Andolana originals

ನಾಗರಹೊಳೆ ಸಫಾರಿ ತಾಣಗಳಲ್ಲಿ ಸಮಯ, ದರ ಪರಿಷ್ಕರಣೆ

ದಾ.ರಾ.ಮಹೇಶ್

ಸಫಾರಿ ವೀಕ್ಷಣೆ ೨ ಗಂಟೆಗೆ ಸೀಮಿತ; ಹೆಚ್ಚುವರಿ ಟ್ರಿಪ್ ಆಯೋಜನೆ 

ವೀರನಹೊಸಹಳ್ಳಿ: ನಾಗರಹೊಳೆ ಸಫಾರಿ ತಾಣಗಳಲ್ಲಿ ಸಫಾರಿ ಅವಧಿಯನ್ನು ಕಡಿತಗೊಳಿಸಲಾಗಿದ್ದು, ಪ್ರವೇಶ ದರ, ಕ್ಯಾಮೆರಾ ಶುಲ್ಕ ಹಾಗೂ ವಿಶ್ರಾಂತಿ ಗೃಹಗಳ ಬಾಡಿಗೆ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲಾಗಿದೆ.

ಸಫಾರಿ ವೀಕ್ಷಣೆಗೆ ಕೆಲವರು ಮುಂಚಿತವಾಗಿಯೇ ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡಿಕೊಂಡರೆ, ಇನ್ನೂ ಕೆಲವರು ಸಫಾರಿ ಕೇಂದ್ರದ ಬಳಿ ಸರತಿಯಲ್ಲಿ ಕಾದು ನಿಂತು ಟಿಕೆಟ್ ಸಿಕ್ಕಲ್ಲಿ ಮಾತ್ರ ಸಫಾರಿಗೆ ಅವಕಾಶವಿದ್ದರಿಂದ ಟಿಕೆಟ್ ಸಿಗದವರು ರಸ್ತೆಯಲ್ಲಿ ಸಿಗುವ ಪ್ರಾಣಿಗಳನ್ನು ವೀಕ್ಷಿಸಿ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಬೇಕಿತ್ತು.

ಮೂರು ಕಡೆ ಸಫಾರಿ ಕೇಂದ್ರ: ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗೇಟ್, ಕೊಡಗು ಭಾಗದ ನಾಣಚ್ಚಿ ಗೇಟ್ ಹಾಗೂ ಎಚ್.ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ವಲಯದ ದಮ್ಮನಕಟ್ಟೆಗಳಲ್ಲಿ ಒಟ್ಟು ೩ ಸಫಾರಿ ಕೇಂದ್ರಗಳಿದ್ದು, ಪ್ರವಾಸಿಗರಿಗೆ ಅನುಕೂಲವಾಗುವಂತೆ ದರ, ಸಮಯ ಪರಿಷ್ಕರಿಸಲಾಗಿದೆ. ಮೂರೂ ಕೇಂದ್ರಗಳಲ್ಲೂ ದೊಡ್ಡವರಿಗೆ ೬೦೦ ರೂ., ಮಕ್ಕಳಿಗೆ ೩೦೦ ರೂ. ಶುಲ್ಕ ನಿಗದಿಪಡಿಸಲಾಗಿದೆ. ಈ ಹಿಂದೆ ಒಂದೊಂದು ಕೇಂದ್ರಗಳಲ್ಲಿ ಒಂದೊಂದು ಸಮಯ, ಬೇರೆ ಬೇರೆ ರೀತಿಯ ದರವಿತ್ತು.

ಜೀಪ್ ಸಫಾರಿಗೆ ತಲಾ ಸಾವಿರ ರೂ.: ಮೂರು ಸಫಾರಿ ಕೇಂದ್ರಗಳಲ್ಲೂ ಜೀಪ್ ಸಫಾರಿಗೆ ಒಂದೇ ರೀತಿಯ ಶುಲ್ಕ ನಿಗದಿಪಡಿಸಿದ್ದು, ದಮ್ಮನಕಟ್ಟೆಯಲ್ಲಿ ಒಬ್ಬರಿಗೆ ೮೫೫ ರೂ. ಗಳಿಂದ ೧,೦೦೦ ರೂ.ಗೆ ಹೆಚ್ಚಿಸಲಾಗಿದೆ. ಇದು ವೀರನಹೊಸಹಳ್ಳಿ ಗೇಟ್ ಹಾಗೂ ನಾಣಚ್ಚಿ ಗೇಟ್‌ನ ಸಫಾರಿಗೂ ಅನ್ವಯಿಸಲಿದೆ. ಆದರೆ ಸಫಾರಿ ಸಮಯವನ್ನು ೨ ಗಂಟೆಗೆ ಇಳಿಸಲಾಗಿದೆ.

ನಾಗರಹೊಳೆ ಉದ್ಯಾನದಲ್ಲಿ ಸಫಾರಿ ದರ, ಕ್ಯಾಮೆರಾ ಶುಲ್ಕ, ವಸತಿ ಗೃಹ ಬಾಡಿಗೆಯನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಷ್ಕರಿಸಿ ಆದೇಶಿಸಿದ್ದು ಎಂದಿನಂತೆ ಪ್ರವಾಸಿಗರು ಹಾಗೂ ವನಪ್ರಿಯರು ಇಲಾಖೆಯೊಂದಿಗೆ ಸಹಕರಿಸುವಂತೆ ನಾಗರ ಹೊಳೆ ಉದ್ಯಾನದ ಮುಖ್ಯಸ್ಥರಾದ ಪಿ.ಎ.ಸೀಮಾ ಮನವಿ ಮಾಡಿದ್ದಾರೆ.

ಡಿಎಲ್‌ಎಸ್‌ಆರ್ ೭೦ ಎಂ.ಎಂ.ಕ್ಯಾಮೆರಾಗಳಿಗೆ ಇದ್ದ ಶುಲ್ಕವನ್ನು ರದ್ದುಗೊಳಿಸಲಾಗಿದೆ. ಡಿಎಲ್‌ಎಸ್‌ಆರ್ ಕ್ಯಾಮೆರಾದ ೨೦೦ ಎಂ.ಎಂ.ನಿಂದ ೫೦೦ ಎಂ.ಎಂ. ವರೆಗೆ ೧೦೦೦ ರೂ. ಹಾಗೂ ಶೇ.೧೮ ಜಿಎಸ್ ಮತ್ತು ೫೦೦ ಎಂ.ಎಂ.ಗಿಂತ ಹೆಚ್ಚಿನ ಲೆನ್ಸ್ ಹೊಂದಿರುವ ಕ್ಯಾಮೆರಾಗಳಿಗೆ ಹಿಂದಿನಂತೆ ೧,೫೦೦ ರೂ. ಜೊತೆಗೆ , ೧,೮೦೦ ರೂ. ನಿಗದಿಪಡಿಸಲಾಗಿದೆ.

ಯಾವ್ಯಾವ ಸಮಯಕ್ಕೆ ಸಫಾರಿ?

ಕೊಡಗಿನ ಕುಟ್ಟ ಸಮೀಪದ ನಾಣಚ್ಚಿ ಗೇಟ್‌ನಿಂದ ಬೆಳಿಗ್ಗೆ ೬ರಿಂದ ೮, ೮.೧೫ರಿಂದ ೧೦.೧೫, ಮಧ್ಯಾಹ್ನ ೨.೧೫ರಿಂದ ೪.೧೫, ೪.೩೦ರಿಂದ ೬.೩೦ರವರೆಗೆ ನಾಲ್ಕು ಬಾರಿ ಸಫಾರಿಗೆ ಅವಕಾಶ ಕಲ್ಪಿಸಲಾಗಿದೆ. ದಮ್ಮನಕಟ್ಟೆ ಸಫಾರಿ ಕೇಂದ್ರದಿಂದ ಬೆಳಿಗ್ಗೆ ೬ರಿಂದ ೮, ೮.೧೫ರಿಂದ ೧೦.೧೫, ಮಧ್ಯಾಹ್ನ ೨.೧೫ರಿಂದ ೪.೧೫, ೪.೩೦ರಿಂದ ೬.೩೦ರವರೆಗೆ ಪ್ರತಿದಿನ ೪ ಟ್ರಿಪ್ ಸಫಾರಿ ವ್ಯವಸ್ಥೆ ಇದೆ. ವೀರನಹೊಸಹಳ್ಳಿ ಗೇಟ್‌ನಿಂದ ಬೆಳಿಗ್ಗೆ ೬.೧೫, ಮಧ್ಯಾಹ್ನ ೩ರಿಂದ (ಬೆಳಿಗ್ಗೆ ಮತ್ತು ಸಂಜೆ ತಲಾ ಒಂದು ಬಾರಿ) ಸಫಾರಿಗೆ ಅವಕಾಶ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

5 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

8 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

8 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

8 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

10 hours ago