ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಕೋಟೆ ವಲಯ ಅರಣ್ಯ ಅಧಿಕಾರಿ ಪೂಜಾ ತಿಳಿಸಿದ್ದಾರೆ.
ಶಾಂತಿಪುರ, ಬೋಚಿಕಟ್ಟೆ ಗ್ರಾಮಗಳ ಬಳಿ ಕೂಂಬಿಂಗ್ ನಡೆಸಿದ್ದು, ಹಳೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಸಂಜೆ ಸುಮಾರು ೪:೩೦ ಗಂಟೆ ಸಮಯದಲ್ಲಿ ಕೆ. ಜಿ. ಹುಂಡಿ ಗ್ರಾಮದಲ್ಲಿ ಹುಲಿ ಮೇಕೆಯನ್ನು ತಿಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿ ಸಮೇತ ಸ್ಥಳಕ್ಕೆ ತೆರಳಿ ಪರಿಶೀಲಿಸಿ ನೋಡಿದಾಗ ಸದರಿ ಮೇಕೆಯ ಮೇಲೆ ಮೇಲ್ನೋಟಕ್ಕೆ ಚಿರತೆ, ಹುಲಿ ಅಥವಾ ಯಾವುದೇ ವನ್ಯ ಪ್ರಾಣಿ ದಾಳಿ ಮಾಡಿರುವ ಕುರು ಹುಗಳು ಕಂಡು ಬಂದಿಲ್ಲ. ಹೆಚ್ಚಿನ ವಿವರಗಳು ಪಶುವೈದ್ಯಕೀಯ ಪರೀಕ್ಷೆ ವರದಿಯ ನಂತರ ಲಭಿಸಲಿವೆ ಎಂದು ತಿಳಿಸಿದ್ದಾರೆ. ಚಾಕಳ್ಳಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಹುಲಿ ಸೆರೆ ಕಾರ್ಯಾಚರಣೆ ಸ್ಥಳದಲ್ಲಿ ಹುಲಿ ಚಲನವಲನ ಪತ್ತೆಗೆ ಟ್ರಾಪ್ ಕ್ಯಾಮೆರಾಗಳು, ನೆಟ್ವರ್ಕ್ ಕ್ಯಾಮೆರಾಗಳು, ಡ್ರೋನ್, ಬೋನುಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ: ೯೪೮೧೯೯೬೦೨೬ ಅಥವಾ ೧೯೨೬ಗೆ ಮಾಹಿತಿ ನೀಡಬೇಕು. ಹುಲಿ ಕುರಿತಂತೆ ಯಾವುದೇ ಸುಳ್ಳು ಸುದ್ದಿ ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…