ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್
ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಪ್ರವಾಸಿ ತಾಣವಾದ ತಡಿ ಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.
ಕೇರಳ ರಾಜ್ಯದ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ (೩೬) ನಾಪತ್ತೆಯಾದವರು. ಕೇರಳದಿಂದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಬಂದಿದ್ದ ಶರಣ್ಯ, ಆನ್ಲೈನ್ನಲ್ಲಿ ಹೋಂ ಸ್ಟೇವೊಂದನ್ನು ಬುಕ್ಕಿಂಗ್ ಮಾಡಿಕೊಂಡು ತಂಗಿದ್ದರು.
ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕಾಗಿ ಅರಣ್ಯ ಇಲಾಖೆ ವೆಬ್ಸೈಟ್ನಲ್ಲಿ ನೋಂದಾಯಿಸಿ ಕೊಂಡಿದ್ದ ಶರಣ್ಯ, ಗುರುವಾರ ಬೆಳಿಗ್ಗೆ ೮.೧೫ಕ್ಕೆ ಬೆಟ್ಟದ ಬಳಿ ಬಂದಿದ್ದರು. ಅವರ ದಾಖಲೆ ಪರಿಶೀಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಒಬ್ಬರೇ ಟ್ರಕ್ಕಿಂಗ್ ಹೋಗಬಾರದು ಎಂದು ತಿಳಿಸಿ, ಒಂದು ಗುಂಪಿನೊಂದಿಗೆ ಜೊತೆ ಮಾಡಿ ಕಳುಹಿಸಿದ್ದಾರೆ.
ಸಂಜೆ ವೇಳೆಗೆ ಆ ಗುಂಪು ಹಿಂದಿರುಗಿದರೂ ಶರಣ್ಯ ಅವರು ವಾಪಸ್ ಆಗಲಿಲ್ಲ. ಹೀಗಾಗಿ ಅರಣ್ಯ ವೀಕ್ಷಕ ಮಂಜುನಾಥ್ ಬೆಟ್ಟಕ್ಕೆ ತೆರಳಿ ಶರಣ್ಯ ಅವರಿಗಾಗಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಪತ್ತೆಯಾಗಲಿಲ್ಲ. ಹಿಂದಿರುಗಿದ ಮಂಜುನಾಥ್, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸಲಾಗುತ್ತಿದೆ.
ಗುರುವಾರ ರಾತ್ರಿಯಿಡೀ ಅರಣ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಸ್ಥಳೀಯರ ನೆರವಿನೊಂದಿಗೆ ಬೆಟ್ಟದಲ್ಲಿ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರವೂ ಶೋಧ ಮುಂದುವರಿಸಿದ್ದಾರೆ. ಆದರೆ ಸಂಜೆಯವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಽಕಾರಿಗಳು ಮಾಹಿತಿ ನೀಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…