Andolana originals

ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು ಬಿಸಿಲಿನ ತಾಪ ಏರುತ್ತಿದೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಕಾಡುವ ಸಾಧ್ಯತೆ ಇರುತ್ತದೆ. ಆದರೆ, ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಸಾಕಷ್ಟು ಸುರಿದಿದ್ದರಿಂದ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ.

ರೈತರ ಬಳಿಯೇ ೩೮ ವಾರಗಳ ಕಾಲ (ನವೆಂಬರ್‌ನಿಂದ ಜೂನ್ ತನಕ) ಜಾನುವಾರುಗಳಿಗೆ ಬೇಕಾಗುವಷ್ಟು ಮೇವು ದಾಸ್ತಾನಿದೆ. ಬಿಳಿಜೋಳ ಮತ್ತು ಮುಸುಕಿನ ಜೋಳದ ಒಣ ಕಡ್ಡಿ, ನೆಲಗಡಲೆ ಹಾಗೂ ಹುರುಳಿಯ ಒಣ ಸೊಪ್ಪು, ಭತ್ತ, ರಾಗಿ ಹುಲ್ಲು, ದ್ವಿದಳ ಧಾನ್ಯಗಳ ಹೊಟ್ಟನ್ನು ರೈತರು ಸಂಗ್ರಹ ಮಾಡಿ ಬಣವೆ ಮಾಡಿಕೊಂಡಿದ್ದಾರೆ.

ಇದಲ್ಲದೆ ಕೃಷಿ ಪಂಪ್‌ಸೆಟ್ ಜಮೀನುಗಳ ಬದುಗಳಲ್ಲಿಯೂ ನೆಫಿಯರ್, ಆಫ್ರಿಕನ್ ಟಾಲ್‌ನಂತಹ ಇತರೆ ಹಸಿರು ಮೇವು ಬೆಳೆಯಲಾಗುತ್ತಿದೆ. ಪಶುಪಾಲನೆ ಇಲಾಖೆಯು ಮೇವು ಬೆಳೆಯಲು ನೀರಾವರಿ ಇರುವ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಿದೆ.

ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿ ಪ್ರಕಾರ ಒಟ್ಟು ೨,೫೯,೨೭೯ ದನ, ಕರು, ಎಮ್ಮೆಗಳಿವೆ. ಒಟ್ಟು ೨,೭೮,೧೯೯ ಕುರಿ, ಮೇಕೆಗಳು ಇವೆ. ಈ ಎಲ್ಲಾ ರಾಸುಗಳಿಗೆ ಜಿಲ್ಲೆಯಲ್ಲಿ ಒಟ್ಟು ೩೮ ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ.

ಈಗಾಗಲೇ ಜಿಲ್ಲಾದ್ಯಂತ ಇರುವ ೮೪ ಪಶು ಚಿಕಿತ್ಸಾಲಯಗಳ ಮೂಲಕ ೫ ಕೆ. ಜಿ. ತೂಕದ ೩ ಸಾವಿರ ಮೇವಿನ ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಪಶುಪಾಲನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯಗಳು ಹಾಗೂ ಮಲೆ ಮಹದೇಶ್ವರ ಬೆಟ್ಟ, ಕಾವೇರಿ ವನ್ಯಜೀವಿ ಧಾಮಗಳಿವೆ. ಇವುಗಳ ಅಂಚಿನಲ್ಲಿ ಇರುವ ಗ್ರಾಮಗಳಲ್ಲಿ ಜಾನುವಾರುಗಳನ್ನು ಸಾಕುವವರು ಮೇಯಲು ಕಾಡಂಚಿಗೆ ಬಿಡುತ್ತಾರೆ. ಹಾಗಾಗಿ ಈ ಹಿಂಡು ದನಗಳ ಮಾಲೀಕರು ಮೇವು ಸಂಗ್ರಹ ಮಾಡಿಲ್ಲ. ಆದರೆ, ಕಾಡಂಚಿನ ಬರಡು ಭೂಮಿಯಲ್ಲಿ ಒಣ ಮೇವು ಲಭ್ಯವಿದೆ.

ಮೇವು ಸಂರಕ್ಷಿಸಲು ಸೂಚನೆ
ಜಿಲ್ಲೆಯ ರೈತರು ತಮ್ಮ ಜಮೀನು, ಮನೆಗಳ ಬಳಿ, ಹಿತ್ತಿಲುಗಳಲ್ಲಿ ಬಣವೆಗಳ ಮೂಲಕ ಸಂಗ್ರಹಿಸಿರುವ ಭತ್ತ, ಮುಸು ಕಿನ ಜೋಳ, ಬಿಳಿಜೋಳ, ರಾಗಿ, ಕಡಲೆ ಕಾಯಿ, ಅವರೆ, ಉದ್ದು, ಅಲಸಂದೆ, ತೊಗರಿ, ಹೆಸರು ಬೇಳೆ, ಕಡಲೆಕಾಳು, ಹುರುಳಿ ಮುಂತಾದ ಬೆಳೆಗಳ ಹುಲ್ಲುಗ ಳನ್ನು ಸಂರಕ್ಷಿಸಿಕೊಳ್ಳಬೇಕು. ರೈತರು ಮೇವನ್ನು ಸುಡದೆ ಹಾಗೂ ಮಳೆ ನೀರಿ ನಿಂದ ಕೊಳೆತು ಹೋಗದಂತೆ ಎಚ್ಚರ ವಹಿಸಬೇಕು. ಪಂಪ್‌ಸೆಟ್ ನೀರಾವರಿ ಹೊಂದಿರುವ ರೈತರು ಪಶುಪಾಲನೆ ಇಲಾಖೆ ನೀಡಿರುವ ಮೇವಿನ ಬೀಜವನ್ನು ಬಿತ್ತನೆ ಮಾಡಿ ಹಸಿರು ಮೇವು ಬೆಳೆದುಕೊಳ್ಳಬೇಕು. ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಹಸಿರು ಮೇವು ಮತ್ತು ಕುಡಿಯುವ ನೀರು ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago