Andolana originals

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್

ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ತೀರಕ್ಕೂ ಅವಿನಾಭಾವ ಸಂಬಂಧವಿತ್ತು.

ಶಾಮನೂರು ಎಂದೇ ಪ್ರಖ್ಯಾತರಾಗಿದ್ದ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಹುಲ್ಲಹಳ್ಳಿ ಬಳಿಯ ಸಂಗಮ ಹಾಗೂ ಸುತ್ತೂರು ಮಠದ ಭಕ್ತರಾಗಿ ಇಲ್ಲಿಗೆ ನೀಡಿದ ಕೊಡುಗೆ ಅಪಾರ.

ಮಹದೇವ ತಾತಾ ಅವರ ಐಕ್ಯಸ್ಥಳ ಸಂಗಮಕ್ಕೆ ವರ್ಷದಲ್ಲಿ ನಾಲ್ಕಾರು ಬಾರಿ ಕುಟುಂಬ ಸಮೇತ ಆಗಮಿಸುತ್ತಿದ್ದ ಅವರು ಬಂದಾಗಲೆಲ್ಲ ಮಹದೇವ ತಾತಾ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಗಂಟೆಗಟ್ಟಲೆ ತಾತಾ ಅವರ ಸಮಾಧಿ ಮುಂದೆ ಕುಳಿತು ಧ್ಯಾನಸ್ಥರಾಗಿ, ಹುಂಡಿಗೆ ಹಣ ಹಾಕಿಯೇ ಅಲ್ಲಿಂದ ತೆರಳುತ್ತಿದ್ದರು.

ಶಾಮನೂರು ಶಿವಶಂಕರಪ್ಪನವರು ತಮ್ಮ ಸ್ವಂತ ಹಣದಲ್ಲಿ ಸಂಗಮದಲ್ಲಿ ಅತಿಥಿ ಗೃಹ ನಿರ್ಮಿಸಿ ತಾತಾ ಅವರಿಗೆ ಅರ್ಪಿಸಿ ದ್ದಲ್ಲದೆ, ಮಹದೇವ ತಾತಾರ ಭವನ ನಿರ್ಮಾಣಕ್ಕೂ ಕೋಟ್ಯಂತರ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದರು. ತಮ್ಮ ಕೊಡುಗೆಯೊಂದಿಗೆ ತಾವೇ ಮುಂದಾಗಿ ನಿಂತು ಸಂಗಮದ ಗದ್ದುಗೆ ಬಳಿ ಕಪಿಲಾ ನದಿಯ ತಡಗೋಡೆಗಾಗಿ ೨.೫ ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಸಂಗಮದೊಂದಿಗೆ ಅದೇ ಕಪಿಲಾ ತೀರದಲ್ಲಿರುವ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಸುತ್ತೂರು ಮಠಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂಲ ಮಠದ ಮುಂಭಾಗದಲ್ಲೇ ಇಂದು ಕಂಗೊಳಿಸುತ್ತಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಹೆಸರಿನ ೫೦ ಕೊಠಡಿಗಳ ೫೦೦ ಜನರ ವಾಸ್ತವ್ಯಕ್ಕೆ ಅವಕಾಶವಿರುವ ವಿಶಾಲವಾದ ಅತಿಥಿಗೃಹ ಸುತ್ತೂರಿಗೆ ಶಾಮನೂರು ನೀಡಿದ ಕೊಡುಗೆಯಾಗಿ ನಮ್ಮ ಮುಂದಿದೆ.

ಶಾಮನೂರು ನಿರ್ಮಿತ ಈ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ೧೧.೨ ೨೦೨೪ ರಲ್ಲಿ ಲೋಕಾರ್ಪಣೆಗೊಳಿಸಿ ಶಿವರಾತ್ರೀಶ್ವರ ಮಠಕ್ಕೆ ಅರ್ಪಿಸಿದ್ದರು. ಕೊಡುಗೈ ದಾನಿ ಶಿವಶಂಕರಪ್ಪ ಇಂದು ನಮ್ಮೊಂದಿಗಿಲ್ಲ. ಆದರೆ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಈ ಎರಡು ಪವಿತ್ರ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳು ಮಾತ್ರ ಅಲ್ಲಿಗೆ ಭೇಟಿ ನೀಡಿದವರ ಕಣ್ಣೆದುರಿಗೆ ಶಿವಶಂಕರಪ್ಪನರ ಹೆಸರನ್ನು ಚಿರಸ್ಥಾಯಿಯಾಗಿಸಿವೆ.

 

 

ಆಂದೋಲನ ಡೆಸ್ಕ್

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

1 hour ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

2 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

2 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

2 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

3 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

3 hours ago