Andolana originals

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್

ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ

ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು ಅನಾರೋಗ್ಯಕ್ಕೀಡಾದಲ್ಲಿ ತಕ್ಷಣವೇ ಅವುಗಳಿಗೆ ಚಿಕಿತ್ಸೆ ನೀಡಿ ಪಾಲನೆ ಮಾಡಬೇಕಾದ ಪಶು ಸಂಗೋಪನಾ ಇಲಾಖೆಯ ಮೈಸೂರು ಜಿಲ್ಲೆಯಲ್ಲಿ ೨೭ ವೈದ್ಯರ ಹುದ್ದೆಗಳು ಖಾಲಿ ಇವೆ.

ಸಾಕಷ್ಟು ಇಲಾಖೆಯಲ್ಲಿ ಇಂದು ಅಧಿಕಾರಿಗಳು ಹಾಗೂ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಬಹಳಷ್ಟು ವರ್ಷಗಳಿಂದ ಹುದ್ದೆಗಳಿಗೆ ನೇಮಕಾತಿ ಕೂಡ ಆಗಿಲ್ಲ. ಇದಕ್ಕೆ ಪಶು ಸಂಗೋಪನಾ ಇಲಾಖೆ ಕೂಡ ಹೊರತಲ್ಲ. ಮೈಸೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳಲ್ಲಿ ಪಶು ಆಸ್ಪತ್ರೆ, ಪಶು ಚಿಕಿತ್ಸಾ ಕೇಂದ್ರ, ಪ್ರಾಥಮಿಕ ಪಶು ಆರೋಗ್ಯ ಕೇಂದ್ರ ಸೇರಿದಂತೆ ಒಟ್ಟು ೨೦೫ ಕೇಂದ್ರಗಳಿವೆ.

ಇದರ ಜೊತೆಗೆ ಸ್ಪೆಷಾಲಿಟ ಆಸ್ಪತ್ರೆ ಕೂಡ ಇದೆ. ಆದರೆ, ಹಲವು ಕೇಂದ್ರಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಅಂಕಿ-ಅಂಶಗಳ ಪ್ರಕಾರ ೫,೦೦೦ ಪ್ರಾಣಿಗಳಿಗೆ ಓರ್ವ ಪಶು ವೈದ್ಯರಿರಬೇಕು ಎಂದು ನಿಯಮ ಹೇಳುತ್ತದೆ. ಆದರೆ, ಅಗತ್ಯವಿರುವಷ್ಟು ವೈದ್ಯರು ಜಿಲ್ಲೆಯಲ್ಲಿ ಇಲ್ಲ. ಇದರಿಂದ ಸಂಕಷ್ಟಕ್ಕೆ ಒಳಗಾಗುವವರು ಮಾತ್ರ ರೈತರು.

ಮೈಸೂರು ಜಿಲ್ಲೆಗೆ ೧೩೯ ಪಶು ವೈದ್ಯರ ಹುದ್ದೆಗಳು ಮಂಜೂರಾಗಿವೆ. ಆದರೆ, ೧೦೨ ಮಂದಿ ವೈದ್ಯರ ನೇಮಕಾತಿ ಮಾತ್ರ ಆಗಿದೆ. ಇದರ ಜೊತೆಗೆ ೧೦ ಮಂದಿ ವೈದ್ಯರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಆದರೂ, ೨೭ ಮಂದಿ ವೈದ್ಯರ ಹುದ್ದೆಗಳು ಖಾಲಿ ಇವೆ.

ಜಿಲ್ಲೆಯಲ್ಲಿ ಮೈಸೂರು, ನಂಜನಗೂಡು, ಕೆ.ಆರ್.ನಗರ, ಹುಣಸೂರು ಸೇರಿದಂತೆ ಒಟ್ಟು ಒಂಬತ್ತು ತಾಲ್ಲೂಕುಗಳಲ್ಲಿ ೯,೩೩,೨೯೮ ಪಶುಗಳಿವೆ. ಅವುಗಳಲ್ಲಿ ೪,೯೨,೫೮೯ ಹಸುಗಳು, ೨೧,೬೮೨ ಎಮ್ಮೆಗಳು, ೨,೦೩,೪೬೩ ಕುರಿಗಳು, ೨,೦೮,೨೦೬ ಮೇಕೆಗಳು ಹಾಗೂ ೭,೩೪೯ ಹಂದಿಗಳು ಇವೆ.

ಇವುಗಳಲ್ಲಿ ಅನಾರೋಗ್ಯಕ್ಕೀಡಾಗುವ ಪ್ರಾಣಿಗಳನ್ನು ರೈತರು ಪಶು ಆಸ್ಪತ್ರೆಗಳಿಗೆ ತರುವುದು ವಾಡಿಕೆ. ಆದರೆ, ವೈದ್ಯರ ಕೊರತೆ ಕಾರಣದಿಂದಾಗಿ ರೈತರಿಗೆ ತೊಂದರೆ ಎದುರಾಗಿದೆ. ಅದರಲ್ಲಿಯೂ ವೈದ್ಯರುಗಳು ರಜೆ ಮೇಲೆ ತೆರಳಿದಲ್ಲಿ ಅನ್ಯಮಾರ್ಗವಿಲ್ಲದೆ ವೈದ್ಯರಲ್ಲದ ಅಲ್ಲಿನ ಸಿಬ್ಬಂದಿಗಳೇ ಪಶುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದಲ್ಲದೆ, ತಾಂತ್ರಿಕ ಸಿಬ್ಬಂದಿ, ವಾಹನ ಚಾಲಕರು, ಡಿ ದರ್ಜೆ ನೌಕರರೂ ಸೇರಿದಂತೆ ಒಟ್ಟು ೧೬೮ ಹುದ್ದೆಗಳು ಖಾಲಿ ಇವೆ. ಆದರೆ, ಡಿ ದರ್ಜೆ ನೌಕರರಾಗಿ ೨೩೦ ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿರುವುದು ಸಮಾಧಾನಕರ ಸಂಗತಿ. ಪಶುಗಳಿಗೆ ಚಿಕಿತ್ಸೆ ನೀಡಬೇಕಾದಲ್ಲಿ ಅವರುಗಳ ಅವಶ್ಯಕತೆ ಹೆಚ್ಚು ಇರುತ್ತದೆ. ಇನ್ನು ೬ ಮಂದಿ ವಾಹನ ಚಾಲಕರು ಕೂಡ ಹೊರ ಗುತ್ತಿಗೆ ನೌಕರರು.

ಪಸು ಸಂಗೋಪನಾ ಇಲಾಖೆಗೆ ತನ್ನದೇ ಆದ ಕರ್ತವ್ಯಗಳಿವೆ. ಹೈನುಗಾರಿಕೆ, ಕುರಿ ಸಾಕಣೆ ಸೇರಿದಂತೆ ರೈತರು ಕೃಷಿಯ ಜೊತೆಗೆ ಪ್ರಾಣಿಗಳ ಸಾಕಾಣಿಕೆಯಲ್ಲಿ ಜೀವನ ಕಂಡುಕೊಂಡಿದ್ದಾರೆ. ಹೀಗಾಗಿ, ಸರ್ಕಾರ ಕೂಡಲೇ ಖಾಲಿ ಹುದ್ದೆಗಳಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕು ಎಂಬುದು ರೈತರ ಒತ್ತಾಯವಾಗಿದೆ.

” ಮೈಸೂರು ಜಿಲ್ಲೆಯಲ್ಲಿ ಪಶು ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇರುವುದು ನಿಜ. ಆದರೆ, ಅತೀ ಶೀಘ್ರದಲ್ಲಿ ಸರ್ಕಾರ ವೈದ್ಯರ ಹುದ್ದೆಗಳಿಗೆ ನೇಮಕಾತಿ ಮಾಡಲಿದೆ. ಇನ್ನು ಜಿಲ್ಲೆಯಲ್ಲಿ ಡಿ ಗ್ರೂಪ್ ನೌಕರರ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ಸಂಪೂರ್ಣವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಅಷ್ಟಾಗಿ ಸಮಸ್ಯೆ ಎದುರಾಗಿಲ್ಲ.”

-ಸಿ. ನಾಗರಾಜು, ಉಪನಿರ್ದೇಶಕರು, ಪಶುಸಂಗೋಪನಾ ಇಲಾಖೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

2 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

3 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

3 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

3 hours ago