Andolana originals

ಹಿಮಾಲಯಕ್ಕಿಂತಲೂ ನಂಜನಗೂಡಲ್ಲೇ ಬಿಸಿ ನೀರು ತುಟ್ಟಿ!

ಎಸ್.ಎಸ್.ಭಟ್

ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ

ನಂಜನಗೂಡು: ಹಿಮಾಲಯದಲ್ಲಿ ಪ್ರತಿ ಬಕೆಟ್ ಬಿಸಿ ನೀರಿಗೆ ೫ ರೂ. ಅಥವಾ ೧೦ ರೂ. ಆದರೆ ಕಪಿಲಾ ತೀರದ ನಂಜನಗೂಡಿನಲ್ಲಿ ೫೦ ರೂ.ನಿಂದ ೧೦೦ ರೂ.ಗಳಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಶ್ರೀಕಂಠೇಶ್ವರನ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಬೆಳಗಿನಜಾವ ಸೇರಿದಂತೆ ಚಳಿಯಲ್ಲಿ ತೀರ್ಥಸ್ನಾನ ಮಾಡುವುದು ಸಂಪ್ರದಾಯ. ಅದಕ್ಕಾಗಿಯೇ ಸ್ನಾನಘಟ್ಟದಲ್ಲಿ ಶೌಚಾಲಯ, ಸ್ನಾನಗೃಹ, ಬಟ್ಟೆ ಬದಲಿಸುವ ಕೊಠಡಿಗಳನ್ನು ನಿರ್ಮಿಸಿರುವ ದೇವಾಲಯ, ಕೆಲ ವರ್ಷಗಳ ಹಿಂದಿ ಭಕ್ತರ ಬಿಸಿ ನೀರಿನ ಜಳಕಕ್ಕಾಗಿ ೨ ಬಾಯ್ಲರ್ಗಳನ್ನು ಸ್ಥಾಪಿಸಿ ಸ್ನಾನ ಮಾಡುವವರಿಗೆ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಿ, ದೇವಾಲಯದ ಖಾಯಂ ನೌಕರರಿಗೆ ಇದರ ಜವಾಬ್ದಾರಿ ನೀಡಲಾಯಿತು.

ಪ್ರಾರಂಭದಲ್ಲಿ ಒಂದು ಬಕೆಟ್‌ಗೆ ೫, ೧೦ ರೂ. ನೀಡಬೇಕಾಗಿತ್ತು. ಇದು ಗೊತ್ತಾದ ನಂತರ ಬಿಸಿ ನೀರು ಉಚಿತ ಎಂದು ಘೋಷಿಸಲಾಯಿತು. ಆದರೆ ಕ್ರಮೇಣ ಬಿಸಿ ನೀರು ದೇವಾಲಯದ ಪಾಲಿಗೆ ಉಚಿತವಾಗಿ, ಭಕ್ತರ ಜೇಬಿಗೆ ಕನ್ನವಾಗಿ ಪರಿವರ್ತನೆಯಾಯಿತು. ಒಂದು ಬಕೆಟ್ ಬಿಸಿ ನೀರು ಕೊನೆಗೆ ಸದ್ದಿಲ್ಲದೆ ೫೦ ರೂ.ನಿಂದ ೧೦೦ ರೂ. ಗೆ ಏರಿದ್ದು ಭಕ್ತರ ಪಾಲಿಗೆ ಹೊರೆಯಾಗಿದೆ.

ಹಿಮಾಲಯದ ಯಾವುದೇ ಸ್ಥಳಕ್ಕೇ ಹೋದರೂ ಪ್ರತಿ ಬಕೆಟ್ ಬಿಸಿ ನೀರಿಗೆ ೫ ರೂ.ನಿಂದ ೧೦ ರೂ. ಇದೆ. ಈಗ ೨೦ ರೂ.ಗೆ ಏರಿಕೆಯಾಗಿದೆ ಎಂದು ೨೫ಕ್ಕೂ ಹೆಚ್ಚು ಬಾರಿ ಚಾರ್ ಧಾಮ್ ಹಿಮಾಲಯದ ಯಾತ್ರೆ ಮಾಡಿ ಬಂದಿರುವ ನಂಜನಗೂಡು ಶಾಸ್ತ್ರೀ (ಸುಬ್ರಹ್ಮಣ್ಯ ಶಾಸ್ತ್ರೀ) ಹೇಳಿದರು.

” ಕಪಿಲಾ ಸ್ನಾನಘಟ್ಟದ ಶೌಚಾಲಯ ಸ್ನಾನದ ಬಿಸಿ ನೀರು, ಬಟ್ಟೆ ಬದಲಿಸುವ ವ್ಯವಸ್ಥೆ ಎಲ್ಲವೂ ಉಚಿತವಾಗಿದ್ದು, ಬಿಸಿ ನೀರಿಗೆ ಹಣ ವಸೂಲಿ ಮಾಡುವುದು ಗಮನಕ್ಕೆ ಬಂದ ತಕ್ಷಣ ಅದಕ್ಕೆ ತಡೆ ಹಾಕಲಾಗಿದೆ. ದೇವಾಲಯದಲ್ಲಿ ನಿತ್ಯ ಧ್ವನಿವರ್ಧಕದ ಪ್ರಕಟಣೆಯಲ್ಲಿ ಈ ಬಗ್ಗೆ ಪ್ರಚಾರ ಮಾಡುವಂತೆ ಇಂದಿನಿಂದಲೇ ಆದೇಶಿಸಲಾಗಿದೆ. ಅಲ್ಲಿ ಈ ಉಚಿತ ಸೌಲಭ್ಯದ ಕುರಿತಂತೆ ಫಲಕ ಅಳವಡಿಸಲು ಕೂಡ ತೀರ್ಮಾನಿಸಲಾಗಿದೆ. ಅಲ್ಲಿನ ಬಿಸಿ ನೀರಿಗೆ, ಶೌಚಾಲಯಕ್ಕೆ ಹಣ ಕೇಳಿದರೆ ನೇರವಾಗಿ ದೇವಾಲಯದ ಕಾರ್ಯಾಲಯಕ್ಕೆ ಬಂದು ತಿಳಿಸಬೇಕು.”

-ಸಿ.ಜಿ.ಕೃಷ್ಣ, ಇಒ, ಶ್ರೀಕಂಠೇಶ್ವರ ದೇವಾಲಯ

” ಕಪಿಲಾ ನದಿ ತೀರದಲ್ಲಿ ಬಿಸಿ ನೀರಿನ ದರ ಕಂಡು ನಮಗೆ ಆಘಾತವಾಯಿತು. ಪ್ರಶ್ನೆ ಮಾಡಲು ಹೋದರೆಜಗಳವಾಗುತ್ತದೆ. ನಾವು ಬಂದಿದ್ದು ದೇವಾಲಯಕ್ಕೆ ಎಂದು ಹಣ ನೀಡಿದೆವು. ಹಿಂದೆ ಕಾರ್ತಿಕ ಮಾಸದಲ್ಲಿ ಬಂದಾಗಲೂ ಬೇರೆಯವರಿದ್ದರು. ಆಗ ಒಂದು ಬಕೆಟ್‌ಗೆ ೧೦೦ ರೂ. ನೀಡಿದ್ದೆ. ಈ ಬಾರಿ ಪ್ರತಿ ಬಕೆಟ್‌ಗೆ ೫೦ ರೂ. ನೀಡಿ ಮಕ್ಕಳ ಸ್ನಾನ ಮಾಡಿಸಿ ಶ್ರೀಕಂಠೇಶ್ವರನ ದರ್ಶನಕ್ಕೆ ಹೋದೆವು.”

-ಜಗದಾಂಬಿಕೆ, ಶಾಂತಿ ನಗರ, ಬೆಂಗಳೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

5 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

5 hours ago