Andolana originals

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್

ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ತೀರಕ್ಕೂ ಅವಿನಾಭಾವ ಸಂಬಂಧವಿತ್ತು.

ಶಾಮನೂರು ಎಂದೇ ಪ್ರಖ್ಯಾತರಾಗಿದ್ದ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಹುಲ್ಲಹಳ್ಳಿ ಬಳಿಯ ಸಂಗಮ ಹಾಗೂ ಸುತ್ತೂರು ಮಠದ ಭಕ್ತರಾಗಿ ಇಲ್ಲಿಗೆ ನೀಡಿದ ಕೊಡುಗೆ ಅಪಾರ.

ಮಹದೇವ ತಾತಾ ಅವರ ಐಕ್ಯಸ್ಥಳ ಸಂಗಮಕ್ಕೆ ವರ್ಷದಲ್ಲಿ ನಾಲ್ಕಾರು ಬಾರಿ ಕುಟುಂಬ ಸಮೇತ ಆಗಮಿಸುತ್ತಿದ್ದ ಅವರು ಬಂದಾಗಲೆಲ್ಲ ಮಹದೇವ ತಾತಾ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಗಂಟೆಗಟ್ಟಲೆ ತಾತಾ ಅವರ ಸಮಾಧಿ ಮುಂದೆ ಕುಳಿತು ಧ್ಯಾನಸ್ಥರಾಗಿ, ಹುಂಡಿಗೆ ಹಣ ಹಾಕಿಯೇ ಅಲ್ಲಿಂದ ತೆರಳುತ್ತಿದ್ದರು.

ಶಾಮನೂರು ಶಿವಶಂಕರಪ್ಪನವರು ತಮ್ಮ ಸ್ವಂತ ಹಣದಲ್ಲಿ ಸಂಗಮದಲ್ಲಿ ಅತಿಥಿ ಗೃಹ ನಿರ್ಮಿಸಿ ತಾತಾ ಅವರಿಗೆ ಅರ್ಪಿಸಿ ದ್ದಲ್ಲದೆ, ಮಹದೇವ ತಾತಾರ ಭವನ ನಿರ್ಮಾಣಕ್ಕೂ ಕೋಟ್ಯಂತರ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದರು. ತಮ್ಮ ಕೊಡುಗೆಯೊಂದಿಗೆ ತಾವೇ ಮುಂದಾಗಿ ನಿಂತು ಸಂಗಮದ ಗದ್ದುಗೆ ಬಳಿ ಕಪಿಲಾ ನದಿಯ ತಡಗೋಡೆಗಾಗಿ ೨.೫ ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಸಂಗಮದೊಂದಿಗೆ ಅದೇ ಕಪಿಲಾ ತೀರದಲ್ಲಿರುವ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಸುತ್ತೂರು ಮಠಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂಲ ಮಠದ ಮುಂಭಾಗದಲ್ಲೇ ಇಂದು ಕಂಗೊಳಿಸುತ್ತಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಹೆಸರಿನ ೫೦ ಕೊಠಡಿಗಳ ೫೦೦ ಜನರ ವಾಸ್ತವ್ಯಕ್ಕೆ ಅವಕಾಶವಿರುವ ವಿಶಾಲವಾದ ಅತಿಥಿಗೃಹ ಸುತ್ತೂರಿಗೆ ಶಾಮನೂರು ನೀಡಿದ ಕೊಡುಗೆಯಾಗಿ ನಮ್ಮ ಮುಂದಿದೆ.

ಶಾಮನೂರು ನಿರ್ಮಿತ ಈ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ೧೧.೨ ೨೦೨೪ ರಲ್ಲಿ ಲೋಕಾರ್ಪಣೆಗೊಳಿಸಿ ಶಿವರಾತ್ರೀಶ್ವರ ಮಠಕ್ಕೆ ಅರ್ಪಿಸಿದ್ದರು. ಕೊಡುಗೈ ದಾನಿ ಶಿವಶಂಕರಪ್ಪ ಇಂದು ನಮ್ಮೊಂದಿಗಿಲ್ಲ. ಆದರೆ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಈ ಎರಡು ಪವಿತ್ರ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳು ಮಾತ್ರ ಅಲ್ಲಿಗೆ ಭೇಟಿ ನೀಡಿದವರ ಕಣ್ಣೆದುರಿಗೆ ಶಿವಶಂಕರಪ್ಪನರ ಹೆಸರನ್ನು ಚಿರಸ್ಥಾಯಿಯಾಗಿಸಿವೆ.

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago