Andolana originals

ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಾಡಂಚಿನ ಗ್ರಾಮಗಳಾದ ಮೈಲಾಪುರ, ಬಾಡಗ ಬಾಣಂಗಾಲ, ಮಾರ್ಗೋಲ್ಲಿ, ತೂಪಾನ ಕೊಲ್ಲಿ, ಎಲ್.ಕಿಲ್.ಬೆಟ್ಟ, ಮಠ, ಹುಂಡಿ, ಪಟ್ಟಮ್ಮಡ ಎಸ್ಟೇಟ್ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಎರಡು ವರ್ಷಗಳಿಂದ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಸಿದ್ದಾಪುರ -ಮೈಸೂರು ಮುಖ್ಯ ರಸ್ತೆ , ಹುಂಡಿ-ಗೋಣಿಕೊಪ್ಪ ಮುಖ್ಯ ರಸ್ತೆಗಳಲ್ಲಿ ಹಗಲು ರಾತ್ರಿಯಲ್ಲೂ ವಾಹನ ಚಾಲಕರಿಗೆ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಇದನ್ನು ಸ್ಥಳೀಯರು ವಿಡಿಯೋ ಚಿತ್ರೀಕರಣ ಕೂಡ ಮಾಡಿದ್ದಾರೆ.

ಹುಲಿಯ ಓಡಾಟದಿಂದ ಸ್ಥಳೀಯ ರೈತರು, ಕಾರ್ಮಿಕರು ಮತ್ತು ನಿವಾಸಿಗಳು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರು ಹುಲಿ ದಾಳಿಯಿಂದ ಪಾರಾಗಲು ಯತ್ನಿಸಿ ಬಿದ್ದು ಗಾಯಗೊಂಡ ಘಟನೆಗಳೂ ಇತ್ತೀಚೆಗೆ ನಡೆದಿವೆ. ಹೀಗಾಗಿ ಆದಷ್ಟು ಬೇಗ ಹುಲಿಗಳನ್ನು ಸೆರೆಹಿಡಿಯಬೇಕೆಂದು ಒತ್ತಾಯಿಸಿದ್ದಾರೆ.

ಮನೆಯ ಸಮೀಪವೇ ಮೇಯಲು ಬಿಟ್ಟ ಹಸುಗಳ ಮೇಲೆ ಹಾಡುಹಗಲೇ ಹುಲಿ ದಾಳಿ ಮಾಡಿ ಬಲಿ ಪಡೆದುಕೊಳ್ಳುತ್ತಿದೆ. ಮಠ ಗ್ರಾಮದಲ್ಲಿ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಟಾಟಾ ಕಾಫಿ ಸಂಸ್ಥೆಗೆ ಸೇರಿದ ಬಾಣಂಗಾಲದ ಎಲ್.ಕಿಲ್.ಕಾಫಿ ತೋಟದ ಲೈನ್ ಮನೆಗಳ ಸುತ್ತ ಬೀಡಾಡಿ ಹಸುಗಳು ಇರುವುದರಿಂದ ಹುಲಿ ತೋಟದಲ್ಲಿ ಬೀಡು ಬಿಟ್ಟಿದೆ ಎನ್ನಲಾಗುತ್ತಿದೆ.

ಇದನ್ನು ಓದಿ: ಈಡೇರಿದ ಸಾಲಿಗ್ರಾಮ ಜನತೆಯ ದಶಕಗಳ ಬೇಡಿಕೆ

ಎರಡು ವರ್ಷಗಳಲ್ಲಿ ಈ ಭಾಗದಲ್ಲಿ ೪೦ಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿದೆ. ಮಠ ಗ್ರಾಮದ ಚಂದ್ರ, ಜೋನ್, ಬಾಬು ರಾಜನ್, ಸರ್ಲಿ, ಹೇಮಚಂದ್ರನವರ ಹಸುಗಳನ್ನು ಬಲಿ ಪಡೆದಿದೆ. ಅರಣ್ಯ ಇಲಾಖೆ ಪ್ರತಿ ಹುಲಿ ದಾಳಿ ನಂತರ ಹುಲಿಯ ಚಲನವನ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ಹಾಗೂ ಸ್ಥಳದಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ಹುಲಿಯ ಚಲನವನಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಆದರೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

” ಕಾಡು ಪ್ರಾಣಿ-ಮಾನವ ಸಂಘರ್ಷ ಹೆಚ್ಚಾಗಿದೆ. ಕಾಡು ಪ್ರಾಣಿಗಳು ಆಹಾರ ಅರಸಿ ಬಂದು ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ. ಕೆಲವು ಕಾಡು ಪ್ರಾಣಿಗಳು ನಾಡಿಗೆ ಬಂದು ತಮ್ಮ ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳುತ್ತಿವೆ. ಕಾಡಿನಿಂದ ನಾಡಿಗೆ ಬರುವುದನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.”

-ಹೇಮಂತ್, ಸ್ಥಳೀಯರು, ಮಠ ಗ್ರಾಮ ಮಾಲ್ದಾರೆ ಸುತ್ತಮುತ್ತ

” ಗ್ರಾಮದ ಕಾಫಿ ತೋಟದಲ್ಲಿ ಪದೇ ಪದೇ ಹುಲಿ ಪ್ರತ್ಯಕ್ಷವಾಗುತ್ತಿದ್ದು, ಹುಲಿಗಳ ದಾಳಿಯಿಂದ ಸಾಕು ಪ್ರಾಣಿಗಳು ಸಾವನ್ನಪ್ಪುತ್ತಿದೆ. ಮುಂದಿನ ದಿನಗಳಲ್ಲಿ ಮನುಷ್ಯರ ಮೇಲೂ ದಾಳಿ ಮಾಡುವಸಾಧ್ಯತೆ ಇದೆ. ಹುಲಿಯನ್ನು ಸೆರೆ ಹಿಡಿದುಸ್ಥಳಾಂತರ ಮಾಡದಿದ್ದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು.”

– ಮಹಮ್ಮದ್ ಅಲಿ, ಮಾಲ್ದಾರೆ ಗ್ರಾಪಂ ಸದಸ್ಯ

” ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಮತ್ತು ಬೆಳೆಗಾರರು ಕಂಗಾಲಾಗಿದ್ದು, ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಗ್ರಾಮಗಳಲ್ಲಿ ಕೆಲ ದಿನಗಳಿಂದ ಹಾಡಹಗಲೇ ಹುಲಿ ಓಡಾಡುತ್ತಿದೆ. ಕೂಡಲೇ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು.”

-ಹೇಮಾವತಿ, ಗ್ರಾಮಸ್ಥರು, ಮಠ ಗ್ರಾಮ

” ಮೆಟ್ಟಿಕುಪ್ಪೆಯಿಂದ ನಾಗರಹೊಳೆ ಅರಣ್ಯದ ಮುಖಾಂತರ ಮಾಲ್ದಾರೆ ಭಾಗಕ್ಕೆ ಹುಲಿ ಬಂದಿದ್ದು, ಈ ಹುಲಿಯನ್ನು ಸೆರೆ ಹಿಡಿಯಲು ಅನುಮತಿಗಾಗಿ ಮೇಲಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದೀಗ ಅನುಮತಿ ದೊರೆತಿದ್ದು, ಹುಲಿಯ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ. ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.”

-ಗಂಗಾಧರ್, ತಿತಿಮತಿ ವಲಯ ಅರಣ್ಯಾಧಿಕಾರಿ

ಕೃಷ್ಣ ಸಿದ್ದಾಪುರ

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

11 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

11 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

12 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

13 hours ago