Andolana originals

ನಾಳೆ ಹುಲಿಗಿನಮುರಡಿ ವೆಂಕಟರಮಣಸ್ವಾಮಿ ರಥೋತ್ಸವ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ.

ಜಾತ್ರೆಯ ಅಂಗವಾಗಿ ೧೦ ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಬಿದಿರಿನಿಂದ ರಥ ನಿರ್ಮಿಸಲಾಗುತ್ತಿದೆ. ಮೂಲ ವಿಗ್ರಹಗಳು ಹಾಗೂ ಉತ್ಸವ ಮೂರ್ತಿಗಳಿಗೆ ನಾನಾ ವರ್ಣದ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ.

ಜ.೧೫ರ ಗುರುವಾರ ಮಧ್ಯಾಹ್ನ ೧೨.೪೫ಕ್ಕೆ ಸರಿಯಾಗಿ ಮುಜರಾಯಿ ಅಧಿಕಾರಿಯೂ ಆದ ತಹಸಿಲ್ದಾರ್ ಎಂ. ಎಸ್.ತನ್ಮಯಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಜಾತ್ರೆಗೆ ಸ್ಥಳೀಯರಲ್ಲದೆ ನೆರೆ ರಾಜ್ಯಗಳಿಂದಲೂ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಪ್ರತಿ ವರ್ಷವೂ ನೂಕುನುಗ್ಗಲು ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಸರ್ಕಲ್ ಇನ್‌ಸ್ಪೆಕ್ಟರ್, ಎಸ್‌ಐ ನೇತೃತ್ವದಲ್ಲಿ ೧೦೦ ಸಿಬ್ಬಂದಿ ನಿಯೋಜಿಸಿ ತೆರಕಣಾಂಬಿಯಿಂದ ಬೊಮ್ಮನಹಳ್ಳಿ  ರಸ್ತೆಯಲ್ಲಿ ಬೆಟ್ಟಕ್ಕೆ ಹೋಗುವ ವಾಹನಗಳು ಕೊತ್ತಲವಾಡಿ ಮಾರ್ಗದಲ್ಲಿ ವಾಪಸಾಗುವಂತೆ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪಟ್ಟಣ ಹಾಗೂ ತೆರಕಣಾಂಬಿಯಿಂದ ಬೆಟ್ಟಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕೆ ಕನಿಷ್ಠ ೧೦ ಸಾರಿಗೆ ಬಸ್ಸುಗಳನ್ನು ನಿಯೋಜಿಸುವಂತೆ ಕೋರಲಾಗಿದೆ. ಬೆಟ್ಟಕ್ಕೆ ಹೋಗುವ ಭಕ್ತರು ತಮ್ಮ ವಾಹನಗಳನ್ನು ತಪ್ಪಲಿನಲ್ಲಿ ನಿಲ್ಲಿಸಲು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ತಪ್ಪಲಿನಿಂದ ಭಕ್ತರು ಬೆಟ್ಟಕ್ಕೆ ಹೋಗಿಬರಲು ೫ ಬಸ್ಸುಗಳನ್ನು ನಿಯೋಜಿಸಲಾಗಿದೆ. ಕಿಸೆಗಳ್ಳರ ಹಾಗೂ ಸರಗಳ್ಳರ ಕೈಚಳಕ ತಡೆಗೆ ಸಿಸಿ ಕ್ಯಾಮೆರಾ ಅಳವಡಿಸಿ ಮಫ್ತಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತೆರಕಣಾಂಬಿ ಪೊಲೀಸರು ತಿಳಿಸಿದ್ದಾರೆ.

ಗ್ರಾಮದ ಮಾರ್ಗವಾಗಿ ಬೆಟ್ಟದ ಜಾತ್ರೆಗೆ ಬರುವ ಭಕ್ತರಿಗೆ ಕಿಲಗೆರೆ ಗ್ರಾಮದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ ಮಠದಲ್ಲಿ ಸೋಮಹಳ್ಳಿ ಮಠಾಧ್ಯಕ್ಷರಾದ ಸಿದ್ದಮಲ್ಲಸ್ವಾಮೀಜಿಯವರ ಪಾದಪೂಜೆಯನ್ನು ಆಯೋಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

41 mins ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

2 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

3 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

3 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

3 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 hours ago