Andolana originals

ರೈಲು ನಿಲ್ದಾಣದಲ್ಲಿ ಶೌಚಾಲಯ ಬಂದ್

ಎಸ್.ಎಸ್.ಭಟ್

ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ 

ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.

ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ‍್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.

ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ

” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”

-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ

” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”

-ನಾಗಮ್ಮ, ಹೆಡತಲೆ

ಆಂದೋಲನ ಡೆಸ್ಕ್

Recent Posts

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

11 mins ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

26 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

40 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

52 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

2 hours ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago