• ಎಸ್.ನಾಗಸುಂದ
ಪಾಂಡವಪುರ ತಾಲ್ಲೂಕಿನ ತೊಂಡನೂರಿನಲ್ಲಿರುವ ಸುಂದರ ಪ್ರವಾಸಿ ತಾಣ ತೊಣ್ಣೂರು ಕೆರೆ. ಈ ಕೆರೆಯು ಯದುಗಿರಿ ಬೆಟ್ಟದ ಬುಡದಲ್ಲಿದೆ. ತೊಣ್ಣೂರು ಕೆರೆಯು ಸುಮಾರು 1000 ವರ್ಷಗಳ ಹಿಂದೆ ಶ್ರೀ ರಾಮಾನುಜಾಚಾರ್ಯ ಅವರ ಆಶಯದಂತೆ 2150 ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾಗಿದೆ.
ಇದು ಒಂದು ವಾರಾಂತ್ಯದ ಪ್ರವಾಸಕ್ಕೆ ಹೇಳಿ ಮಾಡಿಸಿದ ಜಾಗವಾದ್ದರಿಂದ ಸಂಜೆಯ ಸೂರ್ಯಾಸ್ಥದ ರಮಣೀಯ ದೃಶ್ಯ ನೋಡಲು, ಮೇಲುಕೋಟೆ, ತೆಂಗಿನಕಲ್ಲು ಬೆಟ್ಟ, ಕುಂತಿಬೆಟ್ಟ ಸುತ್ತಾಡಲು ಸಾಕಷ್ಟು ಜನ ಬರುತ್ತಾರೆ.
ಕೆರೆಯ ಸುತ್ತ ಮುತ್ತ ವೆಂಕಟರಮಣ, ನಂಬಿ ನಾರಾಯಣ, ಪಾರ್ಥಸಾರಥಿ, ವೇಣುಗೋಪಾಲ, ಯೋಗನರಸಿಂಹ ಮತ್ತು ರಾಮಾನುಜಾಚಾರ್ಯರ ದೇವಾಲಯಗಳಿವೆ. ಈ ಕೆರೆಯು ಪಾಂಡವಪುರದಿಂದ 8 ಕಿ.ಮೀ. ದೂರ, ಬೆಂಗಳೂರಿನಿಂದ 130 ಕಿ.
ಮೀ., ಮೇಲುಕೋಟೆಯಿಂದ 25 ಕಿ.ಮೀ. ಹಾಗೂ ಮೈಸೂರಿನಿಂದ 30 ಕಿ.ಮೀ. ದೂರವಿದ್ದು, ಸಾರಿಗೆ ಬಸ್ ಸೌಲಭ್ಯವಿದೆ.
ನೀಲಿ ಜಲದ ಸೌಂದರ್ಯ, ತೊಣ್ಣೂರು ಸರೋವರದ ಸುಂದರವಾದ ಪರಿಸರ ಖುಷಿ ಕೊಡುತ್ತದೆ. ಜೊತೆಗೆ ಇಲ್ಲಿರುವ ಕ್ಷಣಾಂಭಿಕಾ ದೇವಾಲಯದ ಮುಂದೆ ಕಣ್ಣು ಹಾಯಿಸಿದಷ್ಟು ದೂರದ ವರೆಗೆ ಕಾಣುವ ಗದ್ದೆಗಳ ಹಸಿರ ತಂಪು ಇಲ್ಲಿನ ವಿಶೇಷ. ಸರೋವರದ ಪ್ರದೇಶವು ಟಿಪ್ಪು ಗುಹೆಗಳನ್ನು ಒಳಗೊಂಡಿದೆ, ಪದ್ಮಗಿರಿ ಬೆಟ್ಟವು ಆಮೆ ಮಾದರಿಯ ಬಂಡೆಯನ್ನು ಹೊಂದಿದೆ, ರಾಮಾನುಜ ಗಂಗೆ, ಒಂದು ಸಣ್ಣ ಜಲಪಾತ ನೋಡುಗರಿಗೆ ಆಹ್ಲಾದ ನೀಡುತ್ತದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…