Andolana originals

ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು ಬಿಸಿಲಿನ ತಾಪ ಏರುತ್ತಿದೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಕಾಡುವ ಸಾಧ್ಯತೆ ಇರುತ್ತದೆ. ಆದರೆ, ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಸಾಕಷ್ಟು ಸುರಿದಿದ್ದರಿಂದ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ.

ರೈತರ ಬಳಿಯೇ ೩೮ ವಾರಗಳ ಕಾಲ (ನವೆಂಬರ್‌ನಿಂದ ಜೂನ್ ತನಕ) ಜಾನುವಾರುಗಳಿಗೆ ಬೇಕಾಗುವಷ್ಟು ಮೇವು ದಾಸ್ತಾನಿದೆ. ಬಿಳಿಜೋಳ ಮತ್ತು ಮುಸುಕಿನ ಜೋಳದ ಒಣ ಕಡ್ಡಿ, ನೆಲಗಡಲೆ ಹಾಗೂ ಹುರುಳಿಯ ಒಣ ಸೊಪ್ಪು, ಭತ್ತ, ರಾಗಿ ಹುಲ್ಲು, ದ್ವಿದಳ ಧಾನ್ಯಗಳ ಹೊಟ್ಟನ್ನು ರೈತರು ಸಂಗ್ರಹ ಮಾಡಿ ಬಣವೆ ಮಾಡಿಕೊಂಡಿದ್ದಾರೆ.

ಇದಲ್ಲದೆ ಕೃಷಿ ಪಂಪ್‌ಸೆಟ್ ಜಮೀನುಗಳ ಬದುಗಳಲ್ಲಿಯೂ ನೆಫಿಯರ್, ಆಫ್ರಿಕನ್ ಟಾಲ್‌ನಂತಹ ಇತರೆ ಹಸಿರು ಮೇವು ಬೆಳೆಯಲಾಗುತ್ತಿದೆ. ಪಶುಪಾಲನೆ ಇಲಾಖೆಯು ಮೇವು ಬೆಳೆಯಲು ನೀರಾವರಿ ಇರುವ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಿದೆ.

ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿ ಪ್ರಕಾರ ಒಟ್ಟು ೨,೫೯,೨೭೯ ದನ, ಕರು, ಎಮ್ಮೆಗಳಿವೆ. ಒಟ್ಟು ೨,೭೮,೧೯೯ ಕುರಿ, ಮೇಕೆಗಳು ಇವೆ. ಈ ಎಲ್ಲಾ ರಾಸುಗಳಿಗೆ ಜಿಲ್ಲೆಯಲ್ಲಿ ಒಟ್ಟು ೩೮ ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ.

ಈಗಾಗಲೇ ಜಿಲ್ಲಾದ್ಯಂತ ಇರುವ ೮೪ ಪಶು ಚಿಕಿತ್ಸಾಲಯಗಳ ಮೂಲಕ ೫ ಕೆ. ಜಿ. ತೂಕದ ೩ ಸಾವಿರ ಮೇವಿನ ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಪಶುಪಾಲನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯಗಳು ಹಾಗೂ ಮಲೆ ಮಹದೇಶ್ವರ ಬೆಟ್ಟ, ಕಾವೇರಿ ವನ್ಯಜೀವಿ ಧಾಮಗಳಿವೆ. ಇವುಗಳ ಅಂಚಿನಲ್ಲಿ ಇರುವ ಗ್ರಾಮಗಳಲ್ಲಿ ಜಾನುವಾರುಗಳನ್ನು ಸಾಕುವವರು ಮೇಯಲು ಕಾಡಂಚಿಗೆ ಬಿಡುತ್ತಾರೆ. ಹಾಗಾಗಿ ಈ ಹಿಂಡು ದನಗಳ ಮಾಲೀಕರು ಮೇವು ಸಂಗ್ರಹ ಮಾಡಿಲ್ಲ. ಆದರೆ, ಕಾಡಂಚಿನ ಬರಡು ಭೂಮಿಯಲ್ಲಿ ಒಣ ಮೇವು ಲಭ್ಯವಿದೆ.

ಮೇವು ಸಂರಕ್ಷಿಸಲು ಸೂಚನೆ
ಜಿಲ್ಲೆಯ ರೈತರು ತಮ್ಮ ಜಮೀನು, ಮನೆಗಳ ಬಳಿ, ಹಿತ್ತಿಲುಗಳಲ್ಲಿ ಬಣವೆಗಳ ಮೂಲಕ ಸಂಗ್ರಹಿಸಿರುವ ಭತ್ತ, ಮುಸು ಕಿನ ಜೋಳ, ಬಿಳಿಜೋಳ, ರಾಗಿ, ಕಡಲೆ ಕಾಯಿ, ಅವರೆ, ಉದ್ದು, ಅಲಸಂದೆ, ತೊಗರಿ, ಹೆಸರು ಬೇಳೆ, ಕಡಲೆಕಾಳು, ಹುರುಳಿ ಮುಂತಾದ ಬೆಳೆಗಳ ಹುಲ್ಲುಗ ಳನ್ನು ಸಂರಕ್ಷಿಸಿಕೊಳ್ಳಬೇಕು. ರೈತರು ಮೇವನ್ನು ಸುಡದೆ ಹಾಗೂ ಮಳೆ ನೀರಿ ನಿಂದ ಕೊಳೆತು ಹೋಗದಂತೆ ಎಚ್ಚರ ವಹಿಸಬೇಕು. ಪಂಪ್‌ಸೆಟ್ ನೀರಾವರಿ ಹೊಂದಿರುವ ರೈತರು ಪಶುಪಾಲನೆ ಇಲಾಖೆ ನೀಡಿರುವ ಮೇವಿನ ಬೀಜವನ್ನು ಬಿತ್ತನೆ ಮಾಡಿ ಹಸಿರು ಮೇವು ಬೆಳೆದುಕೊಳ್ಳಬೇಕು. ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಹಸಿರು ಮೇವು ಮತ್ತು ಕುಡಿಯುವ ನೀರು ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

6 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

8 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

10 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

10 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

12 hours ago