Andolana originals

ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಾಡಂಚಿನ ಗ್ರಾಮಗಳಾದ ಮೈಲಾಪುರ, ಬಾಡಗ ಬಾಣಂಗಾಲ, ಮಾರ್ಗೋಲ್ಲಿ, ತೂಪಾನ ಕೊಲ್ಲಿ, ಎಲ್.ಕಿಲ್.ಬೆಟ್ಟ, ಮಠ, ಹುಂಡಿ, ಪಟ್ಟಮ್ಮಡ ಎಸ್ಟೇಟ್ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಎರಡು ವರ್ಷಗಳಿಂದ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಸಿದ್ದಾಪುರ -ಮೈಸೂರು ಮುಖ್ಯ ರಸ್ತೆ , ಹುಂಡಿ-ಗೋಣಿಕೊಪ್ಪ ಮುಖ್ಯ ರಸ್ತೆಗಳಲ್ಲಿ ಹಗಲು ರಾತ್ರಿಯಲ್ಲೂ ವಾಹನ ಚಾಲಕರಿಗೆ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಇದನ್ನು ಸ್ಥಳೀಯರು ವಿಡಿಯೋ ಚಿತ್ರೀಕರಣ ಕೂಡ ಮಾಡಿದ್ದಾರೆ.

ಹುಲಿಯ ಓಡಾಟದಿಂದ ಸ್ಥಳೀಯ ರೈತರು, ಕಾರ್ಮಿಕರು ಮತ್ತು ನಿವಾಸಿಗಳು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡುತ್ತಿದ್ದ ಕಾರ್ಮಿಕರು ಹುಲಿ ದಾಳಿಯಿಂದ ಪಾರಾಗಲು ಯತ್ನಿಸಿ ಬಿದ್ದು ಗಾಯಗೊಂಡ ಘಟನೆಗಳೂ ಇತ್ತೀಚೆಗೆ ನಡೆದಿವೆ. ಹೀಗಾಗಿ ಆದಷ್ಟು ಬೇಗ ಹುಲಿಗಳನ್ನು ಸೆರೆಹಿಡಿಯಬೇಕೆಂದು ಒತ್ತಾಯಿಸಿದ್ದಾರೆ.

ಮನೆಯ ಸಮೀಪವೇ ಮೇಯಲು ಬಿಟ್ಟ ಹಸುಗಳ ಮೇಲೆ ಹಾಡುಹಗಲೇ ಹುಲಿ ದಾಳಿ ಮಾಡಿ ಬಲಿ ಪಡೆದುಕೊಳ್ಳುತ್ತಿದೆ. ಮಠ ಗ್ರಾಮದಲ್ಲಿ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಟಾಟಾ ಕಾಫಿ ಸಂಸ್ಥೆಗೆ ಸೇರಿದ ಬಾಣಂಗಾಲದ ಎಲ್.ಕಿಲ್.ಕಾಫಿ ತೋಟದ ಲೈನ್ ಮನೆಗಳ ಸುತ್ತ ಬೀಡಾಡಿ ಹಸುಗಳು ಇರುವುದರಿಂದ ಹುಲಿ ತೋಟದಲ್ಲಿ ಬೀಡು ಬಿಟ್ಟಿದೆ ಎನ್ನಲಾಗುತ್ತಿದೆ.

ಇದನ್ನು ಓದಿ: ಈಡೇರಿದ ಸಾಲಿಗ್ರಾಮ ಜನತೆಯ ದಶಕಗಳ ಬೇಡಿಕೆ

ಎರಡು ವರ್ಷಗಳಲ್ಲಿ ಈ ಭಾಗದಲ್ಲಿ ೪೦ಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿದೆ. ಮಠ ಗ್ರಾಮದ ಚಂದ್ರ, ಜೋನ್, ಬಾಬು ರಾಜನ್, ಸರ್ಲಿ, ಹೇಮಚಂದ್ರನವರ ಹಸುಗಳನ್ನು ಬಲಿ ಪಡೆದಿದೆ. ಅರಣ್ಯ ಇಲಾಖೆ ಪ್ರತಿ ಹುಲಿ ದಾಳಿ ನಂತರ ಹುಲಿಯ ಚಲನವನ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ಹಾಗೂ ಸ್ಥಳದಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ಹುಲಿಯ ಚಲನವನಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಆದರೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

” ಕಾಡು ಪ್ರಾಣಿ-ಮಾನವ ಸಂಘರ್ಷ ಹೆಚ್ಚಾಗಿದೆ. ಕಾಡು ಪ್ರಾಣಿಗಳು ಆಹಾರ ಅರಸಿ ಬಂದು ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ. ಕೆಲವು ಕಾಡು ಪ್ರಾಣಿಗಳು ನಾಡಿಗೆ ಬಂದು ತಮ್ಮ ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳುತ್ತಿವೆ. ಕಾಡಿನಿಂದ ನಾಡಿಗೆ ಬರುವುದನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.”

-ಹೇಮಂತ್, ಸ್ಥಳೀಯರು, ಮಠ ಗ್ರಾಮ ಮಾಲ್ದಾರೆ ಸುತ್ತಮುತ್ತ

” ಗ್ರಾಮದ ಕಾಫಿ ತೋಟದಲ್ಲಿ ಪದೇ ಪದೇ ಹುಲಿ ಪ್ರತ್ಯಕ್ಷವಾಗುತ್ತಿದ್ದು, ಹುಲಿಗಳ ದಾಳಿಯಿಂದ ಸಾಕು ಪ್ರಾಣಿಗಳು ಸಾವನ್ನಪ್ಪುತ್ತಿದೆ. ಮುಂದಿನ ದಿನಗಳಲ್ಲಿ ಮನುಷ್ಯರ ಮೇಲೂ ದಾಳಿ ಮಾಡುವಸಾಧ್ಯತೆ ಇದೆ. ಹುಲಿಯನ್ನು ಸೆರೆ ಹಿಡಿದುಸ್ಥಳಾಂತರ ಮಾಡದಿದ್ದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು.”

– ಮಹಮ್ಮದ್ ಅಲಿ, ಮಾಲ್ದಾರೆ ಗ್ರಾಪಂ ಸದಸ್ಯ

” ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಮತ್ತು ಬೆಳೆಗಾರರು ಕಂಗಾಲಾಗಿದ್ದು, ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಗ್ರಾಮಗಳಲ್ಲಿ ಕೆಲ ದಿನಗಳಿಂದ ಹಾಡಹಗಲೇ ಹುಲಿ ಓಡಾಡುತ್ತಿದೆ. ಕೂಡಲೇ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು.”

-ಹೇಮಾವತಿ, ಗ್ರಾಮಸ್ಥರು, ಮಠ ಗ್ರಾಮ

” ಮೆಟ್ಟಿಕುಪ್ಪೆಯಿಂದ ನಾಗರಹೊಳೆ ಅರಣ್ಯದ ಮುಖಾಂತರ ಮಾಲ್ದಾರೆ ಭಾಗಕ್ಕೆ ಹುಲಿ ಬಂದಿದ್ದು, ಈ ಹುಲಿಯನ್ನು ಸೆರೆ ಹಿಡಿಯಲು ಅನುಮತಿಗಾಗಿ ಮೇಲಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದೀಗ ಅನುಮತಿ ದೊರೆತಿದ್ದು, ಹುಲಿಯ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ. ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.”

-ಗಂಗಾಧರ್, ತಿತಿಮತಿ ವಲಯ ಅರಣ್ಯಾಧಿಕಾರಿ

ಕೃಷ್ಣ ಸಿದ್ದಾಪುರ

ಆಂದೋಲನ ಡೆಸ್ಕ್

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

38 mins ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

1 hour ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

7 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

8 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

8 hours ago