Andolana originals

ರೈಲು ನಿಲ್ದಾಣದಲ್ಲಿ ಶೌಚಾಲಯ ಬಂದ್

ಎಸ್.ಎಸ್.ಭಟ್

ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ 

ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.

ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ‍್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.

ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ

” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”

-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ

” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”

-ನಾಗಮ್ಮ, ಹೆಡತಲೆ

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

8 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

9 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

10 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago