Andolana originals

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ

ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು

ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ತಾಲ್ಲೂಕಿನಲ್ಲಿ ಯಾವ ಜನಪ್ರತಿನಿಧಿ ಮತ್ತು ಅಧಿಕಾರಿಗಳು ಕೆಲಸ ನಿರ್ವಹಿಸಿದರೂ ಸಮಾಜದ ಕಟ್ಟಕಡೆಯ ಆದಿವಾಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವುದಕ್ಕೆ ಗೂಳೂರು ಹಾಡಿಯ ಗಿರಿಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಸಾಕ್ಷಿಯಾಗಿದೆ.

ತಾಲ್ಲೂಕಿನ ನಾಗರಹೊಳೆ, ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಗೂಳೂರು ಹಾಡಿಯ ಆದಿವಾಸಿ ಜನರು ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಅದರಲ್ಲೂ ಕುಡಿಯುವ ನೀರಿನ ಸಮಸ್ಯೆ ನಿರಂತರವಾಗಿದ್ದು, ಆದಿವಾಸಿಗಳು ನೀರಿಗಾಗಿ ಅವರೇ ಗುಂಡಿ ತೆಗೆದು ಅದರಲ್ಲಿ ಸಿಗುವ ಕಲುಷಿತ ನೀರನ್ನು ಸೇವನೆ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.

ತಾಲ್ಲೂಕಿನಲ್ಲಿ ೧೧೮ ಗಿರಿಜನ ಹಾಡಿಗಳು ಇದ್ದು, ಅವರಿಗೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಹಲವಾರು ಯೋಜನೆಗಳ ಮೂಲಕ ಪ್ರತಿವರ್ಷ ಕೋಟ್ಯಂತರ ರೂ. ಅನುದಾನ ಬಂದರೂ ಹಾಡಿ ಜನರಿಗೆ ಮೂಲಸೌಕರ್ಯ ಮಾತ್ರ ಸಮರ್ಪಕವಾಗಿ ದೊರೆಯದಿರುವುದು ವಿಷಾದನೀಯ.

ಗೂಳೂರು ಗಿರಿಜನ ಹಾಡಿಯಲ್ಲಿ ಸುಮಾರು ೧೨೦ ಕುಟುಂಬಗಳು ಹಲವಾರು ದಶಕಗಳಿಂದ ವಾಸವಾಗಿದ್ದು, ಇಲ್ಲಿನ ಜನರು ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕದೆ ಕಂಗಾಲಾಗಿದ್ದಾರೆ.

ಕಳೆದ ೨ ತಿಂಗಳಿನಿಂದ ಹಾಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಇಲ್ಲಿನ ಆದಿವಾಸಿ ಜನರು ಸಮೀಪದ ಕಾಡಿನ ಬಳಿ ಇರುವ ಹಳ್ಳಗಳಲ್ಲಿ ವನ್ಯಪ್ರಾಣಿಗಳು ಕುಡಿಯುವ ನೀರನ್ನು ಶೇಖರಿಸಿ ತರುವ ಪರಿಸ್ಥಿತಿ ಎದುರಾಗಿದೆ. ಬಿಸಿಲಿನ ತಾಪಮಾನಕ್ಕೆ ಆ ಗುಂಡಿಯಲ್ಲಿದ್ದ ನೀರು ಕೂಡ ಬತ್ತಿ ಹೋಗಿದ್ದರಿಂದ ಗಿರಿಜನರೇ ಚಿಕ್ಕದಾಗಿ ಬಾವಿ ತೆಗೆದು ಅಲ್ಲಿ ಸಿಗುವ ಕಲುಷಿತ ನೀರನ್ನೇ ಬಳಸುವಂತಾಗಿದೆ.

ಇದರಿಂದಾಗಿ ಮಹಿಳೆಯರು, ವೃದ್ಧರು, ಚಿಕ್ಕಮಕ್ಕಳು ಇಲ್ಲಿನ ಅಧಿಕಾರಿ ವರ್ಗ, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಿರಿಜನರ ಅಭಿವೃದ್ಧಿಗೆ ಬರುತ್ತಿರುವ ಕೋಟ್ಯಂತರ ರೂ. ಅನುದಾನದಲ್ಲಿ ಈ ಕ್ಷೇತ್ರದಲ್ಲಿರುವ ಪ್ರತಿಯೊಂದು ಹಾಡಿಯೂ ಅಭಿವೃದ್ಧಿಯತ್ತ ಸಾಗಬೇಕಿತ್ತು. ಆದರೆ, ಹಾಡಿಗಳು ಸೌಕರ್ಯವಂಚಿತವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಅಧಿಕಾರಿ ವರ್ಗದವರು ಅರಣ್ಯ ಇಲಾಖೆಯವರು ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಸಮಸ್ಯೆಗಳನ್ನು ಜೀವಂತವಾಗಿ ಉಳಿಸಿಕೊಂಡು ಹೋಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇತ್ತ ಆದಿವಾಸಿ ಜನರು ಕುಡಿಯುವ ನೀರಿಗಾಗಿ ಹಗಲಿರುಳು ಎನ್ನದೆ ಪ್ರಾಣ ಭೀತಿಯಿಂದ ಅರಣ್ಯದಲ್ಲಿ ಕಲುಷಿತ ನೀರು ಕುಡಿಯುವ ಪರಿಸ್ಥಿತಿ ಉದ್ಭವಿಸಿದೆ. ಸಂಬಂಧಪಟ್ಟ ಅಽಕಾರಿಗಳು, ಜನಪ್ರತಿನಿಧಿಗಳು ಈಗಲಾದರೂ ನೊಂದ ಆದಿವಾಸಿ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು

” ಗೂಳೂರು ಹಾಡಿಯಲ್ಲಿ ಅಂತರ್ಜಲ ಕುಸಿದಿರುವುದರಿಂದ ನೀರಿನ ಸಮಸ್ಯೆ ಎದುರಾಗಿದೆ. ಇಲ್ಲಿಗೆ ಪರ್ಯಾಯವಾದ ಮಾರ್ಗದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲು ಬೋರ್‌ವೆಲ್ ಕೊರೆಸಲು ಅರಣ್ಯ ಇಲಾಖೆಯವರು ಅವಕಾಶ ಕೊಡುತ್ತಿಲ್ಲ. ಅರಣ್ಯ ಇಲಾಖೆಯವರಿಗೆ ಮತ್ತು ಸರ್ಕಾರಕ್ಕೆ ಅನೇಕ ಬಾರಿ ಪತ್ರ ಬರೆದರೂ ಅನುಮತಿ ನೀಡುತ್ತಿಲ್ಲ. ಈಗ ಟ್ಯಾಂಕರ್ ಮೂಲಕ ನೀರು ಪೂರೈಸಲು ಮುಂದಾಗಿದ್ದೇವೆ.”

-ಸ್ವಾಮಿ, ಪಿಡಿಒ, ಡಿ.ಬಿ.ಕುಪ್ಪೆ ಗ್ರಾಪಂ

” ಆದಿವಾಸಿ ಜನರಿಗೆ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ಗೂಳೂರಿನ ಆದಿವಾಸಿ ಜನರು ನೀರಿಗಾಗಿ ಪ್ರತಿ ವರ್ಷವೂ ನರಕಯಾತನೆ ಪಡುವಂತಾಗಿದೆ. ಸಚಿವರು, ಶಾಸಕರು, ಅಧಿಕಾರಿಗಳು ಇದೇ ಹಾಡಿಯಲ್ಲಿ ಹಿಂದೆ ವಾಸ್ತವ್ಯ ಹೂಡಿದ್ದರೂ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿಲ್ಲ.:

-ಪುಟ್ಟಬಸವ, ಗಿರಿಜನ ಮುಖಂಡ

 

 

 

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

7 mins ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

28 mins ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

29 mins ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

1 hour ago

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…

1 hour ago

ಎಚ್ಚರಿಕೆಯ ಘಂಟೆ ಬಾರಿಸಿದ ಅಕಾಲಿಕ ಮಳೆ

ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…

2 hours ago