Andolana originals

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್

ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಪಿಲಾ ತೀರಕ್ಕೂ ಅವಿನಾಭಾವ ಸಂಬಂಧವಿತ್ತು.

ಶಾಮನೂರು ಎಂದೇ ಪ್ರಖ್ಯಾತರಾಗಿದ್ದ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಹುಲ್ಲಹಳ್ಳಿ ಬಳಿಯ ಸಂಗಮ ಹಾಗೂ ಸುತ್ತೂರು ಮಠದ ಭಕ್ತರಾಗಿ ಇಲ್ಲಿಗೆ ನೀಡಿದ ಕೊಡುಗೆ ಅಪಾರ.

ಮಹದೇವ ತಾತಾ ಅವರ ಐಕ್ಯಸ್ಥಳ ಸಂಗಮಕ್ಕೆ ವರ್ಷದಲ್ಲಿ ನಾಲ್ಕಾರು ಬಾರಿ ಕುಟುಂಬ ಸಮೇತ ಆಗಮಿಸುತ್ತಿದ್ದ ಅವರು ಬಂದಾಗಲೆಲ್ಲ ಮಹದೇವ ತಾತಾ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಗಂಟೆಗಟ್ಟಲೆ ತಾತಾ ಅವರ ಸಮಾಧಿ ಮುಂದೆ ಕುಳಿತು ಧ್ಯಾನಸ್ಥರಾಗಿ, ಹುಂಡಿಗೆ ಹಣ ಹಾಕಿಯೇ ಅಲ್ಲಿಂದ ತೆರಳುತ್ತಿದ್ದರು.

ಶಾಮನೂರು ಶಿವಶಂಕರಪ್ಪನವರು ತಮ್ಮ ಸ್ವಂತ ಹಣದಲ್ಲಿ ಸಂಗಮದಲ್ಲಿ ಅತಿಥಿ ಗೃಹ ನಿರ್ಮಿಸಿ ತಾತಾ ಅವರಿಗೆ ಅರ್ಪಿಸಿ ದ್ದಲ್ಲದೆ, ಮಹದೇವ ತಾತಾರ ಭವನ ನಿರ್ಮಾಣಕ್ಕೂ ಕೋಟ್ಯಂತರ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದರು. ತಮ್ಮ ಕೊಡುಗೆಯೊಂದಿಗೆ ತಾವೇ ಮುಂದಾಗಿ ನಿಂತು ಸಂಗಮದ ಗದ್ದುಗೆ ಬಳಿ ಕಪಿಲಾ ನದಿಯ ತಡಗೋಡೆಗಾಗಿ ೨.೫ ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಸಂಗಮದೊಂದಿಗೆ ಅದೇ ಕಪಿಲಾ ತೀರದಲ್ಲಿರುವ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಸುತ್ತೂರು ಮಠಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂಲ ಮಠದ ಮುಂಭಾಗದಲ್ಲೇ ಇಂದು ಕಂಗೊಳಿಸುತ್ತಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಹೆಸರಿನ ೫೦ ಕೊಠಡಿಗಳ ೫೦೦ ಜನರ ವಾಸ್ತವ್ಯಕ್ಕೆ ಅವಕಾಶವಿರುವ ವಿಶಾಲವಾದ ಅತಿಥಿಗೃಹ ಸುತ್ತೂರಿಗೆ ಶಾಮನೂರು ನೀಡಿದ ಕೊಡುಗೆಯಾಗಿ ನಮ್ಮ ಮುಂದಿದೆ.

ಶಾಮನೂರು ನಿರ್ಮಿತ ಈ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ೧೧.೨ ೨೦೨೪ ರಲ್ಲಿ ಲೋಕಾರ್ಪಣೆಗೊಳಿಸಿ ಶಿವರಾತ್ರೀಶ್ವರ ಮಠಕ್ಕೆ ಅರ್ಪಿಸಿದ್ದರು. ಕೊಡುಗೈ ದಾನಿ ಶಿವಶಂಕರಪ್ಪ ಇಂದು ನಮ್ಮೊಂದಿಗಿಲ್ಲ. ಆದರೆ ಅವರು ಮೈಸೂರು ಜಿಲ್ಲೆಯ ಕಪಿಲಾ ತೀರದ ಈ ಎರಡು ಪವಿತ್ರ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳು ಮಾತ್ರ ಅಲ್ಲಿಗೆ ಭೇಟಿ ನೀಡಿದವರ ಕಣ್ಣೆದುರಿಗೆ ಶಿವಶಂಕರಪ್ಪನರ ಹೆಸರನ್ನು ಚಿರಸ್ಥಾಯಿಯಾಗಿಸಿವೆ.

 

 

ಆಂದೋಲನ ಡೆಸ್ಕ್

Recent Posts

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

11 mins ago

ಓದುಗರ ಪತ್ರ: ತಂತ್ರಜ್ಞಾನಾಧಾರಿತ ನ್ಯೂಟ್ರಿ ಸ್ಕೋರ್ ಜಾರಿಗೆ ತನ್ನಿ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…

13 mins ago

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago