ಕೆ.ಎಸ್.ಚಂದ್ರಶೇಖರಮೂರ್ತಿ
ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ !
ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ ನಿರ್ವಹಣೆ ಕೊರತೆಯಿಂದ ಅನೈತಿಕ ಚಟುವಟಿಕೆಗಳ ಗೂಡಾಗಿದೆ.
ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಮಕೃಷ್ಣ ನಗರ ಎ ಮತ್ತು ಬಿ ಬ್ಲಾಕ್ನಲ್ಲಿ ವಿಶ್ವಮಾನವ ಜೋಡಿ ರಸ್ತೆಗೆ ಹೊಂದಿಕೊಂಡಿರುವ ನಂದನವನ ಉದ್ಯಾನವನ ಪುಂಡರ ತಾಣವಾಗಿ ಪರಿವರ್ತನೆ ಆಗಿದೆ.
ನಿರ್ವಹಣೆ ಕೊರತೆಯಿಂದ ಕಸ, ಗಿಡಗಂಟಿಗಳಿಂದ ಕೂಡಿದ್ದು, ಕೆಲವೊಮ್ಮೆ ವಿಷ ಜಂತುಗಳವಾಸ ಸ್ಥಾನವಾಗಿದೆ. ಉದ್ಯಾನದ ಪಕ್ಕದ ರಸ್ತೆಯಲ್ಲಿ ಉಪ ನೋಂದಣಾಧಿಕಾರಿ ಕಚೇರಿ ಆರಂಭವಾದಾ ಗಿನಿಂದ ಅಲ್ಲಿಗೆ ಬರುವ ಜನರು ಪಾರ್ಕ್ ಪಕ್ಕ ರಸ್ತೆ ಉದ್ದಕ್ಕೂ ಕಾರುಗಳನ್ನು ನಿಲ್ಲಿಸುವುದರಿಂದ ಅದನ್ನೇತಡೆಗೋಡೆಯಂತೆ ಮಾಡಿಕೊಂಡು ಕೆಲವರು ಅ ಮೂತ್ರ ವಿಸರ್ಜನೆ ಮಾಡುತ್ತಾರೆ. ಸಂಜೆ ವೇಳೆ ಕೆಲವರು ಧೂಮಪಾನ, ಮದ್ಯಪಾನ ಮಾಡುತ್ತಾ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಈ ಬಗ್ಗೆ ಪ್ರಶ್ನಿಸಿದವರನ್ನೇ ಬೆದರಿಸುವ ಘಟನೆಗಳೂ ನಡೆದಿವೆ. ಇದರಿಂದಾಗಿ ಉದ್ಯಾನ ವನದ ಅಕ್ಕ-ಪಕ್ಕದ ಮನೆಯವರಿಗೆ ತಲೆನೋವಾಗಿ ಪರಿಣಮಿಸಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಅವ್ಯವಸ್ಥೆಯ ಗೂಡಾಗಿರುವ ಉದ್ಯಾನವನವನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬುದು ಸ್ಥಳೀಯರ ಮನವಿಯಾಗಿದೆ.
” ಈ ಉದ್ಯಾನದಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಇಲ್ಲಿಗೆ ಕಸ ಹಾಕುವವರು ಒಂದೆಡೆಯಾದರೆ, ಕೆಲವರು ಮದ್ಯಪಾನ ಮಾಡಿ ಖಾಲಿ ಬಾಟಲಿಗಳನ್ನು ಇ ಎಸೆದು ಹೋಗುತ್ತಿದ್ದಾರೆ. ಆರಂಭದಲ್ಲಿ ಉತ್ತಮವಾಗಿದ್ದ ಈ ಬಡಾವಣೆ ಇದೀಗ ಹದಗೆಡುತ್ತಿದೆ.”
ಲಕ್ಷ್ಮಣ್ ಗೌಡ
” ಸುತ್ತಮುತ್ತಲಿನ ಪಾರ್ಕ್ಗಳು ಅಭಿವೃದ್ಧಿ ಆಗಿವೆ. ಆದರೆ, ಈ ಉದ್ಯಾನವನ ಮಾತ್ರ ಅಭಿವೃದ್ಧಿ ಆಗಿಲ್ಲ. ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ರಸ್ತೆಯಲ್ಲಿ ಮಹಿಳೆಯರು ಓಡಾಡಲು ಆಗುತ್ತಿಲ್ಲ. ಕೆಲವರು ಬೇರೆ ಬೇರೆ ಕಡೆಯಿಂದ ಬಂದು ಇಲ್ಲಿ ಕಸ ಹಾಕುತ್ತಾರೆ. ಅಧಿಕಾರಿಗಳು ಕೂಡಲೇ ಈ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು.”
ಶಶಿಕಲಾ, ಸ್ಥಳೀಯ ನಿವಾಸಿ
” ಉದ್ಯಾನವನ ಮೊದಲು ಚೆನ್ನಾಗಿತ್ತು. ಈಗ ಸರಿಯಾಗಿ ನಿರ್ವಹಣೆಯಿಲ್ಲದೆ ಹಾಳಾಗಿದೆ. ಸಬ್ ರಿಜಿಸ್ಟ್ರಾರ್ ಆಫೀಸ್ಗೆ ಬರುವ ಕೆಲವರು ನಮ್ಮ ಮನೆಗಳ ಮುಂದೆ ಕಾರುಗಳನ್ನು ಪಾರ್ಕ್ ಮಾಡುತ್ತಾರೆ. ಬಹಳಷ್ಟು ಜನರು ವಾಹನಗಳಲ್ಲಿ ಕೂತು ಮದ್ಯಪಾನ ಮಾಡುತ್ತಾರೆ. ಉದ್ಯಾನವನ ಕುಡುಕರ ತಾಣವಾಗಿದೆ. ಹಗಲಿನ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಆಗಿದೆ.”
ಬಸವಣ್ಣ, ಸ್ಥಳೀಯ ನಿವಾಸಿ
” ಈ ಉದ್ಯಾನದ ಅವ್ಯವಸ್ಥೆ ಕುರಿತು ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತಂದರೂ ಅವರು ಗಮನ ಹರಿಸುತ್ತಿಲ್ಲ. ಸಬ್ ರಿಜಿಸ್ಟ್ರಾರ್ ಆಫೀಸ್ ಇಲ್ಲಿಗೆ ಸ್ಥಳಾಂತರವಾದಾಗಿನಿಂದ ಇಲ್ಲಿಗೆ ಬರುವ ಜನ ರು ಉದ್ಯಾನವನವನ್ನು ಬಯಲು ಶೌಚಾಲಯ ಮಾಡಿಕೊಂಡಿದ್ದಾರೆ. ಜೊತೆಗೆ ರಾತ್ರಿಯಾದರೆ ಅನೈತಿಕ ಚಟುವಟಿಕೆಗಳ ತಾಣವಾಗುತ್ತದೆ.
ಸತೀಶ್, ಸ್ಥಳೀಯ ನಿವಾಸಿ
” ಅನೇಕ ಬಾರಿ ಪಾರ್ಕ್ ಅವ್ಯವಸ್ಥೆ ಸರಿಪಡಿಸಲು ಮನವಿ ಮಾಡಿದರೂ ಪಾಲಿಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸ್ಥಳೀಯರೇ ಸೇರಿ ಬಹಳಷ್ಟು ಬಾರಿ ಪಾರ್ಕ್ ಅನ್ನು ಸ್ವಚ್ಛಗೊಳಿಸಿದ್ದೇವೆ. ಉದ್ಯಾನವನ ಬೆಳಕಿನ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಪಾರ್ಕ್ ಸುತ್ತಲೂ ಕಾರುಗಳು ನಿಂತಿರುತ್ತವೆ. ಯಾವಾಗ ಏನಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ.”
ಡಾ.ರವೀಶ್, ಸ್ಥಳೀಯ ನಿವಾಸಿ
” ಉದ್ಯಾನವನದ ಎದುರೇ ನಮ್ಮ ಮನೆಯಿದೆ. ಆರಂಭದಲ್ಲಿ ಪಾರ್ಕ್ ಸುತ್ತಲೂ ಫೆನ್ಸಿಂಗ್ ಹಾಕಿಸಿದ್ದೇ ಕೊನೆ. ನಂತರ ಯಾವುದೇ ನಿರ್ವಹಣೆ ಮಾಡುತ್ತಿಲ್ಲ. ಗಿಡಗಂಟಿ ಗಳು ಬೆಳೆದು ಹಾವು, ಚೇಳುಗಳ ಗೂಡಾಗಿದೆ. ರಾತ್ರಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಉದ್ಯಾನವನ ಸ್ವಚ್ಛತೆಗೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.”
ಶಿವಣ್ಣ, ಸ್ಥಳೀಯ ನಿವಾಸಿ
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…