ಎಸ್.ಎಸ್.ಭಟ್
ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ
ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.
ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.
ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ
” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”
-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ
” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”
-ನಾಗಮ್ಮ, ಹೆಡತಲೆ
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…