ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ.
ಜಾತ್ರೆಯ ಅಂಗವಾಗಿ ೧೦ ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಬಿದಿರಿನಿಂದ ರಥ ನಿರ್ಮಿಸಲಾಗುತ್ತಿದೆ. ಮೂಲ ವಿಗ್ರಹಗಳು ಹಾಗೂ ಉತ್ಸವ ಮೂರ್ತಿಗಳಿಗೆ ನಾನಾ ವರ್ಣದ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ.
ಜ.೧೫ರ ಗುರುವಾರ ಮಧ್ಯಾಹ್ನ ೧೨.೪೫ಕ್ಕೆ ಸರಿಯಾಗಿ ಮುಜರಾಯಿ ಅಧಿಕಾರಿಯೂ ಆದ ತಹಸಿಲ್ದಾರ್ ಎಂ. ಎಸ್.ತನ್ಮಯಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಜಾತ್ರೆಗೆ ಸ್ಥಳೀಯರಲ್ಲದೆ ನೆರೆ ರಾಜ್ಯಗಳಿಂದಲೂ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಪ್ರತಿ ವರ್ಷವೂ ನೂಕುನುಗ್ಗಲು ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಸರ್ಕಲ್ ಇನ್ಸ್ಪೆಕ್ಟರ್, ಎಸ್ಐ ನೇತೃತ್ವದಲ್ಲಿ ೧೦೦ ಸಿಬ್ಬಂದಿ ನಿಯೋಜಿಸಿ ತೆರಕಣಾಂಬಿಯಿಂದ ಬೊಮ್ಮನಹಳ್ಳಿ ರಸ್ತೆಯಲ್ಲಿ ಬೆಟ್ಟಕ್ಕೆ ಹೋಗುವ ವಾಹನಗಳು ಕೊತ್ತಲವಾಡಿ ಮಾರ್ಗದಲ್ಲಿ ವಾಪಸಾಗುವಂತೆ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪಟ್ಟಣ ಹಾಗೂ ತೆರಕಣಾಂಬಿಯಿಂದ ಬೆಟ್ಟಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕೆ ಕನಿಷ್ಠ ೧೦ ಸಾರಿಗೆ ಬಸ್ಸುಗಳನ್ನು ನಿಯೋಜಿಸುವಂತೆ ಕೋರಲಾಗಿದೆ. ಬೆಟ್ಟಕ್ಕೆ ಹೋಗುವ ಭಕ್ತರು ತಮ್ಮ ವಾಹನಗಳನ್ನು ತಪ್ಪಲಿನಲ್ಲಿ ನಿಲ್ಲಿಸಲು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ತಪ್ಪಲಿನಿಂದ ಭಕ್ತರು ಬೆಟ್ಟಕ್ಕೆ ಹೋಗಿಬರಲು ೫ ಬಸ್ಸುಗಳನ್ನು ನಿಯೋಜಿಸಲಾಗಿದೆ. ಕಿಸೆಗಳ್ಳರ ಹಾಗೂ ಸರಗಳ್ಳರ ಕೈಚಳಕ ತಡೆಗೆ ಸಿಸಿ ಕ್ಯಾಮೆರಾ ಅಳವಡಿಸಿ ಮಫ್ತಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತೆರಕಣಾಂಬಿ ಪೊಲೀಸರು ತಿಳಿಸಿದ್ದಾರೆ.
ಗ್ರಾಮದ ಮಾರ್ಗವಾಗಿ ಬೆಟ್ಟದ ಜಾತ್ರೆಗೆ ಬರುವ ಭಕ್ತರಿಗೆ ಕಿಲಗೆರೆ ಗ್ರಾಮದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ ಮಠದಲ್ಲಿ ಸೋಮಹಳ್ಳಿ ಮಠಾಧ್ಯಕ್ಷರಾದ ಸಿದ್ದಮಲ್ಲಸ್ವಾಮೀಜಿಯವರ ಪಾದಪೂಜೆಯನ್ನು ಆಯೋಜಿಸಲಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…