ಓದುಗರ ಪತ್ರ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಹಾರಂಗಿ ಜಲಾಶಯ, ಹೇಮಾವತಿ ಜಲಾಶಯ, ಕಬಿನಿ ಜಲಾಶಯ ಹಾಗೂ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ತುಂಬಿದ್ದರೂ ಸರ್ಕಾರ ಇನ್ನೂ ಕೆರೆ ಕಟ್ಟೆಗಳನ್ನು ತುಂಬಿಸದೇ ಇರುವುದು ಸರಿಯಾದ ಕ್ರಮವಲ್ಲ.
ರೈತರ ಅತಿ ಮುಖ್ಯವಾದ ಬೇಡಿಕೆ ಎಂದರೆ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಇದರಿಂದ ಅಂತರ್ಜಲ ಹೆಚ್ಚಾಗಿ ಬಾವಿ ಮತ್ತು ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ರೈತರಿಗೆ, ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲಿ ತೆಗೆಸುವುದು ಉತ್ತಮ. ಮಳೆಗಾಲದಲ್ಲಿ ಕೆರೆಗಳ ಹೂಳನ್ನು ತೆಗೆಸಲು ಪ್ರಾರಂಭಿಸಿದರೆ ಹೊಳೆಯಲ್ಲಿ ಹುಣಸೆ ಹಣ್ಣನ್ನು ತೊಳೆದ ಹಾಗೆ ಆಗುತ್ತದೆ. ಆದಷ್ಟು ಬೇಗ ನೀರಾವರಿ ಇಲಾಖೆಯು ಕೆರೆ ಕಟ್ಟೆಗಳಿಗೆ ನೀರನ್ನು ತುಂಬಿಸಲು ಮುಂದಾಗಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…