Andolana originals

ಎಚ್‌ಡಿ ಕೋಟೆ: ಹುಲಿ ಸೆರೆ ಕಾರ್ಯಾಚರಣೆ ಬಿರುಸು

ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಕೋಟೆ ವಲಯ ಅರಣ್ಯ ಅಧಿಕಾರಿ ಪೂಜಾ ತಿಳಿಸಿದ್ದಾರೆ.

ಶಾಂತಿಪುರ, ಬೋಚಿಕಟ್ಟೆ ಗ್ರಾಮಗಳ ಬಳಿ ಕೂಂಬಿಂಗ್ ನಡೆಸಿದ್ದು, ಹಳೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಸಂಜೆ ಸುಮಾರು ೪:೩೦ ಗಂಟೆ ಸಮಯದಲ್ಲಿ ಕೆ. ಜಿ. ಹುಂಡಿ ಗ್ರಾಮದಲ್ಲಿ ಹುಲಿ ಮೇಕೆಯನ್ನು ತಿಂದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿ ಸಮೇತ ಸ್ಥಳಕ್ಕೆ ತೆರಳಿ ಪರಿಶೀಲಿಸಿ ನೋಡಿದಾಗ ಸದರಿ ಮೇಕೆಯ ಮೇಲೆ ಮೇಲ್ನೋಟಕ್ಕೆ ಚಿರತೆ, ಹುಲಿ ಅಥವಾ ಯಾವುದೇ ವನ್ಯ ಪ್ರಾಣಿ ದಾಳಿ ಮಾಡಿರುವ ಕುರು ಹುಗಳು ಕಂಡು ಬಂದಿಲ್ಲ. ಹೆಚ್ಚಿನ ವಿವರಗಳು ಪಶುವೈದ್ಯಕೀಯ ಪರೀಕ್ಷೆ ವರದಿಯ ನಂತರ ಲಭಿಸಲಿವೆ ಎಂದು ತಿಳಿಸಿದ್ದಾರೆ. ಚಾಕಳ್ಳಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹುಲಿ ಸೆರೆ ಕಾರ್ಯಾಚರಣೆ ಸ್ಥಳದಲ್ಲಿ ಹುಲಿ ಚಲನವಲನ ಪತ್ತೆಗೆ ಟ್ರಾಪ್ ಕ್ಯಾಮೆರಾಗಳು, ನೆಟ್ವರ್ಕ್ ಕ್ಯಾಮೆರಾಗಳು, ಡ್ರೋನ್, ಬೋನುಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಹುಲಿ ಚಲನವಲನ ಕಂಡಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ: ೯೪೮೧೯೯೬೦೨೬ ಅಥವಾ ೧೯೨೬ಗೆ ಮಾಹಿತಿ ನೀಡಬೇಕು. ಹುಲಿ ಕುರಿತಂತೆ ಯಾವುದೇ ಸುಳ್ಳು ಸುದ್ದಿ ವದಂತಿ ಹಬ್ಬಿಸಬಾರದು ಎಂದು ಮನವಿ ಮಾಡಿದ್ದಾರೆ.

 

 

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

10 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

11 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

12 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

17 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

17 hours ago