Andolana originals

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ

ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ

ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಪುನರಾರಂಭಗೊಳ್ಳುವ ನಿರೀಕ್ಷೆಯಿಂದ ಪ್ರವಾಸಿಗರು, ರೆಸಾರ್ಟ್‌ಗಳ ಮಾಲೀಕರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಸಂತಸಗೊಂಡಿದ್ದಾರೆ.

ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರವು ರಾಜ್ಯ, ದೇಶ, ವಿದೇಶದಲ್ಲೂ ಹೆಸರು ಗಳಿಸಿದೆ. ಜೊತೆಗೆ ಪ್ರತಿ ವರ್ಷ ಸರ್ಕಾರದ ಬೊಕ್ಕಸಕ್ಕೆ ೬ ಕೋಟಿ ರೂ. ಸಂಗ್ರಹವಾಗುತ್ತದೆ. ಸರ್ಕಾರ ಸಹಭಾಗಿತ್ವದ ಕಾರಪುರ ಜೆಎಲ್‌ಆರ್‌ನಿಂದ ರೆಸಾರ್ಟ್ ಗಳಲ್ಲಿರುವ ಪ್ರವಾಸಿಗರನ್ನು ಸಫಾರಿ ಮಾಡಿಸಲು ೧೮ ವಾಹನಗಳು ಮತ್ತು ದಮ್ಮನಕಟ್ಟೆ ಸಫಾರಿ ಕೇಂದ್ರದಿಂದ ನಾಲ್ಕು ವಾಹನಗಳ ಮೂಲಕ ಬೆಳಿಗ್ಗೆ ಮತ್ತು ಸಂಜೆ, ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಮಾಡಿಸಲು ೨೭೫ ಪ್ರವಾಸಿಗರು ಪ್ರತಿನಿತ್ಯ ಪಾಲ್ಗೊಳ್ಳುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಈ ಭಾಗದ ಅರಣ್ಯದಲ್ಲಿ ಕರಿಚಿರತೆ, ಹುಲಿ, ಆನೆ ಜಿಂಕೆ, ಕಡವೆ, ಕರಡಿ, ಚಿರತೆಗಳು ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದ್ದರಿಂದ ಇಲ್ಲಿನ ಸಫಾರಿಗೆ ಪ್ರವಾಸಿಗರು ಮುಗಿ ಬೀಳುತ್ತಿದ್ದರು.

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಕಾಡಿನಿಂದ ಬಂದ ಹುಲಿಗಳು ಲಗ್ಗೆ ಇಟ್ಟು ರೈತರ ಮೇಲೆ ದಾಳಿ ನಡೆಸಿ ಮೂವರನ್ನು ಬಲಿ ತೆಗೆದುಕೊಂಡಿದ್ದವು.. ಇದಾದ ನಂತರ ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಶಾಸಕ ಅನಿಲ್ ಚಿಕ್ಕಮಾದು ಹಾಗೂ ಉನ್ನತ ಮಟ್ಟದ ಅರಣ್ಯ ಅಧಿಕಾರಿಗಳು ಸಭೆ ನಡೆಸಿ ಕಳೆದ ನವೆಂಬರ್ ತಿಂಗಳಿನಲ್ಲಿ ದಮ್ಮನಕಟ್ಟೆ ಮತ್ತಿತರ ಕಡೆಯ ಸಫಾರಿ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿತ್ತು.

ಸಫಾರಿ ಸ್ಥಗಿತದಿಂದ ಈ ಭಾಗದ ರೆಸಾರ್ಟ್ಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿತ್ತು. ರೆಸಾಟ್ ಗಳಿಗೆ ಹಾಲು, ಮೊಸರು, ದಿನಸಿ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದ ರೈತರು ಮತ್ತು ವ್ಯಾಪಾರಸ್ಥರಿಗೆ, ವಾಹನ ಚಾಲಕರಿಗೆ ಜೀವನ ನಡೆಸಲು ಕಷ್ಟವಾಗಿತ್ತು. ಒಂದೆಡೆ ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಕೆಲ ರೈತರು, ಪ್ರವಾಸಿಗರು ಸಫಾರಿಯನ್ನು ಮುಂದುವರಿಸಬೇಕೆಂದು ಪ್ರತಿಭಟನೆ, ಹೋರಾಟಗಳನ್ನು ನಡೆಸುತ್ತಾ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಮತ್ತೊಂದೆಡೆ ಕೆಲ ರೈತ ಸಂಘಟನೆಯವರು ಸಂಪೂರ್ಣವಾಗಿ ಸಫಾರಿ ಬಂದ್ ಮಾಡಬೇಕು. ಪ್ರಾಣಿಗಳ ಹಾವಳಿಯಿಂದ ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಈ ಎಲ್ಲವನ್ನೂ ಪರಿಶೀಲಿಸಿ ವರದಿ ಆಧಾರದ ಮೇಲೆ ಶೇ.೫೦ರಷ್ಟು ಸಫಾರಿಯನ್ನು ಪ್ರಾರಂಭಿಸುತ್ತಿರುವುದರಿಂದ ದಮ್ಮನಕಟ್ಟೆಯಲ್ಲಿ ನಾಲ್ಕು ವಾಹನಗಳು, ೫೦ ಕಾರಪುರ, ಜೆಎಲ್‌ಆರ್‌ನಿಂದ ೧೮ ವಾಹನಗಳ ಮೂಲಕ ೧೪೦ ಪ್ರವಾಸಿಗರಿಗೆ ಪ್ರತಿನಿತ್ಯ ಸಫಾರಿ ನಡೆಸಲು ಅವಕಾಶ ಮಾಡಿಕೊಟ್ಟಿದೆ. ಹಲವು ತಿಂಗಳಿನಿಂದ ಸಫಾರಿ ಸ್ಥಗಿತದಿಂದ ಕಂಗಾಲಾಗಿದ್ದ ಪ್ರವಾಸಿಗರು ಸಫಾರಿ ಸವಿಯಲು ಕಾತುರದಲ್ಲಿದ್ದಾರೆ.

” ಎಚ್.ಡಿ.ಕೋಟೆ ತಾಲ್ಲೂಕು ಮತ್ತು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ. ಸಫಾರಿ ಪುನರಾರಂಭದಿಂದ ಅನುಕೂಲವಾಗಲಿದೆ. ಮುಖ್ಯಮಂತ್ರಿ, ಅರಣ್ಯ ಸಚಿವರು, ಶಾಸಕರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.”

 -ಸಂದೇಶ್ ನಾಗರಾಜು, ಉದ್ಯಮಿ

” ಮಾಧ್ಯಮಗಳಿಂದ ಸಫಾರಿ ಪುನರಾರಂಭದ ವಿಚಾರ ತಿಳಿದಿದ್ದು, ಸರ್ಕಾರದಿಂದ ಅಧಿಕೃತ ಆದೇಶ ನಮಗೆ ಬಂದಿಲ್ಲ. ಬಂದ ತಕ್ಷಣ ನಿಯಮಾನುಸಾರವಾಗಿ, ಕಾನೂನು ಬದ್ಧವಾಗಿ ಸಫಾರಿಯನ್ನು ಪುನರ್ ಆರಂಭಿಸಲಾಗುವುದು. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.”

-ಸಿದ್ದರಾಜು, ಅರಣ್ಯ ಅಧಿಕಾರಿ, ದಮ್ಮನಕಟ್ಟೆ

 

 

ಆಂದೋಲನ ಡೆಸ್ಕ್

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

2 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

2 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

2 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

2 hours ago