Andolana originals

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ

ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ ತುಂಬ ಗಿಡ-ಗಂಟಿಗಳು ಬೆಳೆದಿದ್ದು, ಎಲ್ಲೆಂದರಲ್ಲಿ ಕಸ ರಾಶಿ ಹಾಕಲಾಗಿದೆ. ಉದ್ಯಾನ ವನಕ್ಕೆ ಬಂದವರು ವಿಶ್ರಾಂತಿ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಕುಳಿತುಕೊಳ್ಳಲು ಅಳವಡಿಸಿದ್ದ ಕಾಂಕ್ರೀಟ್ ಆಸನಗಳು ಶಿಥಿಲಗೊಂಡಿವೆ.

ಒಂದು ಬಡಾವಣೆಯಲ್ಲಿ ಉದ್ಯಾನ ನಿರ್ಮಿಸಬೇಕು ಎಂಬ ನಿಯಮ ಪಾಲನೆ ಮಾಡುವ ಉದ್ದೇಶದಿಂದ ಮಾತ್ರ ಇಲ್ಲಿ ಉದ್ಯಾನವನ ನಿರ್ಮಿಸಿದಂತೆ ಇದೆ. ಈ ದುಸ್ಥಿತಿಯಿಂದಾಗಿ ವಾಯು ವಿಹಾರಕ್ಕೆ ಯಾರೂ ಬರುತ್ತಿಲ್ಲ. ಆದ್ದರಿಂದ, ಉದ್ಯಾನವನದ ಉದ್ದೇಶವೇ ಮರೆಯಾದಂತಿದೆ. ಆದರೆ ಉದ್ಯಾನವನದ ಸ್ವಲ್ಪ ಭಾಗವನ್ನು ಮಕ್ಕಳು ಆಟವಾಡಲು ಬಳಸಿಕೊಳ್ಳುತ್ತಿದ್ದಾರೆ.

ಪ್ರವೇಶಿಸಲು ಇರುವ ದ್ವಾರದ ಬಳಿಯೇ ಕಸದ ರಾಶಿ ಹಾಕಲಾಗಿದೆ. ಇದರಿಂದಾಗಿ ಒಳಗೆ ಹೋಗಬೇಕೆಂಬ ಇಚ್ಛೆ ಇದ್ದರೂ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇದೆ. ಉದ್ಯಾನದ ದುಸ್ಥಿತಿ ಬಗ್ಗೆ ಇಲ್ಲಿನ ಸಾರ್ವಜನಿಕರನ್ನು ಪ್ರಶ್ನಿಸಿದರೆ ಅವರು ನಿರಾಸಕ್ತಿ ತೋರುತ್ತಾರೆ. ಉದ್ಯಾನವನ್ನು ಇಲ್ಲಿ ನಿರ್ಮಿಸುವುದು ಬೇಡವಾಗಿತ್ತೇನೋ ಎಂಬ ಭಾವನೆ ವ್ಯಕ್ತಪಡಿಸುತ್ತಾರೆ.

ರಾಜೀವ್ ನಗರದ ಉದ್ಯಾನದ ಕಥೆ ಹೀಗಾದರೆ, ಈ ಬಡಾವಣೆಯ ಬಹುತೇಕ ರಸ್ತೆಗಳ ಇಕ್ಕೆಲಗಳಲ್ಲೂ ಕಸ, ನಿರುಪಯುಕ್ತ ತ್ಯಾಜ್ಯದ ರಾಶಿಯೇ ಕಂಡುಬರುತ್ತದೆ. ರಾಜೀವ್ ನಗರದ ಮಾದೇಗೌಡ ವೃತ್ತದ ಬಳಿ ಇರುವ ಅಶ್ವತ್ಥ ವೃಕ್ಷದ ಸುತ್ತ-ಮುತ್ತಲಿನ ಜಾಗದಲ್ಲೂ ಸ್ವಚ್ಛತೆ ಮರೀಚಿಕೆಯಾಗಿದೆ. ಈ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎನ್ನುತ್ತಾರೆ ಸಾರ್ವಜನಿಕರು.

” ರಾಜೀವ್ ನಗರದ ಉದ್ಯಾನದ ದುಸ್ಥಿತಿಯಿಂದಾಗಿ ಯಾರೂ ಒಳಗೆ ಪ್ರವೇಶ ಮಾಡದ ಹಾಗಾಗಿದೆ. ತಕ್ಷಣ ಸಂಬಂಧಪಟ್ಟವರು ಇತ್ತ ಗಮನಹರಿಸಿ ಉದ್ಯಾನವನ್ನು ಸ್ವಚ್ಛಗೊಳಿಸಬೇಕಿದೆ.”

-ವಸೀಮ್, ರಾಜೀವ್ ನಗರ ನಿವಾಸಿ

” ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ. ಯುವಜನರು ಹೋರಾಟವನ್ನೇ ಉಸಿರಾಗಿಸಿ ಕೊಳ್ಳಬೇಕು. ಅಂಬೇಡ್ಕರ್ ಹೋರಾಟದ ಬದುಕನ್ನು ಎಲ್ಲರೂ ಅರಿಯಬೇಕು.”

-ಅಹಿಂದ ಜವರಪ್ಪ

” ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ರಾಜೀವ್ ನಗರದ ಉದ್ಯಾನ ಹಾಳಾಗಿದೆ. ಇದರಿಂದಾಗಿ ಯಾರೂ ಪ್ರವೇಶಿಸದಂತಾಗಿದೆ. ಉದ್ಯಾನಕ್ಕೆ ಕಾಯಕಲ್ಪ ಅಗತ್ಯವಾಗಿದೆ.”

-ನಾಸಿರ್, ರಾಜೀವ್ ನಗರ ನಿವಾಸಿ

 

 

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

4 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

7 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

7 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

8 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

12 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

12 hours ago