• ಎಸ್.ನಾಗಸುಂದ
ಪಾಂಡವಪುರ ತಾಲ್ಲೂಕಿನ ತೊಂಡನೂರಿನಲ್ಲಿರುವ ಸುಂದರ ಪ್ರವಾಸಿ ತಾಣ ತೊಣ್ಣೂರು ಕೆರೆ. ಈ ಕೆರೆಯು ಯದುಗಿರಿ ಬೆಟ್ಟದ ಬುಡದಲ್ಲಿದೆ. ತೊಣ್ಣೂರು ಕೆರೆಯು ಸುಮಾರು 1000 ವರ್ಷಗಳ ಹಿಂದೆ ಶ್ರೀ ರಾಮಾನುಜಾಚಾರ್ಯ ಅವರ ಆಶಯದಂತೆ 2150 ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾಗಿದೆ.
ಇದು ಒಂದು ವಾರಾಂತ್ಯದ ಪ್ರವಾಸಕ್ಕೆ ಹೇಳಿ ಮಾಡಿಸಿದ ಜಾಗವಾದ್ದರಿಂದ ಸಂಜೆಯ ಸೂರ್ಯಾಸ್ಥದ ರಮಣೀಯ ದೃಶ್ಯ ನೋಡಲು, ಮೇಲುಕೋಟೆ, ತೆಂಗಿನಕಲ್ಲು ಬೆಟ್ಟ, ಕುಂತಿಬೆಟ್ಟ ಸುತ್ತಾಡಲು ಸಾಕಷ್ಟು ಜನ ಬರುತ್ತಾರೆ.
ಕೆರೆಯ ಸುತ್ತ ಮುತ್ತ ವೆಂಕಟರಮಣ, ನಂಬಿ ನಾರಾಯಣ, ಪಾರ್ಥಸಾರಥಿ, ವೇಣುಗೋಪಾಲ, ಯೋಗನರಸಿಂಹ ಮತ್ತು ರಾಮಾನುಜಾಚಾರ್ಯರ ದೇವಾಲಯಗಳಿವೆ. ಈ ಕೆರೆಯು ಪಾಂಡವಪುರದಿಂದ 8 ಕಿ.ಮೀ. ದೂರ, ಬೆಂಗಳೂರಿನಿಂದ 130 ಕಿ.
ಮೀ., ಮೇಲುಕೋಟೆಯಿಂದ 25 ಕಿ.ಮೀ. ಹಾಗೂ ಮೈಸೂರಿನಿಂದ 30 ಕಿ.ಮೀ. ದೂರವಿದ್ದು, ಸಾರಿಗೆ ಬಸ್ ಸೌಲಭ್ಯವಿದೆ.
ನೀಲಿ ಜಲದ ಸೌಂದರ್ಯ, ತೊಣ್ಣೂರು ಸರೋವರದ ಸುಂದರವಾದ ಪರಿಸರ ಖುಷಿ ಕೊಡುತ್ತದೆ. ಜೊತೆಗೆ ಇಲ್ಲಿರುವ ಕ್ಷಣಾಂಭಿಕಾ ದೇವಾಲಯದ ಮುಂದೆ ಕಣ್ಣು ಹಾಯಿಸಿದಷ್ಟು ದೂರದ ವರೆಗೆ ಕಾಣುವ ಗದ್ದೆಗಳ ಹಸಿರ ತಂಪು ಇಲ್ಲಿನ ವಿಶೇಷ. ಸರೋವರದ ಪ್ರದೇಶವು ಟಿಪ್ಪು ಗುಹೆಗಳನ್ನು ಒಳಗೊಂಡಿದೆ, ಪದ್ಮಗಿರಿ ಬೆಟ್ಟವು ಆಮೆ ಮಾದರಿಯ ಬಂಡೆಯನ್ನು ಹೊಂದಿದೆ, ರಾಮಾನುಜ ಗಂಗೆ, ಒಂದು ಸಣ್ಣ ಜಲಪಾತ ನೋಡುಗರಿಗೆ ಆಹ್ಲಾದ ನೀಡುತ್ತದೆ.
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…