ಎಸ್.ಎಸ್.ಭಟ್
ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ತೀರಕ್ಕೂ ಅವಿನಾಭಾವ ಸಂಬಂಧವಿತ್ತು.
ಶಾಮನೂರು ಎಂದೇ ಪ್ರಖ್ಯಾತರಾಗಿದ್ದ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಹುಲ್ಲಹಳ್ಳಿ ಬಳಿಯ ಸಂಗಮ ಹಾಗೂ ಸುತ್ತೂರು ಮಠದ ಭಕ್ತರಾಗಿ ಇಲ್ಲಿಗೆ ನೀಡಿದ ಕೊಡುಗೆ ಅಪಾರ.
ಮಹದೇವ ತಾತಾ ಅವರ ಐಕ್ಯಸ್ಥಳ ಸಂಗಮಕ್ಕೆ ವರ್ಷದಲ್ಲಿ ನಾಲ್ಕಾರು ಬಾರಿ ಕುಟುಂಬ ಸಮೇತ ಆಗಮಿಸುತ್ತಿದ್ದ ಅವರು ಬಂದಾಗಲೆಲ್ಲ ಮಹದೇವ ತಾತಾ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಗಂಟೆಗಟ್ಟಲೆ ತಾತಾ ಅವರ ಸಮಾಧಿ ಮುಂದೆ ಕುಳಿತು ಧ್ಯಾನಸ್ಥರಾಗಿ, ಹುಂಡಿಗೆ ಹಣ ಹಾಕಿಯೇ ಅಲ್ಲಿಂದ ತೆರಳುತ್ತಿದ್ದರು.
ಶಾಮನೂರು ಶಿವಶಂಕರಪ್ಪನವರು ತಮ್ಮ ಸ್ವಂತ ಹಣದಲ್ಲಿ ಸಂಗಮದಲ್ಲಿ ಅತಿಥಿ ಗೃಹ ನಿರ್ಮಿಸಿ ತಾತಾ ಅವರಿಗೆ ಅರ್ಪಿಸಿ ದ್ದಲ್ಲದೆ, ಮಹದೇವ ತಾತಾರ ಭವನ ನಿರ್ಮಾಣಕ್ಕೂ ಕೋಟ್ಯಂತರ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದರು. ತಮ್ಮ ಕೊಡುಗೆಯೊಂದಿಗೆ ತಾವೇ ಮುಂದಾಗಿ ನಿಂತು ಸಂಗಮದ ಗದ್ದುಗೆ ಬಳಿ ಕಪಿಲಾ ನದಿಯ ತಡಗೋಡೆಗಾಗಿ ೨.೫ ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.
ಸಂಗಮದೊಂದಿಗೆ ಅದೇ ಕಪಿಲಾ ತೀರದಲ್ಲಿರುವ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಸುತ್ತೂರು ಮಠಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂಲ ಮಠದ ಮುಂಭಾಗದಲ್ಲೇ ಇಂದು ಕಂಗೊಳಿಸುತ್ತಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಹೆಸರಿನ ೫೦ ಕೊಠಡಿಗಳ ೫೦೦ ಜನರ ವಾಸ್ತವ್ಯಕ್ಕೆ ಅವಕಾಶವಿರುವ ವಿಶಾಲವಾದ ಅತಿಥಿಗೃಹ ಸುತ್ತೂರಿಗೆ ಶಾಮನೂರು ನೀಡಿದ ಕೊಡುಗೆಯಾಗಿ ನಮ್ಮ ಮುಂದಿದೆ.
ಶಾಮನೂರು ನಿರ್ಮಿತ ಈ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ೧೧.೨ ೨೦೨೪ ರಲ್ಲಿ ಲೋಕಾರ್ಪಣೆಗೊಳಿಸಿ ಶಿವರಾತ್ರೀಶ್ವರ ಮಠಕ್ಕೆ ಅರ್ಪಿಸಿದ್ದರು. ಕೊಡುಗೈ ದಾನಿ ಶಿವಶಂಕರಪ್ಪ ಇಂದು ನಮ್ಮೊಂದಿಗಿಲ್ಲ. ಆದರೆ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಈ ಎರಡು ಪವಿತ್ರ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳು ಮಾತ್ರ ಅಲ್ಲಿಗೆ ಭೇಟಿ ನೀಡಿದವರ ಕಣ್ಣೆದುರಿಗೆ ಶಿವಶಂಕರಪ್ಪನರ ಹೆಸರನ್ನು ಚಿರಸ್ಥಾಯಿಯಾಗಿಸಿವೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…