Andolana originals

ಸಿಎಂ ತವರಲ್ಲಿ ಹೊಸ ಅಧಿಕಾರಿಗಳ ಕಾರ್ಯಭಾರ

ಕೆ.ಬಿ.ರಮೇಶನಾಯಕ

ಮೈಸೂರು: ಲೋಕಸಭಾ ಚುನಾವಣೆಯ ನಂತರ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿ ಹೊಸ ಅಧಿಕಾರಿಗಳ ತಂಡ ಕಾರ್ಯಭಾರ ಶುರು ಮಾಡಿದೆ.

ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರನ್ನೂ ಬದಲಿಸುವ ಮೂಲಕ ಆಡಳಿತ ಯಂತ್ರಕ್ಕೆ ದೊಡ್ಡ ಮಟ್ಟದಲ್ಲಿ ಬದಲಾವಣೆ ತಂದು ಚುರುಕು ಮುಟ್ಟಿಸಿದೆ.

ಯಾವುದೇ ಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ನಗರಪಾಲಿಕೆ, ನಗರ ಸಹಾಯಕ ಪೊಲೀಸ್ ಆಯುಕ್ತರು ಮತ್ತಿತರ ಅಧಿಕಾರಿ ಗಳನ್ನೂ ವರ್ಗಾಯಿಸುವ ಕುರಿತು ಚರ್ಚೆ ನಡೆಯುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯ ಹೊತ್ತಿಗೆ ಆಡಳಿತ ಯಂತ್ರ ಮತ್ತಷ್ಟು ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು
ಹೇಳಲಾಗಿದೆ.

ರಾಜ್ಯದ ರಾಜ್ಯಧಾನಿ ಬೆಂಗಳೂರಿನನಂತರ ಮೈಸೂರು ರಾಜಕೀಯ ಮತ್ತು ಆಡಳಿತಾತ್ಮಕವಾಗಿ ಗಮನ ಸೆಳೆದಿರುವ ಜಿಲ್ಲೆಯಾಗಿದ್ದು, ಮುಡಾದಲ್ಲಿ ನಡೆದಿರುವ ಭೂ ಹಂಚಿಕೆ ಹಗರಣ ಬೆಳಕಿಗೆ ಬಂದ ಮೇಲೆ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿದೆ.

ಶೇ.50:50 ನಿವೇಶನ ಹಂಚಿಕೆ ಪ್ರಕರಣದಲ್ಲಿ ಕಾನೂನು ಬಾಹಿರ ತೀರ್ಮಾನ ಮಾಡಿರುವ ಕುರಿತು ರಾಜಕೀಯ ಪಕ್ಷಗಳ ನಡುವೆ ಕೆಸರೆರಚಾಟ ಶುರುವಾಗುತ್ತಿದ್ದಂತೆ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯ ದರ್ಶಿ ಜಿ.ಡಿ.ಶೇಖರ್ ಅವರನ್ನು ವರ್ಗಾಯಿಸಿ, ಮುಡಾ ಆಯುಕ್ತರನ್ನಾಗಿ ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯ ದರ್ಶಿಯಾಗಿದ್ದ ಎ.ಎನ್.ರಘುನಂದನ್, ಕಾರ್ಯದರ್ಶಿ ಸ್ಥಾನಕ್ಕೆ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರಾಗಿದ್ದ ವಿ.ಕೆ.ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಲಾಯಿತು. ಇದೀಗ ಮುಡಾದಲ್ಲಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯು ತ್ತಿರುವ ಕಾರಣ ಈ ಅಧಿಕಾರಿಗಳು ಕಚೇರಿಯಲ್ಲೇ ಮೊಕ್ಕಾಂ ಹೂಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಾ ಲಾಟ್ಕರ್ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ, ಹಾಲಿ ಆಯುಕ್ತರಾಗಿದ್ದ ಬಿ.ರಮೇಶ್ ಅವರನ್ನು ದಾವಣಗೆರೆ ಕೇಂದ್ರ ವಲಯ ಐಜಿಪಿಯನ್ನಾಗಿ ನಿಯೋಜಿಸಲಾಗಿದೆ. ಈ ಮೊದಲೇ ಮೈಸೂರು ನಗರದ ಸಂಚಾರ ವಿಭಾಗದ ಎಸಿಪಿ, ಕೆ.ಆರ್. ವಿಭಾಗದ ಎಸಿಪಿ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದ ಎನ್. ವಿಷ್ಣುವರ್ಧನ್ ಅವರನ್ನು ಮೈಸೂರು ಎಸ್‌ಪಿ ಜಾಗಕ್ಕೆ ನಿಯೋಜಿಸುವ ಮೂಲಕ ಮೇಜರ್ ಸರ್ಜರಿ ಮಾಡಲಾಗಿದೆ.

ಜಿಪಂ ಸಿಇಒ ಕೆ.ಎಂ.ಗಾಯತ್ರಿ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಲೋಕ ಸಭಾ ಚುನಾವಣೆಗೂ ಮುನ್ನವೇ ವರ್ಗಾವಣೆ ಮಾಡುವ ಮಾತು ಕೇಳಿ ಬಂದಿತ್ತಾದರೂ ಕೋರಿಕೆ ಮೇರೆಗೆ ಮುಂದುವರಿಸ ಲಾಗಿತ್ತು. ಆದರೆ, ವರ್ಗಾವಣೆ ಸಾಧ್ಯತೆ ದಟ್ಟವಾಗಿದೆ ಎಂದು ರಾಜಧಾನಿ ಮೂಲಗಳಿಂದ ಗೊತ್ತಾಗಿದೆ.

ನಗರ ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷ ಗಳಿಂದ ಉಳಿದಿರುವ ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನು ವರ್ಗಾ ವಣೆ ಮಾಡಲು ಶಾಸಕರ ಅಭಿಪ್ರಾಯ ಕೇಳಿದ್ದು, ಅನೇಕರು ತಮಗೆ ಅನುಕೂಲಕರವಾದ ಠಾಣೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಬರಲು ಪ್ರಭಾವಿಗಳು ಶಿಫಾರಸ್ಸು ಮಾಡಿಸುತ್ತಿದ್ದಾರೆ ಎನ್ನಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೆಶನಾಲಯದ ಎಸ್‌ ಪಿ ಬಿ.ಟಿ.ಕವಿತಾ ಅವರನ್ನು ಚಾಮರಾಜನಗರಕ್ಕೆ ವರ್ಗಾ ಯಿಸಿದ್ದರಿಂದ ಸ್ಥಾನ ತೆರವಾದರೆ, ಕರ್ನಾಟಕ ರಾಜ್ಯ ಬುಡಕಟ್ಟು ಅಧ್ಯಯನ ಸಂಸ್ಥೆ ನಿರ್ದೇಶಕ ಬಿ.ಶ್ರೀನಿವಾಸ್ ಅವರನ್ನು ವರ್ಗಾಯಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಜಕುಮಾರ್ ಅವರಿಗೆ ಪ್ರಭಾರ ಅಧಿಕಾರ ವಹಿಸಿರುವುದರಿಂದ ಸರ್ಕಾರ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ.

ಜಿ.ಲಕ್ಷ್ಮೀಕಾಂತ್ ರೆಡ್ಡಿ ನೇಮಕದಲ್ಲಿ ಸಿಎಂ ಒಲವು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನಾಗಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಿಸಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಲವಿತ್ತು ಎಂದು ಮೂಲಗಳು ಹೇಳಿವೆ. ಕೆ.ದಯಾನಂದ ಅಥವಾ ಪಂಜಾಬ್, ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಗಳನ್ನು ನೇಮಿಸುವ ಕುರಿತು ಸಲಹೆ ಬಂದಿತ್ತು. ಆದರೆ, ನಗರಪಾಲಿಕೆಯಲ್ಲಿ ಉತ್ತಮ ಕೆಲಸ ಮಾಡಿದ ಬಗ್ಗೆ ಸಿಎಂಗೆ ಮಾಹಿತಿ ಹೋಗಿದ್ದರಿಂದಾಗಿ ಡಿಸಿಯಾಗಿ ನಿಯೋಜನೆಗೊಳ್ಳಲು ಕಾರಣವಾಯಿತು ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

5 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

6 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

6 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

7 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

7 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

8 hours ago