ಎಸ್.ಎಸ್.ಭಟ್
ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ
ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.
ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.
ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ
” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”
-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ
” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”
-ನಾಗಮ್ಮ, ಹೆಡತಲೆ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…