ಓದುಗರ ಪತ್ರ
ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ ಸಂಗತಿ. ಈ ಕೃತ್ಯದಲ್ಲಿ ತೊಡಗಿದ್ದ ೮ ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ.
ಆದರೆ ಬೆಂಗಳೂರು ಸೇರಿದಂತೆ ದೇಶದ ಇತರೆ ನಗರಗಳಿಗೆ ಮಾದಕ ದ್ರವ್ಯ ಜಾಲವು ವ್ಯಾಪಿಸಿದ್ದು, ಇದು ಯುವ ಸಮೂಹಕ್ಕೆ ಮಾರಕವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೊಲೀಸ್ ಅಧಿಕಾರಗಳ ವಿಶೇಷ ತಂಡವನ್ನು ರಚಿಸಿ ಮಾದಕ ದ್ರವ್ಯವನ್ನು ಸರಬರಾಜು ಮಾಡುವ ಎಲ್ಲ ಜಾಲಗಳನ್ನು ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಯುವ ಜನಾಂಗಕ್ಕೆ ಮಾರಕವಾಗಿರುವ ಮಾದಕ ವಸ್ತು ಸರಬರಾಜು ಜಾಲವನ್ನು ಮಟ್ಟಹಾಕಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…