Andolana originals

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್

ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ

ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು ಅನಾರೋಗ್ಯಕ್ಕೀಡಾದಲ್ಲಿ ತಕ್ಷಣವೇ ಅವುಗಳಿಗೆ ಚಿಕಿತ್ಸೆ ನೀಡಿ ಪಾಲನೆ ಮಾಡಬೇಕಾದ ಪಶು ಸಂಗೋಪನಾ ಇಲಾಖೆಯ ಮೈಸೂರು ಜಿಲ್ಲೆಯಲ್ಲಿ ೨೭ ವೈದ್ಯರ ಹುದ್ದೆಗಳು ಖಾಲಿ ಇವೆ.

ಸಾಕಷ್ಟು ಇಲಾಖೆಯಲ್ಲಿ ಇಂದು ಅಧಿಕಾರಿಗಳು ಹಾಗೂ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಬಹಳಷ್ಟು ವರ್ಷಗಳಿಂದ ಹುದ್ದೆಗಳಿಗೆ ನೇಮಕಾತಿ ಕೂಡ ಆಗಿಲ್ಲ. ಇದಕ್ಕೆ ಪಶು ಸಂಗೋಪನಾ ಇಲಾಖೆ ಕೂಡ ಹೊರತಲ್ಲ. ಮೈಸೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳಲ್ಲಿ ಪಶು ಆಸ್ಪತ್ರೆ, ಪಶು ಚಿಕಿತ್ಸಾ ಕೇಂದ್ರ, ಪ್ರಾಥಮಿಕ ಪಶು ಆರೋಗ್ಯ ಕೇಂದ್ರ ಸೇರಿದಂತೆ ಒಟ್ಟು ೨೦೫ ಕೇಂದ್ರಗಳಿವೆ.

ಇದರ ಜೊತೆಗೆ ಸ್ಪೆಷಾಲಿಟ ಆಸ್ಪತ್ರೆ ಕೂಡ ಇದೆ. ಆದರೆ, ಹಲವು ಕೇಂದ್ರಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಅಂಕಿ-ಅಂಶಗಳ ಪ್ರಕಾರ ೫,೦೦೦ ಪ್ರಾಣಿಗಳಿಗೆ ಓರ್ವ ಪಶು ವೈದ್ಯರಿರಬೇಕು ಎಂದು ನಿಯಮ ಹೇಳುತ್ತದೆ. ಆದರೆ, ಅಗತ್ಯವಿರುವಷ್ಟು ವೈದ್ಯರು ಜಿಲ್ಲೆಯಲ್ಲಿ ಇಲ್ಲ. ಇದರಿಂದ ಸಂಕಷ್ಟಕ್ಕೆ ಒಳಗಾಗುವವರು ಮಾತ್ರ ರೈತರು.

ಮೈಸೂರು ಜಿಲ್ಲೆಗೆ ೧೩೯ ಪಶು ವೈದ್ಯರ ಹುದ್ದೆಗಳು ಮಂಜೂರಾಗಿವೆ. ಆದರೆ, ೧೦೨ ಮಂದಿ ವೈದ್ಯರ ನೇಮಕಾತಿ ಮಾತ್ರ ಆಗಿದೆ. ಇದರ ಜೊತೆಗೆ ೧೦ ಮಂದಿ ವೈದ್ಯರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಆದರೂ, ೨೭ ಮಂದಿ ವೈದ್ಯರ ಹುದ್ದೆಗಳು ಖಾಲಿ ಇವೆ.

ಜಿಲ್ಲೆಯಲ್ಲಿ ಮೈಸೂರು, ನಂಜನಗೂಡು, ಕೆ.ಆರ್.ನಗರ, ಹುಣಸೂರು ಸೇರಿದಂತೆ ಒಟ್ಟು ಒಂಬತ್ತು ತಾಲ್ಲೂಕುಗಳಲ್ಲಿ ೯,೩೩,೨೯೮ ಪಶುಗಳಿವೆ. ಅವುಗಳಲ್ಲಿ ೪,೯೨,೫೮೯ ಹಸುಗಳು, ೨೧,೬೮೨ ಎಮ್ಮೆಗಳು, ೨,೦೩,೪೬೩ ಕುರಿಗಳು, ೨,೦೮,೨೦೬ ಮೇಕೆಗಳು ಹಾಗೂ ೭,೩೪೯ ಹಂದಿಗಳು ಇವೆ.

ಇವುಗಳಲ್ಲಿ ಅನಾರೋಗ್ಯಕ್ಕೀಡಾಗುವ ಪ್ರಾಣಿಗಳನ್ನು ರೈತರು ಪಶು ಆಸ್ಪತ್ರೆಗಳಿಗೆ ತರುವುದು ವಾಡಿಕೆ. ಆದರೆ, ವೈದ್ಯರ ಕೊರತೆ ಕಾರಣದಿಂದಾಗಿ ರೈತರಿಗೆ ತೊಂದರೆ ಎದುರಾಗಿದೆ. ಅದರಲ್ಲಿಯೂ ವೈದ್ಯರುಗಳು ರಜೆ ಮೇಲೆ ತೆರಳಿದಲ್ಲಿ ಅನ್ಯಮಾರ್ಗವಿಲ್ಲದೆ ವೈದ್ಯರಲ್ಲದ ಅಲ್ಲಿನ ಸಿಬ್ಬಂದಿಗಳೇ ಪಶುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದಲ್ಲದೆ, ತಾಂತ್ರಿಕ ಸಿಬ್ಬಂದಿ, ವಾಹನ ಚಾಲಕರು, ಡಿ ದರ್ಜೆ ನೌಕರರೂ ಸೇರಿದಂತೆ ಒಟ್ಟು ೧೬೮ ಹುದ್ದೆಗಳು ಖಾಲಿ ಇವೆ. ಆದರೆ, ಡಿ ದರ್ಜೆ ನೌಕರರಾಗಿ ೨೩೦ ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿರುವುದು ಸಮಾಧಾನಕರ ಸಂಗತಿ. ಪಶುಗಳಿಗೆ ಚಿಕಿತ್ಸೆ ನೀಡಬೇಕಾದಲ್ಲಿ ಅವರುಗಳ ಅವಶ್ಯಕತೆ ಹೆಚ್ಚು ಇರುತ್ತದೆ. ಇನ್ನು ೬ ಮಂದಿ ವಾಹನ ಚಾಲಕರು ಕೂಡ ಹೊರ ಗುತ್ತಿಗೆ ನೌಕರರು.

ಪಸು ಸಂಗೋಪನಾ ಇಲಾಖೆಗೆ ತನ್ನದೇ ಆದ ಕರ್ತವ್ಯಗಳಿವೆ. ಹೈನುಗಾರಿಕೆ, ಕುರಿ ಸಾಕಣೆ ಸೇರಿದಂತೆ ರೈತರು ಕೃಷಿಯ ಜೊತೆಗೆ ಪ್ರಾಣಿಗಳ ಸಾಕಾಣಿಕೆಯಲ್ಲಿ ಜೀವನ ಕಂಡುಕೊಂಡಿದ್ದಾರೆ. ಹೀಗಾಗಿ, ಸರ್ಕಾರ ಕೂಡಲೇ ಖಾಲಿ ಹುದ್ದೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು ಎಂಬುದು ರೈತರ ಒತ್ತಾಯವಾಗಿದೆ.

” ಮೈಸೂರು ಜಿಲ್ಲೆಯಲ್ಲಿ ಪಶು ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇರುವುದು ನಿಜ. ಆದರೆ, ಅತೀ ಶೀಘ್ರದಲ್ಲಿ ಸರ್ಕಾರ ವೈದ್ಯರ ಹುದ್ದೆಗಳಿಗೆ ನೇಮಕಾತಿ ಮಾಡಲಿದೆ. ಇನ್ನು ಜಿಲ್ಲೆಯಲ್ಲಿ ಡಿ ಗ್ರೂಪ್ ನೌಕರರ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ಸಂಪೂರ್ಣವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಅಷ್ಟಾಗಿ ಸಮಸ್ಯೆ ಎದುರಾಗಿಲ್ಲ.”

-ಸಿ. ನಾಗರಾಜು, ಉಪನಿರ್ದೇಶಕರು, ಪಶುಸಂಗೋಪನಾ ಇಲಾಖೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

41 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

44 mins ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

50 mins ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

54 mins ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

59 mins ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

1 hour ago