ಎಸ್.ಎಸ್.ಭಟ್
ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ
ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.
ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.
ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ
” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”
-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ
” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”
-ನಾಗಮ್ಮ, ಹೆಡತಲೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…