Andolana originals

ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು ಬಿಸಿಲಿನ ತಾಪ ಏರುತ್ತಿದೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಕಾಡುವ ಸಾಧ್ಯತೆ ಇರುತ್ತದೆ. ಆದರೆ, ಕಳೆದ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಸಾಕಷ್ಟು ಸುರಿದಿದ್ದರಿಂದ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ.

ರೈತರ ಬಳಿಯೇ ೩೮ ವಾರಗಳ ಕಾಲ (ನವೆಂಬರ್‌ನಿಂದ ಜೂನ್ ತನಕ) ಜಾನುವಾರುಗಳಿಗೆ ಬೇಕಾಗುವಷ್ಟು ಮೇವು ದಾಸ್ತಾನಿದೆ. ಬಿಳಿಜೋಳ ಮತ್ತು ಮುಸುಕಿನ ಜೋಳದ ಒಣ ಕಡ್ಡಿ, ನೆಲಗಡಲೆ ಹಾಗೂ ಹುರುಳಿಯ ಒಣ ಸೊಪ್ಪು, ಭತ್ತ, ರಾಗಿ ಹುಲ್ಲು, ದ್ವಿದಳ ಧಾನ್ಯಗಳ ಹೊಟ್ಟನ್ನು ರೈತರು ಸಂಗ್ರಹ ಮಾಡಿ ಬಣವೆ ಮಾಡಿಕೊಂಡಿದ್ದಾರೆ.

ಇದಲ್ಲದೆ ಕೃಷಿ ಪಂಪ್‌ಸೆಟ್ ಜಮೀನುಗಳ ಬದುಗಳಲ್ಲಿಯೂ ನೆಫಿಯರ್, ಆಫ್ರಿಕನ್ ಟಾಲ್‌ನಂತಹ ಇತರೆ ಹಸಿರು ಮೇವು ಬೆಳೆಯಲಾಗುತ್ತಿದೆ. ಪಶುಪಾಲನೆ ಇಲಾಖೆಯು ಮೇವು ಬೆಳೆಯಲು ನೀರಾವರಿ ಇರುವ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಿದೆ.

ಜಿಲ್ಲೆಯಲ್ಲಿ ೨೦ನೇ ಜಾನುವಾರು ಗಣತಿ ಪ್ರಕಾರ ಒಟ್ಟು ೨,೫೯,೨೭೯ ದನ, ಕರು, ಎಮ್ಮೆಗಳಿವೆ. ಒಟ್ಟು ೨,೭೮,೧೯೯ ಕುರಿ, ಮೇಕೆಗಳು ಇವೆ. ಈ ಎಲ್ಲಾ ರಾಸುಗಳಿಗೆ ಜಿಲ್ಲೆಯಲ್ಲಿ ಒಟ್ಟು ೩೮ ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ.

ಈಗಾಗಲೇ ಜಿಲ್ಲಾದ್ಯಂತ ಇರುವ ೮೪ ಪಶು ಚಿಕಿತ್ಸಾಲಯಗಳ ಮೂಲಕ ೫ ಕೆ. ಜಿ. ತೂಕದ ೩ ಸಾವಿರ ಮೇವಿನ ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಪಶುಪಾಲನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯಗಳು ಹಾಗೂ ಮಲೆ ಮಹದೇಶ್ವರ ಬೆಟ್ಟ, ಕಾವೇರಿ ವನ್ಯಜೀವಿ ಧಾಮಗಳಿವೆ. ಇವುಗಳ ಅಂಚಿನಲ್ಲಿ ಇರುವ ಗ್ರಾಮಗಳಲ್ಲಿ ಜಾನುವಾರುಗಳನ್ನು ಸಾಕುವವರು ಮೇಯಲು ಕಾಡಂಚಿಗೆ ಬಿಡುತ್ತಾರೆ. ಹಾಗಾಗಿ ಈ ಹಿಂಡು ದನಗಳ ಮಾಲೀಕರು ಮೇವು ಸಂಗ್ರಹ ಮಾಡಿಲ್ಲ. ಆದರೆ, ಕಾಡಂಚಿನ ಬರಡು ಭೂಮಿಯಲ್ಲಿ ಒಣ ಮೇವು ಲಭ್ಯವಿದೆ.

ಮೇವು ಸಂರಕ್ಷಿಸಲು ಸೂಚನೆ
ಜಿಲ್ಲೆಯ ರೈತರು ತಮ್ಮ ಜಮೀನು, ಮನೆಗಳ ಬಳಿ, ಹಿತ್ತಿಲುಗಳಲ್ಲಿ ಬಣವೆಗಳ ಮೂಲಕ ಸಂಗ್ರಹಿಸಿರುವ ಭತ್ತ, ಮುಸು ಕಿನ ಜೋಳ, ಬಿಳಿಜೋಳ, ರಾಗಿ, ಕಡಲೆ ಕಾಯಿ, ಅವರೆ, ಉದ್ದು, ಅಲಸಂದೆ, ತೊಗರಿ, ಹೆಸರು ಬೇಳೆ, ಕಡಲೆಕಾಳು, ಹುರುಳಿ ಮುಂತಾದ ಬೆಳೆಗಳ ಹುಲ್ಲುಗ ಳನ್ನು ಸಂರಕ್ಷಿಸಿಕೊಳ್ಳಬೇಕು. ರೈತರು ಮೇವನ್ನು ಸುಡದೆ ಹಾಗೂ ಮಳೆ ನೀರಿ ನಿಂದ ಕೊಳೆತು ಹೋಗದಂತೆ ಎಚ್ಚರ ವಹಿಸಬೇಕು. ಪಂಪ್‌ಸೆಟ್ ನೀರಾವರಿ ಹೊಂದಿರುವ ರೈತರು ಪಶುಪಾಲನೆ ಇಲಾಖೆ ನೀಡಿರುವ ಮೇವಿನ ಬೀಜವನ್ನು ಬಿತ್ತನೆ ಮಾಡಿ ಹಸಿರು ಮೇವು ಬೆಳೆದುಕೊಳ್ಳಬೇಕು. ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಹಸಿರು ಮೇವು ಮತ್ತು ಕುಡಿಯುವ ನೀರು ಪೂರೈಸಬೇಕು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

41 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

48 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago