Andolana originals

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ

ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ

ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಪುನರಾರಂಭಗೊಳ್ಳುವ ನಿರೀಕ್ಷೆಯಿಂದ ಪ್ರವಾಸಿಗರು, ರೆಸಾರ್ಟ್‌ಗಳ ಮಾಲೀಕರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಸಂತಸಗೊಂಡಿದ್ದಾರೆ.

ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರವು ರಾಜ್ಯ, ದೇಶ, ವಿದೇಶದಲ್ಲೂ ಹೆಸರು ಗಳಿಸಿದೆ. ಜೊತೆಗೆ ಪ್ರತಿ ವರ್ಷ ಸರ್ಕಾರದ ಬೊಕ್ಕಸಕ್ಕೆ ೬ ಕೋಟಿ ರೂ. ಸಂಗ್ರಹವಾಗುತ್ತದೆ. ಸರ್ಕಾರ ಸಹಭಾಗಿತ್ವದ ಕಾರಪುರ ಜೆಎಲ್‌ಆರ್‌ನಿಂದ ರೆಸಾರ್ಟ್ ಗಳಲ್ಲಿರುವ ಪ್ರವಾಸಿಗರನ್ನು ಸಫಾರಿ ಮಾಡಿಸಲು ೧೮ ವಾಹನಗಳು ಮತ್ತು ದಮ್ಮನಕಟ್ಟೆ ಸಫಾರಿ ಕೇಂದ್ರದಿಂದ ನಾಲ್ಕು ವಾಹನಗಳ ಮೂಲಕ ಬೆಳಿಗ್ಗೆ ಮತ್ತು ಸಂಜೆ, ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿಸಲು ೨೭೫ ಪ್ರವಾಸಿಗರು ಪ್ರತಿನಿತ್ಯ ಪಾಲ್ಗೊಳ್ಳುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಈ ಭಾಗದ ಅರಣ್ಯದಲ್ಲಿ ಕರಿಚಿರತೆ, ಹುಲಿ, ಆನೆ ಜಿಂಕೆ, ಕಡವೆ, ಕರಡಿ, ಚಿರತೆಗಳು ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದ್ದರಿಂದ ಇಲ್ಲಿನ ಸಫಾರಿಗೆ ಪ್ರವಾಸಿಗರು ಮುಗಿ ಬೀಳುತ್ತಿದ್ದರು.

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಕಾಡಿನಿಂದ ಬಂದ ಹುಲಿಗಳು ಲಗ್ಗೆ ಇಟ್ಟು ರೈತರ ಮೇಲೆ ದಾಳಿ ನಡೆಸಿ ಮೂವರನ್ನು ಬಲಿ ತೆಗೆದುಕೊಂಡಿದ್ದವು.. ಇದಾದ ನಂತರ ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಶಾಸಕ ಅನಿಲ್ ಚಿಕ್ಕಮಾದು ಹಾಗೂ ಉನ್ನತ ಮಟ್ಟದ ಅರಣ್ಯ ಅಧಿಕಾರಿಗಳು ಸಭೆ ನಡೆಸಿ ಕಳೆದ ನವೆಂಬರ್ ತಿಂಗಳಿನಲ್ಲಿ ದಮ್ಮನಕಟ್ಟೆ ಮತ್ತಿತರ ಕಡೆಯ ಸಫಾರಿ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿತ್ತು.

ಸಫಾರಿ ಸ್ಥಗಿತದಿಂದ ಈ ಭಾಗದ ರೆಸಾರ್ಟ್ಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿತ್ತು. ರೆಸಾಟ್ ಗಳಿಗೆ ಹಾಲು, ಮೊಸರು, ದಿನಸಿ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದ ರೈತರು ಮತ್ತು ವ್ಯಾಪಾರಸ್ಥರಿಗೆ, ವಾಹನ ಚಾಲಕರಿಗೆ ಜೀವನ ನಡೆಸಲು ಕಷ್ಟವಾಗಿತ್ತು. ಒಂದೆಡೆ ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಕೆಲ ರೈತರು, ಪ್ರವಾಸಿಗರು ಸಫಾರಿಯನ್ನು ಮುಂದುವರಿಸಬೇಕೆಂದು ಪ್ರತಿಭಟನೆ, ಹೋರಾಟಗಳನ್ನು ನಡೆಸುತ್ತಾ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಮತ್ತೊಂದೆಡೆ ಕೆಲ ರೈತ ಸಂಘಟನೆಯವರು ಸಂಪೂರ್ಣವಾಗಿ ಸಫಾರಿ ಬಂದ್ ಮಾಡಬೇಕು. ಪ್ರಾಣಿಗಳ ಹಾವಳಿಯಿಂದ ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಈ ಎಲ್ಲವನ್ನೂ ಪರಿಶೀಲಿಸಿ ವರದಿ ಆಧಾರದ ಮೇಲೆ ಶೇ.೫೦ರಷ್ಟು ಸಫಾರಿಯನ್ನು ಪ್ರಾರಂಭಿಸುತ್ತಿರುವುದರಿಂದ ದಮ್ಮನಕಟ್ಟೆಯಲ್ಲಿ ನಾಲ್ಕು ವಾಹನಗಳು, ೫೦ ಕಾರಪುರ, ಜೆಎಲ್‌ಆರ್‌ನಿಂದ ೧೮ ವಾಹನಗಳ ಮೂಲಕ ೧೪೦ ಪ್ರವಾಸಿಗರಿಗೆ ಪ್ರತಿನಿತ್ಯ ಸಫಾರಿ ನಡೆಸಲು ಅವಕಾಶ ಮಾಡಿಕೊಟ್ಟಿದೆ. ಹಲವು ತಿಂಗಳಿನಿಂದ ಸಫಾರಿ ಸ್ಥಗಿತದಿಂದ ಕಂಗಾಲಾಗಿದ್ದ ಪ್ರವಾಸಿಗರು ಸಫಾರಿ ಸವಿಯಲು ಕಾತುರದಲ್ಲಿದ್ದಾರೆ.

” ಎಚ್.ಡಿ.ಕೋಟೆ ತಾಲ್ಲೂಕು ಮತ್ತು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ. ಸಫಾರಿ ಪುನರಾರಂಭದಿಂದ ಅನುಕೂಲವಾಗಲಿದೆ. ಮುಖ್ಯಮಂತ್ರಿ, ಅರಣ್ಯ ಸಚಿವರು, ಶಾಸಕರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.”

 -ಸಂದೇಶ್ ನಾಗರಾಜು, ಉದ್ಯಮಿ

” ಮಾಧ್ಯಮಗಳಿಂದ ಸಫಾರಿ ಪುನರಾರಂಭದ ವಿಚಾರ ತಿಳಿದಿದ್ದು, ಸರ್ಕಾರದಿಂದ ಅಧಿಕೃತ ಆದೇಶ ನಮಗೆ ಬಂದಿಲ್ಲ. ಬಂದ ತಕ್ಷಣ ನಿಯಮಾನುಸಾರವಾಗಿ, ಕಾನೂನು ಬದ್ಧವಾಗಿ ಸಫಾರಿಯನ್ನು ಪುನರ್ ಆರಂಭಿಸಲಾಗುವುದು. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.”

-ಸಿದ್ದರಾಜು, ಅರಣ್ಯ ಅಧಿಕಾರಿ, ದಮ್ಮನಕಟ್ಟೆ

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago