Andolana originals

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್

ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ

ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು ಮಂದಿಯನ್ನು ತನ್ನತ್ತ ಸೆಳೆಯುತ್ತಿದೆ.

ಏ.೭ರಿಂದ ಏ.೧೨ರ ವರೆಗೂ ಶ್ರೀ ಆದಿಚುಂಚನಗಿರಿ ಮಠದ ನೇತೃತ್ವದಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ ನಡೆಯಲಿದೆ.

ಈ ದೇವಸ್ಥಾನದ ವೈಶಿಷ್ಟ್ಯವೇನೆಂದರೆ ಶ್ರೀ ಕಾಲಭೈರವನ ರೂಪವೇ ಶ್ರೀಬಸವ. ಇಂದಿಗೂ ಈ ಕ್ಷೇತ್ರ ಹಲವಾರು ಮಂದಿಗೆ ದೈವ ಕ್ಷೇತ್ರವಾಗಿದ್ದು, ಬಸವಪ್ಪನ ಅನುಗ್ರಹ ಪಡೆಯುವುದೇ ವಿಶೇಷವಾಗಿದೆ.

ಚಿಕ್ಕರಸಿನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನವನ್ನು ಸಾಕಷ್ಟು ಮಂದಿ ಮನೆದೇವರಂತೆ ಕಾಣುತ್ತಾ ಬಂದಿದ್ದಾರೆ. ಮುಖ್ಯವಾಗಿ ಬಸವನನ್ನು ಆರಾಧ್ಯ ದೈವದಂತೆ ಕಂಡು ಪೂಜಿಸುವುದು ಇಲ್ಲಿನ ವಿಶೇಷತೆ.

ನಿತ್ಯವೂ ಅನ್ನದಾಸೋಹ: ಈ ದೇವಸ್ಥಾನದಲ್ಲಿ ನಿತ್ಯವೂ ಅನ್ನದಾಸೋಹ ನಡೆಯುತ್ತದೆ. ಜನಸಾಮಾನ್ಯರು ತಾವು ಬೆಳೆದ ದವಸ ಧಾನ್ಯಗಳನ್ನು ತಂದು ದಾಸೋಹಕ್ಕೆ ನೀಡುತ್ತಾರೆ. ಇನ್ನು ಕೆಲವರು ತಮ್ಮ ಕೈಲಾದ ಮಟ್ಟಿಗೆ ಹಣಕಾಸಿನ ನೆರವನ್ನೂ ಕೊಡುತ್ತಾರೆ.

” ಕಾಲಭೈರವೇಶ್ವರಸ್ವಾಮಿ ಚಿಕ್ಕರಸಿನಕೆರೆ ಕ್ಷೇತ್ರದಲ್ಲಿ ನೆಲೆನಿಂತಿದೆ. ಚುಂಚನಗಿರಿ ಕ್ಷೇತ್ರಕ್ಕೆ ಒಳಪಟ್ಟ ನಂತರ ಉತ್ತಮ ಅಭಿವೃದ್ಧಿಯಾಗಿ ಸಹಸ್ರಾರು ಭಕ್ತಾದಿಗಳನ್ನು ಹೊಂದಿದೆ.”

-ಡಾ.ನಿರ್ಮಲಾನಂದನಾಥಸ್ವಾಮೀಜಿ, ಪೀಠಾಧ್ಯಕ್ಷರು, ಆದಿಚುಂಚನಗಿರಿ ಮಹಾಸಂಸ್ಥಾನ

” ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರ ಪುಣ್ಯಕ್ಷೇತ್ರ ದಕ್ಷಿಣಕಾಶಿ ಎಂದೇ ಪ್ರಸಿದ್ಧಿಗೊಂಡಿದ್ದು, ಇಂದು ರಾಜ್ಯಾದ್ಯಂತ ಬಸವಪ್ಪನ ಮಹಿಮೆಯಿಂದ ಪ್ರಚಲಿತಗೊಂಡಿದೆ. ಹಾಗಾಗಿ ಸಾವಿರಾರು ಭಕ್ತಾದಿಗಳನ್ನು ಹೊಂದಿದೆ.”

-ಯಜಮಾನ್ ಶಿವಲಿಂಗಯ್ಯ, ಅಧ್ಯಕ್ಷರು, ಕಾಲಭೈರವೇಶ್ವರ ಟ್ರಸ್ಟ್

” ಇವತ್ತಿಗೂ ಸುತ್ತಮುತ್ತಲ ಗ್ರಾಮಗಳ ಜನತೆ ಸೇರಿದಂತೆ ನಮ್ಮ ರಾಜ್ಯವಲ್ಲದೇ ಬೇರೆ ರಾಜ್ಯಗಳ ಜನಸಾಮಾನ್ಯರು ಕೂಡ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಜೊತೆಗೆ ಕಾಲ ಭೈರವನ ಪ್ರತಿರೂಪದಂತಿರುವ ಬಸವನಲ್ಲಿ ಹರಕೆ ಮಾಡಿಕೊಳ್ಳುತ್ತಾರೆ ಅವುಗಳು ನೆರವೇರಿದ ನಂತರ ಬಸವಪ್ಪನನ್ನು ಗ್ರಾಮಕ್ಕೆ ಕರೆಸಿ ಮೆರವಣಿಗೆ ನಡೆಸಿ ಪೂಜೆ ಸಲ್ಲಿಸುತ್ತಾರೆ.”

-ಪುಟ್ಟರಾಜು, ಯಜಮಾನರು, ಚಿಕ್ಕರಸಿನಕೆರೆ

” ನಮ್ಮ ರಾಜ್ಯವೂ ಸೇರಿ ದೇಶದ ಸಾಕಷ್ಟು ಮಂದಿ ಈ ದೇವಸ್ಥಾನಕ್ಕೆ ಪ್ರತಿನಿತ್ಯ ಭೇಟಿ ನೀಡುತ್ತಾರೆ. ಬಸಪ್ಪನ ಅನುಗ್ರಹ ಪಡೆಯುತ್ತಾರೆ.”

-ಜೋಗಪ್ಪ, ಬಸವನನ್ನು ನೋಡಿಕೊಳ್ಳುವವರು

ರಥೋತ್ಸವ , ಅನ್ನಸಂತರ್ಪಣೆ:  ಏ.೭ರ ಮಧ್ಯಾಹ್ನ ೩ ಗಂಟೆಗೆ ಕಾಲಭೈರವೇಶ್ವರಸ್ವಾಮಿ ಮಹಾ ರಥೋತ್ಸವ ಹಾಗೂ ದೇವತೆಗಳ ಉತ್ಸವಗಳು, ಅನ್ನಸಂತರ್ಪಣೆಯ ಉಸ್ತುವಾರಿಯನ್ನು ಅರೆಕಲ್ಲುದೊಡ್ಡಿ, ಬನ್ನಹಳ್ಳಿ, ಹೊನ್ನಾಯಕನಹಳ್ಳಿ ಹಾಗೂ ಕಾಂಡಂಕನಹಳ್ಳಿ ಕುಲಬಾಂಧವರು ನಿರ್ವಹಿಸಲಿದ್ದಾರೆ. ಏ.೮ರ ಸಂಜೆ ೫ ಗಂಟೆಗೆ ಓಕಳಿ ಸೇವೆ ಉತ್ಸವ ನಡೆಯಲಿದೆ. ಏ.೧೨ ರಂದು ಮುಕ್ತಾಯಗೊಳ್ಳಲಿದೆ.

ದೇಗುಲ ಬಸವನ ಪವಾಡಗಳು:  ಕಾಲಭೈರವೇಶ್ವರನ ಬಸಪ್ಪನ ವಿಶೇಷವೆಂದರೆ ಕಳ್ಳರು ಹಾಗೂ ಮೋಸಗಾರರಿಗೆ ಸಿಂಹಸ್ವಪ್ನವಾಗಿ ವಿವಿಧ ಗ್ರಾಮಗಳಲ್ಲಿ ದೇವಸ್ಥಾನದ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಸುತ್ತ-ಮುತ್ತಲ ಗ್ರಾಮಗಳ ಹಾಗೂ ಜಿಲ್ಲೆಗಳ ಜನರಲ್ಲಿ ಅಪಾರ ದೈವಭಕ್ತಿಯನ್ನುಂಟು ಮಾಡಿದೆ. ಭಕ್ತರು ದೇವಾಲಯವನ್ನು ಅಭಿವೃದ್ಧಿಪಡಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

13 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

14 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

15 hours ago