ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ.
ಹಿಂದಿನ ವರ್ಷ ದೇಶಾದ್ಯಂತ ಭಾರತೀಯ ಭೂ ವೈಜ್ಞಾನಿಕ ಇಲಾಖೆ ಏರಿಯಲ್ ಸರ್ವೆ ನಡೆಸಿದಾಗ ಕಚ್ಚಾ ತೈಲ, ಚಿನ್ನ, ಅಪರೂಪದ ಖನಿಜಸಂಪತ್ತುಗಳು ಪತ್ತೆಯಾಗಿದ್ದವು. ಇದೇ ಸರ್ವೆಯಲ್ಲಿ ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶವಾದ ಮಣಗಹಳ್ಳಿ, ವಿಜಯಪುರ ಮತ್ತು ಕೂತನೂರು ಗ್ರಾಮಗಳ ವ್ಯಾಪ್ತಿಯಲ್ಲಿ ೭೨೦ ಎಕರೆಯಲ್ಲಿ ಅಪರೂಪದ ಖನಿಜ (ರೇರ್ ಅರ್ಥ್ ಮಿನರಲ್) ನಿಕ್ಷೇಪ ಪತ್ತೆಯಾಗಿದೆ.
ಈ ರೀತಿ ನಿಕ್ಷೇಪ ಇರುವ ಪ್ರದೇಶದಲ್ಲಿ ೨೦ ಎಕರೆಯನ್ನು ಥೋರಿಯಂ ಹಾಗೂ ಕೋರ್ ಮಿನರಲ್ಸ್ ಜೋನ್ ಎಂದು ಗುರುತಿಸಿರುವ ಕೇಂದ್ರ ಸರ್ಕಾರ ಗಣಿಗಾರಿಕೆ ನಡೆಸಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಣ್ಣೂರುಕೇರಿ ಗ್ರಾಮದ ಪೂರ್ವ ಪಾರ್ಶ್ವದ ಚಿಕ್ಕಮ್ಮತಾಯಿ ಬೆಟ್ಟದ ಪಶ್ಚಿಮ ಪಾರ್ಶ್ವದಲ್ಲೂ ಈ ಹಿಂದೆ ನಿಕ್ಷೇಪ ಇರುವ ಬಗ್ಗೆ ಸುದ್ದಿಗಳು ಹರಡಿದ್ದವು. ಇದನ್ನು ದೃಢಪಡಿಸುವ ರೀತಿಯಲ್ಲಿ ಒಂದು ಪ್ರದೇಶದಲ್ಲಿ ಪತ್ತೆ ಕಾರ್ಯ ಕೈಗೊಳ್ಳಲಾಗಿತ್ತು. ಈಗಲೂ ಈ ಪ್ರದೇಶದ ಒಂದು ಚಿಕ್ಕ ಪ್ರದೇಶಕ್ಕೆ ಬೀಗ ಮುದ್ರೆ ಹಾಕಲಾಗಿದೆ. ಈಗ ಥೋರಿಯಂ ನಿಕ್ಷೇಪ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚರ್ಚೆಗೆ ಮತ್ತಷ್ಟು ಬಲ ಬಂದಂತಾಗಿದೆ.
ಥೋರಿಯಂ ಖನಿಜ ನಿಕ್ಷೇಪ ಎಂದರೆ ಭೂಮಿಯ ಕಲ್ಲು, ಮಣ್ಣು ಮತ್ತು ನೀರಿನಲ್ಲಿ ನೈಸರ್ಗಿಕವಾಗಿ ದೊರೆಯುವ ವಿಕಿರಣಶೀಲ ಲೋಹವಾದ ಥೋರಿಯಂನ ಶೇಖರಣೆಯಾಗಿದೆ. ಇದು ಸ್ವತಃ ಇಂಧನವಾಗಿ ಕೆಲಸ ಮಾಡದಿದ್ದರೂ ನ್ಯೂಟ್ರಾನ್ ಹೀರಿಕೊಳ್ಳುವಿಕೆಯ ಮೂಲಕ ಇದನ್ನು ನ್ಯೂಕ್ಲಿಯರ್ ರಿಯಾಕ್ಟರ್ಗಳಲ್ಲಿ ಶಕ್ತಿಯಾಗಿ ಬಳಸಬಹುದು. ಥೋರಿಯಂ ಪ್ರಮುಖವಾಗಿ ‘ಮೋನಜೈಟ್’ಎಂಬ ಖನಿಜ ಮರಳಿನಲ್ಲಿ ದೊರೆಯುತ್ತದೆ. ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಅಂದರೆ ಸುಮಾರು ೮,೫೦,೦೦೦ ಟನ್ಗಳಷ್ಟು ಥೋರಿಯಂ ನಿಕ್ಷೇಪಗಳನ್ನು ಹೊಂದಿದ್ದು ಇದು ವಿಶೇಷವಾಗಿ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಡಲ ತೀರದ ಮರಳಿನಲ್ಲಿ ಹೇರಳವಾಗಿ ಲಭ್ಯವಿದೆ ಎನ್ನಲಾಗಿದೆ.ಭವಿಷ್ಯದಲ್ಲಿ ಭಾರತದ ಮಹತ್ವಾಕಾಂಕ್ಷೆಯ ಪರಮಾಣು ವಿದ್ಯುತ್ ಯೋಜನೆಗಳಲ್ಲಿ ಇದು ಅತ್ಯಂತ ಪ್ರಮುಖ ಇಂಧನವಾಗಿದೆ
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…