Andolana originals

ಕೊಡಗು | ‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ

– ನವೀನ್ ಡಿಸೋಜ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜಾನುವಾರು ಗಳಿಗೆ ಪ್ರಸ್ತುತ 65 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆಯ ಅಂಕಿ- ಅಂಶಗಳ ಪ್ರಕಾರ, ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯವಿದ್ದು, ಇದು ಜಾನುವಾರು ಗಳ ಅಗತ್ಯಕ್ಕೆ ತಕ್ಕಮಟ್ಟಿಗೆ ಸಮರ್ಪಕವಾಗಿದೆ.

ಕಳೆದ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು, ಜಿಲ್ಲೆಯಾದ್ಯಂತ ನವೆಂಬರ್ ತಿಂಗಳ ವರೆಗೆ ದೀರ್ಘಾವಧಿ ಮಳೆ ಸುರಿದಿದೆ. ಇದ ರಿಂದಾಗಿ ಈ ಬಾರಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ತಲೆದೋರಿಲ್ಲ. ಇನ್ನೂ 65 ವಾರಗಳವರೆಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಈ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಮೇವಿನ ಕಿಟ್‌ಗಳನ್ನು ತರಿಸಿಕೊಂಡು ನೀರಾವರಿ ವ್ಯವಸ್ಥೆ ಹೊಂದಿರುವ ರೈತರಿಗೆ ವಿತರಿಸಲು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಕ್ರಮ ಕೈಗೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 76,920 ದೊಡ್ಡ ಜಾನುವಾರು ಗಳು(ಹಸು, ಎಮ್ಮೆ) ಹಾಗೂ 8,253 ಸಣ್ಣ ಜಾನುವಾರುಗಳು(ಮೇಕೆ, ಕುರಿ) ಇವೆ. ಈ ಸಂಖ್ಯೆಗನುಗುಣವಾಗಿ ಪ್ರತಿದಿನ 3,260 ಟನ್ ಮೇವಿನ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಲಭ್ಯತೆಯ ಪ್ರಕಾರ ಜಿಲ್ಲಾ ಮಟ್ಟದಲ್ಲಿ ಸರಾಸರಿ 65 ವಾರಗಳವರೆಗೆ ಮೇವು ಸಾಕಾಗಲಿದೆ.

ತಾಲ್ಲೂಕುವಾರು ಅಂಕಿ-ಅಂಶಗಳನ್ನು ಗಮನಿಸಿದಾಗ, ಸೋಮವಾರಪೇಟೆ ತಾಲ್ಲೂಕಿನಲ್ಲಿ 69 ವಾರಗಳವರೆಗೆ ಸಾಕಾಗುವಷ್ಟು ಮೇವು ಮೇವು ಲಭ್ಯವಿದೆ. ತಾಲ್ಲೂಕಿನಲ್ಲಿ ಒಟ್ಟು 59,718 ಟನ್ ಮೇವು ಲಭ್ಯವಿದ್ದು, ಜಾನುವಾರುಗಳ ಸಂಖ್ಯೆಗೂ ಅನುಗುಣವಾಗಿ ಹೆಚ್ಚಿನ ಸಂಗ್ರಹ ವಿದೆ. ಕಳೆದ ಸಾಲಿನ ಉತ್ತಮ ಮಳೆಯ ಪರಿಣಾ ಮವಾಗಿ ಮೇವು ಉತ್ತಮವಾಗಿ ಬೆಳೆದಿದೆ.

ಮಡಿಕೇರಿ ತಾಲ್ಲೂಕಿನಲ್ಲಿ 39,457 ಟನ್ ಮೇವು ಲಭ್ಯವಿದ್ದು, ಇದು ಸುಮಾರು 47 ವಾರಗಳವರೆಗೆ ಸಾಕಾಗಲಿದೆ. ಜಿಲ್ಲೆಯಲ್ಲಿಯೇ ಅಲ್ಪ ಪ್ರಮಾಣದ ಲಭ್ಯತೆ ಮಡಿಕೇರಿಯಲ್ಲೇ ಕಂಡು ಬಂದಿದೆ. ಆದಾಗ್ಯೂ ತಕ್ಷಣದಲ್ಲಿ ಕೊರತೆ ಎದುರಾಗುವ ಪರಿಸ್ಥಿತಿ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ವಿರಾಜಪೇಟೆ ತಾಲ್ಲೂಕಿನಲ್ಲಿ 26,878 ಟನ್ ಮೇವು ಲಭ್ಯವಿದ್ದು, 78 ವಾರಗಳಿಗೆ ಸಾಕಾಗಲಿದೆ. ಮೇವು ಲಭ್ಯವಿದ್ದು, 78 ವಾರಗಳಿಗೆ ಸಾಕಾಗಲಿದೆ. ಪೊನ್ನಂಪೇಟೆಯಲ್ಲಿ 49,391 ಟನ್ ಮೇವು ಸಂಗ್ರಹವಿದ್ದು, 75 ವಾರಗಳಿಗೆ ಲಭ್ಯತೆ ಇದೆ. ಎರಡೂ ತಾಲ್ಲೂಕುಗಳಲ್ಲಿ ಹಸಿರು ಮೇವು ಉತ್ಪಾದನೆ ಸ್ಥಿರವಾಗಿರುವುದರಿಂದ ಯಾವುದೇ ಕೊರತೆ ಉಂಟಾಗುವ ಸಾಧ್ಯತೆಗಳು ಇಲ್ಲವಾಗಿದೆ.

ಕುಶಾಲನಗರ ತಾಲ್ಲೂಕಿನಲ್ಲಿ 37,059 ಟನ್ ಮೇವು ಲಭ್ಯವಿದ್ದು, ಸುಮಾರು 69 ವಾರಗಳಿಗೆ ಸಾಕಾಗಲಿದೆ. ಈ ಭಾಗದಲ್ಲಿ ನೀರಾವರಿ ವ್ಯವಸ್ಥೆ ಇರುವುದರಿಂದ ಹಸಿರು ಮೇವು ಬೆಳೆ ಹೆಚ್ಚಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಒಟ್ಟಾರೆ ಮೇವಿನ ಲಭ್ಯತೆ ಸಮ ರ್ಪಕವಾಗಿದ್ದರೂ, ಹವಾಮಾನ ಅನಿಶ್ಚಿತತೆ ಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರಕ್ಕೆ ಮೇವಿನ ಕಿಟ್‌ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಕಿಟ್‌ಗಳು ಬಂದ ಬಳಿಕ ಅಗತ್ಯವಿರುವ ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳ ಲಾಗುವುದು ಎಂದು ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದ್ದಾರೆ.

ಇದಲ್ಲದೇ ಸೈಲೇಜ್ ತಯಾರಿ, ಹಸಿರು ಮೇವು ಸಂಗ್ರಹಣೆ ಮತ್ತು ಸಮತೋಲನ ಆಹಾರ ನೀಡುವ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ಮಳೆ ಕೊರತೆ ಅಥವಾ ಅಕಾಲಿಕ ಬಿಸಿಲಿನ ಸಂದರ್ಭ ಎದು ರಾದರೂ ಜಾನುವಾರುಗಳಿಗೆ ಆಹಾರ ಕೊರತೆ ಉಂಟಾಗದಂತೆ ಯೋಜನೆ ರೂಪಿಸಲಾಗಿದೆ.

ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಗಳಿಲ್ಲ. ಈಗಾಗಲೇ
ಅಂದಾಜು 65 ವಾರಗಳಿಗಾಗುವಷ್ಟು ಮೇವಿನ ಲಭ್ಯತೆ ಇದೆ. ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯವಿದ್ದು, ಇದು ಜಾನುವಾರುಗಳ ಅಗತ್ಯಕ್ಕೆ ತಕ್ಕಮಟ್ಟಿಗೆ ಸಮರ್ಪಕವಾಗಿದೆ.
-ಡಾ.ಲಿಂಗರಾಜು ದೊಡ್ಡಮನಿ, ಉಪನಿರ್ದೆಶಕರು, ಪಶುವೈದ್ಯಕೀಯ, ಪಶುಪಾಲನಾ ಇಲಾಖೆ

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

10 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

13 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

14 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

15 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

15 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

15 hours ago