Andolana originals

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ

ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ ತುಂಬ ಗಿಡ-ಗಂಟಿಗಳು ಬೆಳೆದಿದ್ದು, ಎಲ್ಲೆಂದರಲ್ಲಿ ಕಸ ರಾಶಿ ಹಾಕಲಾಗಿದೆ. ಉದ್ಯಾನ ವನಕ್ಕೆ ಬಂದವರು ವಿಶ್ರಾಂತಿ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಕುಳಿತುಕೊಳ್ಳಲು ಅಳವಡಿಸಿದ್ದ ಕಾಂಕ್ರೀಟ್ ಆಸನಗಳು ಶಿಥಿಲಗೊಂಡಿವೆ.

ಒಂದು ಬಡಾವಣೆಯಲ್ಲಿ ಉದ್ಯಾನ ನಿರ್ಮಿಸಬೇಕು ಎಂಬ ನಿಯಮ ಪಾಲನೆ ಮಾಡುವ ಉದ್ದೇಶದಿಂದ ಮಾತ್ರ ಇಲ್ಲಿ ಉದ್ಯಾನವನ ನಿರ್ಮಿಸಿದಂತೆ ಇದೆ. ಈ ದುಸ್ಥಿತಿಯಿಂದಾಗಿ ವಾಯು ವಿಹಾರಕ್ಕೆ ಯಾರೂ ಬರುತ್ತಿಲ್ಲ. ಆದ್ದರಿಂದ, ಉದ್ಯಾನವನದ ಉದ್ದೇಶವೇ ಮರೆಯಾದಂತಿದೆ. ಆದರೆ ಉದ್ಯಾನವನದ ಸ್ವಲ್ಪ ಭಾಗವನ್ನು ಮಕ್ಕಳು ಆಟವಾಡಲು ಬಳಸಿಕೊಳ್ಳುತ್ತಿದ್ದಾರೆ.

ಪ್ರವೇಶಿಸಲು ಇರುವ ದ್ವಾರದ ಬಳಿಯೇ ಕಸದ ರಾಶಿ ಹಾಕಲಾಗಿದೆ. ಇದರಿಂದಾಗಿ ಒಳಗೆ ಹೋಗಬೇಕೆಂಬ ಇಚ್ಛೆ ಇದ್ದರೂ ಹೋಗಲು ಸಾಧ್ಯವಾಗದಂತಹ ಸ್ಥಿತಿ ಇದೆ. ಉದ್ಯಾನದ ದುಸ್ಥಿತಿ ಬಗ್ಗೆ ಇಲ್ಲಿನ ಸಾರ್ವಜನಿಕರನ್ನು ಪ್ರಶ್ನಿಸಿದರೆ ಅವರು ನಿರಾಸಕ್ತಿ ತೋರುತ್ತಾರೆ. ಉದ್ಯಾನವನ್ನು ಇಲ್ಲಿ ನಿರ್ಮಿಸುವುದು ಬೇಡವಾಗಿತ್ತೇನೋ ಎಂಬ ಭಾವನೆ ವ್ಯಕ್ತಪಡಿಸುತ್ತಾರೆ.

ರಾಜೀವ್ ನಗರದ ಉದ್ಯಾನದ ಕಥೆ ಹೀಗಾದರೆ, ಈ ಬಡಾವಣೆಯ ಬಹುತೇಕ ರಸ್ತೆಗಳ ಇಕ್ಕೆಲಗಳಲ್ಲೂ ಕಸ, ನಿರುಪಯುಕ್ತ ತ್ಯಾಜ್ಯದ ರಾಶಿಯೇ ಕಂಡುಬರುತ್ತದೆ. ರಾಜೀವ್ ನಗರದ ಮಾದೇಗೌಡ ವೃತ್ತದ ಬಳಿ ಇರುವ ಅಶ್ವತ್ಥ ವೃಕ್ಷದ ಸುತ್ತ-ಮುತ್ತಲಿನ ಜಾಗದಲ್ಲೂ ಸ್ವಚ್ಛತೆ ಮರೀಚಿಕೆಯಾಗಿದೆ. ಈ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎನ್ನುತ್ತಾರೆ ಸಾರ್ವಜನಿಕರು.

” ರಾಜೀವ್ ನಗರದ ಉದ್ಯಾನದ ದುಸ್ಥಿತಿಯಿಂದಾಗಿ ಯಾರೂ ಒಳಗೆ ಪ್ರವೇಶ ಮಾಡದ ಹಾಗಾಗಿದೆ. ತಕ್ಷಣ ಸಂಬಂಧಪಟ್ಟವರು ಇತ್ತ ಗಮನಹರಿಸಿ ಉದ್ಯಾನವನ್ನು ಸ್ವಚ್ಛಗೊಳಿಸಬೇಕಿದೆ.”

-ವಸೀಮ್, ರಾಜೀವ್ ನಗರ ನಿವಾಸಿ

” ಹಕ್ಕುಗಳಿಗಾಗಿ ಹೋರಾಟ ಅನಿವಾರ್ಯವಾಗಿದೆ. ಯುವಜನರು ಹೋರಾಟವನ್ನೇ ಉಸಿರಾಗಿಸಿ ಕೊಳ್ಳಬೇಕು. ಅಂಬೇಡ್ಕರ್ ಹೋರಾಟದ ಬದುಕನ್ನು ಎಲ್ಲರೂ ಅರಿಯಬೇಕು.”

-ಅಹಿಂದ ಜವರಪ್ಪ

” ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ರಾಜೀವ್ ನಗರದ ಉದ್ಯಾನ ಹಾಳಾಗಿದೆ. ಇದರಿಂದಾಗಿ ಯಾರೂ ಪ್ರವೇಶಿಸದಂತಾಗಿದೆ. ಉದ್ಯಾನಕ್ಕೆ ಕಾಯಕಲ್ಪ ಅಗತ್ಯವಾಗಿದೆ.”

-ನಾಸಿರ್, ರಾಜೀವ್ ನಗರ ನಿವಾಸಿ

 

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

14 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

14 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

14 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

14 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

14 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago