Andolana originals

ಎಚ್.ಡಿ.ಕೋಟೆಯಲ್ಲಿ ಇಂದಿನಿಂದ ನವರಾತ್ರಿ ಉತ್ಸವ

ವಿವಿಧ ದೇವಾಲಯಗಳಲ್ಲಿ ಸಿದ್ಧತೆ; ಕಂಗೊಳಿಸುತ್ತಿರುವ ದೀಪಾಲಂಕಾರ

ಮಂಜು ಕೋಟೆ

ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು ವಿಜಯದಶಮಿಯನ್ನು ಅದ್ಧೂರಿಯಾಗಿ ಆಚರಿಸಲು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಮತ್ತು ವರದರಾಜ ಸ್ವಾಮಿ ದೇವಸ್ಥಾನ ಸಮಿತಿಯವರು ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಲು ವಿಶೇಷ ಅಲಂಕಾರ, ಸಿದ್ಧತೆ ಕೈಗೊಂಡಿದ್ದಾರೆ.

ಪಟ್ಟಣದ 1ನೇ ಮುಖ್ಯ ರಸ್ತೆಯಲ್ಲಿರುವ ಚೋಳರ ಕಾಲದ ಮುಜರಾಯಿ ಇಲಾಖೆಯ ಶ್ರೀ ವರದರಾಜ ಸ್ವಾಮಿ ದೇವಸ್ಥಾನದಲ್ಲಿ ಮತ್ತು ಹೌಸಿಂಗ್ ಬೋರ್ಡಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ವಿಶೇಷ ಪೂಜಾ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭಗೊಂಡಿ ರುವುದರಿಂದ ಒಂದನೇ ಮುಖ್ಯ ರಸ್ತೆ ಮತ್ತು ಚಾಮುಂಡೇಶ್ವರಿ ಹೌಸಿಂಗ್ ಬೋರ್ಡಿನ ಚಾಮುಂಡೇಶ್ವರಿ ದೇವಸ್ಥಾನದ ರಸ್ತೆಯ ಬದಿಗಳಲ್ಲಿ ಅಳವಡಿಸಿರುವ ಜಗಜಗಿಸುವ ದೀಪಾಲಂಕಾರ ಜನರನ್ನು ಆಕರ್ಷಿಸುತ್ತಿದೆ.

ಶ್ರೀ ವರದರಾಜು ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 14 ದಿನಗಳ ಕಾಲ ಶ್ರೀ ವರದರಾಜ ಸ್ವಾಮಿ, ಶ್ರೀ ದೇವಿ ಭೂದೇವಿ ದೇವರಿಗೆ ಹೂವಿನ ಅಲಂಕಾರ, ಹೋಮ ನಡೆಯಲಿದ್ದು, ಎಲ್ಲ ಜನಾಂಗದವರೂ ಪ್ರತಿನಿತ್ಯ ವಿಶೇಷ ಪೂಜೆಯನ್ನು ನೆರವೇರಿಸುತ್ತಿದ್ದಾರೆ. ಪ್ರತಿದಿನವೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಶಾಸಕ ಅನಿಲ್ ಚಿಕ್ಕಮಾದು, ಸಮಿತಿಯ ಬಿ.ಎಸ್.ರಂಗಯ್ಯ ಅಯ್ಯಂಗಾರ್, ತಹಸಿಲ್ದಾರ್ ಶ್ರೀನಿವಾಸ್, ಆಡಳಿತ ಅಧಿಕಾರಿ ವಿಜಯಕುಮಾರ್, ಡೇರಿ ಶ್ರೀಕಾಂತ್, ದೇವರಾಜು, ಜಯಂತ್, ತಿರುಮಲಾಚಾರ್, ಪೂರ್ಣೇಶ, ಕೆಂಡಗಣ್ಣ ಇತರರು ಕಾರ್ಯಕ್ರಮದ ನೇತೃತ್ವ ಹಾಗೂ ರೂಪರೇಷೆಗೆ ಅಗತ್ಯ ಸಿದ್ಧತೆಯನ್ನು ಕೈಗೊಂಡು ವಿಜಯದಶಮಿ ದಿನದಂದು ಸಂಜೆ 5 ಗಂಟೆಗೆ ಬನ್ನಿಮರಕ್ಕೆ ಪೂಜೆ, ಪೊಲೀಸ್ ಪೂಜೆ ಸಲ್ಲಿಸಿದ ನಂತರ ಅದ್ದೂರಿ ಮೆರವಣಿಗೆ ನಡೆಯಲಿದೆ.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಚಾಮುಂಡೇಶರಿ ದೇವಸ್ಥಾನದಲ್ಲಿ 9 ದಿನಗಳ ಕಾಲ ದೇವಿಗೆ ವಿಶೇಷ ಪೂಜಾಕೈಂಕರ್ಯಗಳು ನೆರವೇರಲಿವೆ. ಜೊತೆಗೆ ವಿಜಯದಶಮಿ ದಿನದಂದು ಚಾಮುಂಡೇಶ್ವರಿ ದೇವಿಯ ವಿಗ್ರಹದೊಂದಿಗೆ ಅನೇಕ ಕಲಾ ತಂಡಗಳೊಂದಿಗೆ ಸ್ತಬ್ಧ ಚಿತ್ರಗಳ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ವಿಜಯದ ಶಮಿಯನ್ನು ಮಿನಿ ದಸರಾದಂತೆ ನೆರವೇರಿಸಲು ಸಮಿತಿಯ ನಟರಾಜ್, ಸತೀಶ್, ದೊಡ್ಡನಾಯಕ, ನಾಗಣ್ಣ, ಬ್ಯಾಂಕ್ ವೀರಪ್ಪ, ರಾಮಯ್ಯ, ಸತೀಶ್ ಆರಾಧ್ಯ, ಸೋಮಶೇಖರ್, ಶ್ರೀಕಾಂತ್, ವಿನಯ್ ಭಜರಂಗಿ ಮತ್ತಿತರರು ಮುಂದಾಗಿದ್ದಾರೆ.

ವಿಶೇಷ ಪೂಜಾ ಕಾರ್ಯಕ್ರಮ: ಮೈಸೂರಿನಲ್ಲಿ ದಸರಾ ಮಹೋತ್ಸವ ಹತ್ತು ದಿನಗಳ ಕಾಲ ಅದ್ದೂರಿಯಾಗಿ ನಡೆದರೆ, ಹೆಚ್.ಡಿ.ಕೋಟೆ ಪಟ್ಟಣದಲ್ಲಿ ಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಭಾಗದ ಜನರಿಗೆ ನವರಾತ್ರಿಯ ಸಂಭ್ರಮವನ್ನು ಕಣ್ಣುಂಬಿಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

12 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

23 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

41 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

2 hours ago