• ಎಸ್.ನಾಗಸುಂದ
ಪಾಂಡವಪುರ ತಾಲ್ಲೂಕಿನ ತೊಂಡನೂರಿನಲ್ಲಿರುವ ಸುಂದರ ಪ್ರವಾಸಿ ತಾಣ ತೊಣ್ಣೂರು ಕೆರೆ. ಈ ಕೆರೆಯು ಯದುಗಿರಿ ಬೆಟ್ಟದ ಬುಡದಲ್ಲಿದೆ. ತೊಣ್ಣೂರು ಕೆರೆಯು ಸುಮಾರು 1000 ವರ್ಷಗಳ ಹಿಂದೆ ಶ್ರೀ ರಾಮಾನುಜಾಚಾರ್ಯ ಅವರ ಆಶಯದಂತೆ 2150 ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾಗಿದೆ.
ಇದು ಒಂದು ವಾರಾಂತ್ಯದ ಪ್ರವಾಸಕ್ಕೆ ಹೇಳಿ ಮಾಡಿಸಿದ ಜಾಗವಾದ್ದರಿಂದ ಸಂಜೆಯ ಸೂರ್ಯಾಸ್ಥದ ರಮಣೀಯ ದೃಶ್ಯ ನೋಡಲು, ಮೇಲುಕೋಟೆ, ತೆಂಗಿನಕಲ್ಲು ಬೆಟ್ಟ, ಕುಂತಿಬೆಟ್ಟ ಸುತ್ತಾಡಲು ಸಾಕಷ್ಟು ಜನ ಬರುತ್ತಾರೆ.
ಕೆರೆಯ ಸುತ್ತ ಮುತ್ತ ವೆಂಕಟರಮಣ, ನಂಬಿ ನಾರಾಯಣ, ಪಾರ್ಥಸಾರಥಿ, ವೇಣುಗೋಪಾಲ, ಯೋಗನರಸಿಂಹ ಮತ್ತು ರಾಮಾನುಜಾಚಾರ್ಯರ ದೇವಾಲಯಗಳಿವೆ. ಈ ಕೆರೆಯು ಪಾಂಡವಪುರದಿಂದ 8 ಕಿ.ಮೀ. ದೂರ, ಬೆಂಗಳೂರಿನಿಂದ 130 ಕಿ.
ಮೀ., ಮೇಲುಕೋಟೆಯಿಂದ 25 ಕಿ.ಮೀ. ಹಾಗೂ ಮೈಸೂರಿನಿಂದ 30 ಕಿ.ಮೀ. ದೂರವಿದ್ದು, ಸಾರಿಗೆ ಬಸ್ ಸೌಲಭ್ಯವಿದೆ.
ನೀಲಿ ಜಲದ ಸೌಂದರ್ಯ, ತೊಣ್ಣೂರು ಸರೋವರದ ಸುಂದರವಾದ ಪರಿಸರ ಖುಷಿ ಕೊಡುತ್ತದೆ. ಜೊತೆಗೆ ಇಲ್ಲಿರುವ ಕ್ಷಣಾಂಭಿಕಾ ದೇವಾಲಯದ ಮುಂದೆ ಕಣ್ಣು ಹಾಯಿಸಿದಷ್ಟು ದೂರದ ವರೆಗೆ ಕಾಣುವ ಗದ್ದೆಗಳ ಹಸಿರ ತಂಪು ಇಲ್ಲಿನ ವಿಶೇಷ. ಸರೋವರದ ಪ್ರದೇಶವು ಟಿಪ್ಪು ಗುಹೆಗಳನ್ನು ಒಳಗೊಂಡಿದೆ, ಪದ್ಮಗಿರಿ ಬೆಟ್ಟವು ಆಮೆ ಮಾದರಿಯ ಬಂಡೆಯನ್ನು ಹೊಂದಿದೆ, ರಾಮಾನುಜ ಗಂಗೆ, ಒಂದು ಸಣ್ಣ ಜಲಪಾತ ನೋಡುಗರಿಗೆ ಆಹ್ಲಾದ ನೀಡುತ್ತದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…