Andolana originals

ಕಣ್ಣಾಯಿಸಿದಷ್ಟೂ ವಿಸ್ತಾರ ತೊಣ್ಣೂರು ಕೆರೆ

• ಎಸ್.ನಾಗಸುಂದ‌

ಪಾಂಡವಪುರ ತಾಲ್ಲೂಕಿನ ತೊಂಡನೂರಿನಲ್ಲಿರುವ ಸುಂದರ ಪ್ರವಾಸಿ ತಾಣ ತೊಣ್ಣೂರು ಕೆರೆ. ಈ ಕೆರೆಯು ಯದುಗಿರಿ ಬೆಟ್ಟದ ಬುಡದಲ್ಲಿದೆ. ತೊಣ್ಣೂರು ಕೆರೆಯು ಸುಮಾರು 1000 ವರ್ಷಗಳ ಹಿಂದೆ ಶ್ರೀ ರಾಮಾನುಜಾಚಾರ್ಯ ಅವರ ಆಶಯದಂತೆ 2150 ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾಗಿದೆ.

ಇದು ಒಂದು ವಾರಾಂತ್ಯದ ಪ್ರವಾಸಕ್ಕೆ ಹೇಳಿ ಮಾಡಿಸಿದ ಜಾಗವಾದ್ದರಿಂದ ಸಂಜೆಯ ಸೂರ್ಯಾಸ್ಥದ ರಮಣೀಯ ದೃಶ್ಯ ನೋಡಲು, ಮೇಲುಕೋಟೆ, ತೆಂಗಿನಕಲ್ಲು ಬೆಟ್ಟ, ಕುಂತಿಬೆಟ್ಟ ಸುತ್ತಾಡಲು ಸಾಕಷ್ಟು ಜನ ಬರುತ್ತಾರೆ.


ಕೆರೆಯ ಸುತ್ತ ಮುತ್ತ ವೆಂಕಟರಮಣ, ನಂಬಿ ನಾರಾಯಣ, ಪಾರ್ಥಸಾರಥಿ, ವೇಣುಗೋಪಾಲ, ಯೋಗನರಸಿಂಹ ಮತ್ತು ರಾಮಾನುಜಾಚಾರ್ಯರ ದೇವಾಲಯಗಳಿವೆ. ಈ ಕೆರೆಯು ಪಾಂಡವಪುರದಿಂದ 8 ಕಿ.ಮೀ. ದೂರ, ಬೆಂಗಳೂರಿನಿಂದ 130 ಕಿ.
ಮೀ., ಮೇಲುಕೋಟೆಯಿಂದ 25 ಕಿ.ಮೀ. ಹಾಗೂ ಮೈಸೂರಿನಿಂದ 30 ಕಿ.ಮೀ. ದೂರವಿದ್ದು, ಸಾರಿಗೆ ಬಸ್ ಸೌಲಭ್ಯವಿದೆ.

ನೀಲಿ ಜಲದ ಸೌಂದರ್ಯ, ತೊಣ್ಣೂರು ಸರೋವರದ ಸುಂದರವಾದ ಪರಿಸರ ಖುಷಿ ಕೊಡುತ್ತದೆ. ಜೊತೆಗೆ ಇಲ್ಲಿರುವ ಕ್ಷಣಾಂಭಿಕಾ ದೇವಾಲಯದ ಮುಂದೆ ಕಣ್ಣು ಹಾಯಿಸಿದಷ್ಟು ದೂರದ ವರೆಗೆ ಕಾಣುವ ಗದ್ದೆಗಳ ಹಸಿರ ತಂಪು ಇಲ್ಲಿನ ವಿಶೇಷ. ಸರೋವರದ ಪ್ರದೇಶವು ಟಿಪ್ಪು ಗುಹೆಗಳನ್ನು ಒಳಗೊಂಡಿದೆ, ಪದ್ಮಗಿರಿ ಬೆಟ್ಟವು ಆಮೆ ಮಾದರಿಯ ಬಂಡೆಯನ್ನು ಹೊಂದಿದೆ, ರಾಮಾನುಜ ಗಂಗೆ, ಒಂದು ಸಣ್ಣ ಜಲಪಾತ ನೋಡುಗರಿಗೆ ಆಹ್ಲಾದ ನೀಡುತ್ತದೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago