ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಕೋಟೆ ವಲಯ ಅರಣ್ಯ ಅಧಿಕಾರಿ ಪೂಜಾ ತಿಳಿಸಿದ್ದಾರೆ.
ಶಾಂತಿಪುರ, ಬೋಚಿಕಟ್ಟೆ ಗ್ರಾಮಗಳ ಬಳಿ ಕೂಂಬಿಂಗ್ ನಡೆಸಿದ್ದು, ಹಳೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಸಂಜೆ ಸುಮಾರು ೪:೩೦ ಗಂಟೆ ಸಮಯದಲ್ಲಿ ಕೆ. ಜಿ. ಹುಂಡಿ ಗ್ರಾಮದಲ್ಲಿ ಹುಲಿ ಮೇಕೆಯನ್ನು ತಿಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿ ಸಮೇತ ಸ್ಥಳಕ್ಕೆ ತೆರಳಿ ಪರಿಶೀಲಿಸಿ ನೋಡಿದಾಗ ಸದರಿ ಮೇಕೆಯ ಮೇಲೆ ಮೇಲ್ನೋಟಕ್ಕೆ ಚಿರತೆ, ಹುಲಿ ಅಥವಾ ಯಾವುದೇ ವನ್ಯ ಪ್ರಾಣಿ ದಾಳಿ ಮಾಡಿರುವ ಕುರು ಹುಗಳು ಕಂಡು ಬಂದಿಲ್ಲ. ಹೆಚ್ಚಿನ ವಿವರಗಳು ಪಶುವೈದ್ಯಕೀಯ ಪರೀಕ್ಷೆ ವರದಿಯ ನಂತರ ಲಭಿಸಲಿವೆ ಎಂದು ತಿಳಿಸಿದ್ದಾರೆ. ಚಾಕಳ್ಳಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಹುಲಿ ಸೆರೆ ಕಾರ್ಯಾಚರಣೆ ಸ್ಥಳದಲ್ಲಿ ಹುಲಿ ಚಲನವಲನ ಪತ್ತೆಗೆ ಟ್ರಾಪ್ ಕ್ಯಾಮೆರಾಗಳು, ನೆಟ್ವರ್ಕ್ ಕ್ಯಾಮೆರಾಗಳು, ಡ್ರೋನ್, ಬೋನುಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ: ೯೪೮೧೯೯೬೦೨೬ ಅಥವಾ ೧೯೨೬ಗೆ ಮಾಹಿತಿ ನೀಡಬೇಕು. ಹುಲಿ ಕುರಿತಂತೆ ಯಾವುದೇ ಸುಳ್ಳು ಸುದ್ದಿ ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…