Andolana originals

ಸಿಎಂ ತವರಲ್ಲಿ ಹೊಸ ಅಧಿಕಾರಿಗಳ ಕಾರ್ಯಭಾರ

ಕೆ.ಬಿ.ರಮೇಶನಾಯಕ

ಮೈಸೂರು: ಲೋಕಸಭಾ ಚುನಾವಣೆಯ ನಂತರ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿ ಹೊಸ ಅಧಿಕಾರಿಗಳ ತಂಡ ಕಾರ್ಯಭಾರ ಶುರು ಮಾಡಿದೆ.

ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರನ್ನೂ ಬದಲಿಸುವ ಮೂಲಕ ಆಡಳಿತ ಯಂತ್ರಕ್ಕೆ ದೊಡ್ಡ ಮಟ್ಟದಲ್ಲಿ ಬದಲಾವಣೆ ತಂದು ಚುರುಕು ಮುಟ್ಟಿಸಿದೆ.

ಯಾವುದೇ ಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ನಗರಪಾಲಿಕೆ, ನಗರ ಸಹಾಯಕ ಪೊಲೀಸ್ ಆಯುಕ್ತರು ಮತ್ತಿತರ ಅಧಿಕಾರಿ ಗಳನ್ನೂ ವರ್ಗಾಯಿಸುವ ಕುರಿತು ಚರ್ಚೆ ನಡೆಯುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯ ಹೊತ್ತಿಗೆ ಆಡಳಿತ ಯಂತ್ರ ಮತ್ತಷ್ಟು ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು
ಹೇಳಲಾಗಿದೆ.

ರಾಜ್ಯದ ರಾಜ್ಯಧಾನಿ ಬೆಂಗಳೂರಿನನಂತರ ಮೈಸೂರು ರಾಜಕೀಯ ಮತ್ತು ಆಡಳಿತಾತ್ಮಕವಾಗಿ ಗಮನ ಸೆಳೆದಿರುವ ಜಿಲ್ಲೆಯಾಗಿದ್ದು, ಮುಡಾದಲ್ಲಿ ನಡೆದಿರುವ ಭೂ ಹಂಚಿಕೆ ಹಗರಣ ಬೆಳಕಿಗೆ ಬಂದ ಮೇಲೆ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿದೆ.

ಶೇ.50:50 ನಿವೇಶನ ಹಂಚಿಕೆ ಪ್ರಕರಣದಲ್ಲಿ ಕಾನೂನು ಬಾಹಿರ ತೀರ್ಮಾನ ಮಾಡಿರುವ ಕುರಿತು ರಾಜಕೀಯ ಪಕ್ಷಗಳ ನಡುವೆ ಕೆಸರೆರಚಾಟ ಶುರುವಾಗುತ್ತಿದ್ದಂತೆ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯ ದರ್ಶಿ ಜಿ.ಡಿ.ಶೇಖರ್ ಅವರನ್ನು ವರ್ಗಾಯಿಸಿ, ಮುಡಾ ಆಯುಕ್ತರನ್ನಾಗಿ ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯ ದರ್ಶಿಯಾಗಿದ್ದ ಎ.ಎನ್.ರಘುನಂದನ್, ಕಾರ್ಯದರ್ಶಿ ಸ್ಥಾನಕ್ಕೆ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರಾಗಿದ್ದ ವಿ.ಕೆ.ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಲಾಯಿತು. ಇದೀಗ ಮುಡಾದಲ್ಲಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯು ತ್ತಿರುವ ಕಾರಣ ಈ ಅಧಿಕಾರಿಗಳು ಕಚೇರಿಯಲ್ಲೇ ಮೊಕ್ಕಾಂ ಹೂಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಾ ಲಾಟ್ಕರ್ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ, ಹಾಲಿ ಆಯುಕ್ತರಾಗಿದ್ದ ಬಿ.ರಮೇಶ್ ಅವರನ್ನು ದಾವಣಗೆರೆ ಕೇಂದ್ರ ವಲಯ ಐಜಿಪಿಯನ್ನಾಗಿ ನಿಯೋಜಿಸಲಾಗಿದೆ. ಈ ಮೊದಲೇ ಮೈಸೂರು ನಗರದ ಸಂಚಾರ ವಿಭಾಗದ ಎಸಿಪಿ, ಕೆ.ಆರ್. ವಿಭಾಗದ ಎಸಿಪಿ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದ ಎನ್. ವಿಷ್ಣುವರ್ಧನ್ ಅವರನ್ನು ಮೈಸೂರು ಎಸ್‌ಪಿ ಜಾಗಕ್ಕೆ ನಿಯೋಜಿಸುವ ಮೂಲಕ ಮೇಜರ್ ಸರ್ಜರಿ ಮಾಡಲಾಗಿದೆ.

ಜಿಪಂ ಸಿಇಒ ಕೆ.ಎಂ.ಗಾಯತ್ರಿ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಲೋಕ ಸಭಾ ಚುನಾವಣೆಗೂ ಮುನ್ನವೇ ವರ್ಗಾವಣೆ ಮಾಡುವ ಮಾತು ಕೇಳಿ ಬಂದಿತ್ತಾದರೂ ಕೋರಿಕೆ ಮೇರೆಗೆ ಮುಂದುವರಿಸ ಲಾಗಿತ್ತು. ಆದರೆ, ವರ್ಗಾವಣೆ ಸಾಧ್ಯತೆ ದಟ್ಟವಾಗಿದೆ ಎಂದು ರಾಜಧಾನಿ ಮೂಲಗಳಿಂದ ಗೊತ್ತಾಗಿದೆ.

ನಗರ ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷ ಗಳಿಂದ ಉಳಿದಿರುವ ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನು ವರ್ಗಾ ವಣೆ ಮಾಡಲು ಶಾಸಕರ ಅಭಿಪ್ರಾಯ ಕೇಳಿದ್ದು, ಅನೇಕರು ತಮಗೆ ಅನುಕೂಲಕರವಾದ ಠಾಣೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ಬರಲು ಪ್ರಭಾವಿಗಳು ಶಿಫಾರಸ್ಸು ಮಾಡಿಸುತ್ತಿದ್ದಾರೆ ಎನ್ನಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೆಶನಾಲಯದ ಎಸ್‌ ಪಿ ಬಿ.ಟಿ.ಕವಿತಾ ಅವರನ್ನು ಚಾಮರಾಜನಗರಕ್ಕೆ ವರ್ಗಾ ಯಿಸಿದ್ದರಿಂದ ಸ್ಥಾನ ತೆರವಾದರೆ, ಕರ್ನಾಟಕ ರಾಜ್ಯ ಬುಡಕಟ್ಟು ಅಧ್ಯಯನ ಸಂಸ್ಥೆ ನಿರ್ದೇಶಕ ಬಿ.ಶ್ರೀನಿವಾಸ್ ಅವರನ್ನು ವರ್ಗಾಯಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಜಕುಮಾರ್ ಅವರಿಗೆ ಪ್ರಭಾರ ಅಧಿಕಾರ ವಹಿಸಿರುವುದರಿಂದ ಸರ್ಕಾರ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ.

ಜಿ.ಲಕ್ಷ್ಮೀಕಾಂತ್ ರೆಡ್ಡಿ ನೇಮಕದಲ್ಲಿ ಸಿಎಂ ಒಲವು: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನಾಗಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಿಸಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಲವಿತ್ತು ಎಂದು ಮೂಲಗಳು ಹೇಳಿವೆ. ಕೆ.ದಯಾನಂದ ಅಥವಾ ಪಂಜಾಬ್, ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಗಳನ್ನು ನೇಮಿಸುವ ಕುರಿತು ಸಲಹೆ ಬಂದಿತ್ತು. ಆದರೆ, ನಗರಪಾಲಿಕೆಯಲ್ಲಿ ಉತ್ತಮ ಕೆಲಸ ಮಾಡಿದ ಬಗ್ಗೆ ಸಿಎಂಗೆ ಮಾಹಿತಿ ಹೋಗಿದ್ದರಿಂದಾಗಿ ಡಿಸಿಯಾಗಿ ನಿಯೋಜನೆಗೊಳ್ಳಲು ಕಾರಣವಾಯಿತು ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

2 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

2 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

2 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

2 hours ago

ಪುಟ್ಟರಂಗಶೆಟ್ಟಿ, ಎಆರ್‌ಕೆ: ಯಾರಿಗೆ ಮಂತ್ರಿ ಭಾಗ್ಯ?

ರಾಜೇಶ್ ಬೆಂಡರವಾಡಿ ಯಾರೂ ಹೆಚ್ಚು, ಯಾರೂ ಕಮ್ಮಿ ಇಲ್ಲ ಎಂಬಂತೆ ಚಾ.ನಗರದ ಈ ಇಬ್ಬರ ಹೆಸರು ಹೈಕಮಾಂಡ್ ಅಂಗಳದಲ್ಲಿ ಚಾಮರಾಜನಗರ:…

3 hours ago