Andolana originals

ರೈಲು ನಿಲ್ದಾಣದಲ್ಲಿ ಶೌಚಾಲಯ ಬಂದ್

ಎಸ್.ಎಸ್.ಭಟ್

ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ 

ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು… ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಸಹಸ್ರಾರು ಮಂದಿ ರೈಲ್ವೆ ಪ್ರಯಾಣಿಕರು ಈಗ ಶೌಚಾಲಯ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

ಈ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡು ಶೌಚಾಲಯಗಳಿದ್ದು, ಅವುಗಳು ಸಾರ್ವಜನಿಕರಿಗೆ ಪ್ರಯೋಜನವಿಲ್ಲದಂತಾಗಿದೆ. ಆವರಣದ ಬಲ ಭಾಗದಲ್ಲಿ ೩ ವರ್ಷಗಳ ಹಿಂದೆ ಸುಸಜ್ಜಿತವಾದ ಶೌಚಾಲಯವನ್ನು ನಿರ್ಮಾಣ ಮಾಡಲಾಗಿದ್ದು, ಅದಿನ್ನೂ ಲೋಕಾರ್ಪಣೆಯಾಗದೆ ಬೀಗ ಹಾಕಿದ ಸ್ಥಿತಿಯಲ್ಲಿ ನಿರುಪಯುಕ್ತವಾಗಿದೆ.

ಎಡಭಾಗದಲ್ಲಿ ಈವರೆಗೆ ಪ್ರಯಾಣಿಕರು ಹಣ ನೀಡಿ ಬಳಕೆ ಮಾಡುತ್ತಿದ್ದ ಶೌಚಾಲಯಕ್ಕೆ ಕಳೆದ ೧೫ ದಿನಗಳಿಂದ ಬೀಗ ಹಾಕಲಾಗಿದ್ದು, ಪ್ರಯಾಣಿಕರ ಗೋಳು ಕೇಳುವವರ‍್ಯಾರು ಎಂಬಂತಾಗಿದೆ. ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ಜನರು, ಶನಿವಾರ, ಭಾನುವಾರ ಹಾಗೂ ಸೋಮವಾರ ೫,೦೦೦ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲ್ವೆ ನಿಲ್ದಾಣಕ್ಕೆ ಬರುತ್ತಾರೆ.

ಇದಲ್ಲದೆ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಿಯಾಯಿತಿ ಪಾಸ್ನೊಂದಿಗೆ ಈ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಆರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದೂ ಅವರಿಗೆ ಶೌಚಾಲಯ ಸೌಲಭ್ಯವಿಲ್ಲದಿರುವುದು ನಮ್ಮ ವ್ಯವಸ್ಥೆಯ ಕಳಂಕವಾಗಿದೆ. ಸ್ವಚ್ಛ ಭಾರತ ಅಭಿಯಾನ ಪ್ರಧಾನಿ ಮೋದಿಯವರ ಕನಸಾಗಿದೆ. ಆದರೆ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಈಗ ಇರುವ ಶೌಚಾಲಯಕ್ಕೆ ಬೀಗ ಹಾಕಿದ ಪರಿಣಾಮ ಕೇಂದ್ರದ ಕನಸಿಗೆ ಅದೇ ಸರ್ಕಾರದ ಇಲಾಖೆ ಕೊಳ್ಳಿ ಇಟ್ಟಂತಾಗಿದೆ ಎಂದು ಜನ ಆಡಿಕೊಳ್ಳುವಂತಾಗಿದೆ

” ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದು, ಶೌಚಾಲಯಕ್ಕೆ ಗುತ್ತಿಗೆದಾರರೇ ಬೀಗ ಹಾಕಿದ್ದಾರೆ. ಈ ವಿಷಯವನ್ನು ನಾವು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ.”

-ಲಕ್ಷ್ಮಣ, ನಂಜನಗೂಡು ರೈಲ್ವೆ ನಿಲ್ದಾಣದ ಅಧಿಕಾರಿ

” ಗಂಡಸರಾದರೆ ಬಯಲಲ್ಲೇ ಶೌಚ ಮುಗಿಸುತ್ತಾರೆ. ಆದರೆ ನಾವು ಮಹಿಳೆಯರು ಏನು ಮಾಡಬೇಕು? ಸಂಸದ ಸುನಿಲ್ ಬೋಸ್, ರೈಲ್ವೆ ಸಚಿವ ವಿ. ಸೊಮಣ್ಣನವರೇ ಇತ್ತ ಗಮನ ಹರಿಸಿ ಶೌಚಾಲಯದ ಬಾಗಿಲು ತೆರೆಸಬೇಕು.”

-ನಾಗಮ್ಮ, ಹೆಡತಲೆ

ಆಂದೋಲನ ಡೆಸ್ಕ್

Recent Posts

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

36 mins ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

1 hour ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

9 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

10 hours ago