Andolana originals

ಎಚ್‌ಡಿ ಕೋಟೆ: ಹುಲಿ ಸೆರೆ ಕಾರ್ಯಾಚರಣೆ ಬಿರುಸು

ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಕೋಟೆ ವಲಯ ಅರಣ್ಯ ಅಧಿಕಾರಿ ಪೂಜಾ ತಿಳಿಸಿದ್ದಾರೆ.

ಶಾಂತಿಪುರ, ಬೋಚಿಕಟ್ಟೆ ಗ್ರಾಮಗಳ ಬಳಿ ಕೂಂಬಿಂಗ್ ನಡೆಸಿದ್ದು, ಹಳೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಸಂಜೆ ಸುಮಾರು ೪:೩೦ ಗಂಟೆ ಸಮಯದಲ್ಲಿ ಕೆ. ಜಿ. ಹುಂಡಿ ಗ್ರಾಮದಲ್ಲಿ ಹುಲಿ ಮೇಕೆಯನ್ನು ತಿಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿ ಸಮೇತ ಸ್ಥಳಕ್ಕೆ ತೆರಳಿ ಪರಿಶೀಲಿಸಿ ನೋಡಿದಾಗ ಸದರಿ ಮೇಕೆಯ ಮೇಲೆ ಮೇಲ್ನೋಟಕ್ಕೆ ಚಿರತೆ, ಹುಲಿ ಅಥವಾ ಯಾವುದೇ ವನ್ಯ ಪ್ರಾಣಿ ದಾಳಿ ಮಾಡಿರುವ ಕುರು ಹುಗಳು ಕಂಡು ಬಂದಿಲ್ಲ. ಹೆಚ್ಚಿನ ವಿವರಗಳು ಪಶುವೈದ್ಯಕೀಯ ಪರೀಕ್ಷೆ ವರದಿಯ ನಂತರ ಲಭಿಸಲಿವೆ ಎಂದು ತಿಳಿಸಿದ್ದಾರೆ. ಚಾಕಳ್ಳಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹುಲಿ ಸೆರೆ ಕಾರ್ಯಾಚರಣೆ ಸ್ಥಳದಲ್ಲಿ ಹುಲಿ ಚಲನವಲನ ಪತ್ತೆಗೆ ಟ್ರಾಪ್ ಕ್ಯಾಮೆರಾಗಳು, ನೆಟ್ವರ್ಕ್ ಕ್ಯಾಮೆರಾಗಳು, ಡ್ರೋನ್, ಬೋನುಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ: ೯೪೮೧೯೯೬೦೨೬ ಅಥವಾ ೧೯೨೬ಗೆ ಮಾಹಿತಿ ನೀಡಬೇಕು. ಹುಲಿ ಕುರಿತಂತೆ ಯಾವುದೇ ಸುಳ್ಳು ಸುದ್ದಿ ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿದ್ದಾರೆ.

 

 

andolana

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

4 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

19 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

35 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago