳಿಸುವ ಬಗ್ಗೆಯೂ ಸಂಬಂಧಪಟ್ಟವರು ಗಮನ ಹರಿಸುವುದು ಅಗತ್ಯ.

ಮೆಟ್ಟಿಲುಗಳು ಸ್ವಚ್ಛವಾಗಬೇಕು: ದಸರಾ ಜಂಬೂ ಸವಾರಿಯನ್ನು ಸಾರ್ವಜನಿಕರು ಆರಾಮವಾಗಿ ಕುಳಿತು ನೋಡಬೇಕೆಂದೇ ಬಂಬೂ ಬಜಾರಿನ ಮೆಟ್ಟಿಲುಗಳ ಮೇಲೆ ಮಧ್ಯಾಹ್ನ 12 ಗಂಟೆಯಿಂದಲೇ ಜಾಗ ಹಿಡಿದುಕೊಂಡು ಕೂರುತ್ತಾರೆ. ಈ ಮೆಟ್ಟಿಲುಗಳ ಹಿಂಭಾಗದಲ್ಲಿ ಎತ್ತರದ ಮುಳ್ಳಿನ ಗಿಡಗಳು ಬೆಳೆದಿವೆ. ಜನರು ಈ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಪಾಲಿಕೆಯಿಂದ ದಸರಾ ವೇಳೆಯಲ್ಲಿ ಮಾತ್ರವಲ್ಲದೆ, ಬೇರೆ ಸಮಯದಲ್ಲೂ ಸ್ವಚ್ಛತೆ ಮಾಡುವುದು ಅಗತ್ಯ ಎನ್ನುತ್ತಾರೆ.

ಒಣಗಿದ ಮರಗಳ ತೆರವು: ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಡಬಲ್ ಡೆಕ್ಕರ್ ಬಸ್ ಕೂಡ ಓಡಾಡುವುದರಿಂದ ಕೆಳಕ್ಕೆ ಬಾಗಿರುವ ರೆಂಬೆಗಳನ್ನೂ ತೆರವು ಮಾಡುತ್ತೇವೆ. ಮರದ ಬೃಹತ್ ಕಾಂಡವನ್ನು ನಾಳೆಯೇ ತೆರವು ಮಾಡಿಸುತ್ತೇನೆ. ಅರಮನೆಯಿಂದ ಬನ್ನಿಮಂಟಪದ ವರೆಗೂ ಇರುವ ಮರಗಳಲ್ಲಿನ ಒಣಗಿದ ಹಾಗೂ ರಸ್ತೆಗೆ ಬಾಗಿರುವ ರೆಂಬೆಗಳ ತೆರವು ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ದಸರಾ ಒಂದು ವಾರ ಇರುವಂತೆಯೇ ತೆರವಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮಹಾನಗರ ಪಾಲಿಕೆಯ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕರಾದ ಮೋಹನ್‌ ತಿಳಿಸಿದ್ದಾರೆ.

ಜಂಬೂ ಸವಾರಿ ಮಾರ್ಗದಲ್ಲಿ ಫುಟ್ಬಾತ್ ಮೇಲೆ ಬಿದ್ದಿರುವ ಮರದ ದೊಡ್ಡ ಕಾಂಡ ನಮ್ಮ ಕಣ್ಣಿಗೆ ಬಿದ್ದಿರಲಿಲ್ಲ. ಕೂಡಲೇ ತೆರವು ಮಾಡಿಸುತ್ತೇನೆ. ಇದು ಮಾತ್ರವಲ್ಲ ಈ ಮಾರ್ಗದ ಮರಗಳಲ್ಲಿ ಒಣಗಿರುವ ರೆಂಬೆಗಳನ್ನು ಗಮನಿಸಿ ಕಟಾವು ಮಾಡಿಸುತ್ತೇವೆ. ಈಗ ಕುರುಬಾರಹಳ್ಳಿ ಹಾಗೂ ಚಾಮುಂಡಿ ಬೆಟ್ಟದ ಮಾರ್ಗದಲ್ಲಿರುವ ಮರಗಳ ಒಣಗಿರುವ ರೆಂಬೆಗಳನ್ನು ತೆರವು ಮಾಡುತ್ತಿದ್ದೇವೆ. ದಸರಾ ಆರಂಭಕ್ಕೂ ಮುನ್ನ ಈ ಕೆಲಸ ಮಾಡಿ ಮುಗಿಸುತ್ತೇವೆ.

-ಮೋಹನ್, ಸಹಾಯಕ ನಿರ್ದೇಶಕರು, ಮಹಾನಗರ ಪಾಲಿಕೆಯ ತೋಟಗಾರಿಕೆ ವಿಭಾಗ

ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಉರುಳಿ ಬಿದ್ದಿರುವ ಮರವನ್ನು ಪಾಲಿಕೆಯವರು ಈ ವರೆಗೂ ತೆರವು ಮಾಡಿಲ್ಲ. ವಲಯ ಕಚೇರಿಗೆ ಅನೇಕ ಬಾರಿ ದೂರು ನೀಡಿದ್ದೇವೆ. ನೆಪಕ್ಕೆ ಒಂದು ಪತ್ರ ಬರೆದು ಕೊಡಿ ಎಂದು ಕೇಳುತ್ತಾರೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಬೇಸತ್ತಿದ್ದಾರೆ. ಈ ವರ್ಷವಾದರೂ ಮರ ತೆರವು ಮಾಡಿ ಫುಟ್ಬಾತ್‌ನಲ್ಲಿರುವ ಮರದ ಬೇರು ತೆಗೆದು ಇಂಟರ್ಲಾಕ್ ಹಾಕುತ್ತಾರಾ ನೋಡಬೇಕು.

-ಶ್ರೀಕಾಂತ್, ಮಂಡಿ ಮೊಹಲ್ಲಾ ನಿವಾಸಿ

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

2 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

3 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

3 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

3 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

3 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

4 hours ago