Andolana originals

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ.

ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ ಹೊಸ ವರ್ಷದ ಕಾರಣಕ್ಕೆ ಸಹಜವಾಗಿಯೇ ಬೇಡಿಕೆ ಉಂಟಾಗಿದೆ. ಜನತೆ, ನೂತನ ಸಂವತ್ಸರವನ್ನು ಅವರದ್ದೇ ಆದ ರೀತಿಯಲ್ಲಿ ಬರಮಾಡಿಕೊಳ್ಳುತ್ತಾರೆ. ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ವರ್ಷವಿಡೀ ಒಳ್ಳೆಯದಾಗಲೆಂದು ಪ್ರಾರ್ಥನೆ ಮಾಡುವವರಿದ್ದಾರೆ. ಪಬ್, ಪಾರ್ಟಿ ಹೀಗೆ ಆಯ್ದ ಸ್ಥಳಗಳಿಗೆ ಹೋಗಿ ಮೋಜು ಮಾಡಿ ವರ್ಷದ ಮೊದಲ ದಿನವನ್ನು ಬರಮಾಡಿಕೊಳ್ಳುವವರೂ ಇದ್ದಾರೆ. ಏನೆಲ್ಲಾ ನಿರ್ಬಂಧ, ಎಚ್ಚರಿಕೆ ನಡುವೆಯೂ ೨೦೨೬ಕ್ಕೆ ಕಾಲಿಡುವ ಕ್ಷಣದಲ್ಲಿ ಪಟಾಕಿ, ಬಾಣ ಬಿರುಸುಗಳು ಅಲ್ಲಲ್ಲಿ ಸದ್ದು ಮಾಡುತ್ತವೆ.

ತಾವು ಇರುವೆಡೆಯೇ ಕೇಕ್ ಕತ್ತರಿಸಿ ಮನೆ ಮಂದಿಯೆಲ್ಲಾ  ಪರಸ್ಪರ ಸಿಹಿ ಮೆಲ್ಲುತ್ತಾ ಸಂತೋಷದಿಂದ ಹೊಸ ದಿನ ಬರಮಾಡಿಕೊಳ್ಳುವ ದೊಡ್ಡ ವರ್ಗವೂ ಇದೆ. ಹಾಗೆಯೇ, ವರ್ಷದ ಮೊದಲ ದಿನ ಹೊಸ ಬಟ್ಟೆ ಧರಿಸಿ ಇಡೀ ವರ್ಷ ಹರ್ಷದಿಂದ ಇರಲೆಂದು ಆಶಿಸಿ ಮಲೆಮಹದೇಶ್ವರ ಬೆಟ್ಟ ಅಥವಾ ಇತರ ಧಾರ್ಮಿಕ ಕೇಂದ್ರಗಳಿಗೆ ಹೊಸ ವರ್ಷದ ಮುನ್ನಾ ದಿನವೇ ಹೋಗಿ ಉಳಿದು ದೇವರ ದರ್ಶನ ಪಡೆಯುವವರೂ ಇದ್ದು ಇಂತಹವರು ಕುಟುಂಬ ಸಮೇತರಾಗಿ ಧಾರ್ಮಿಕ ಸ್ಥಳಗಳಿಗೆ ಧಾವಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮಾತ್ರವಲ್ಲದೇ ರಾಜ್ಯ ಹಾಗೂ ನೆರೆ-ಹೊರೆರಾಜ್ಯಗಳಿಂದಲೂ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟವನ್ನು ಆಯ್ಕೆ ಮಾಡಿಕೊಂಡು ವಸತಿ ಗೃಹಗಳನ್ನು ಕಾಯ್ದಿರಿಸಿದ್ದಾರೆ. ಇನ್ನು, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ಕಣ್ತುಂಬಿಕೊಳ್ಳುವುದೇ ಆನಂದ. ಚಳಿಯ ನಡುವೆ ಮಂಜು ಕವಿದ ವಾತಾವರಣದಲ್ಲಿ ಹೊಸ ವರ್ಷವನ್ನು ಎದುರು ನೋಡುವುದೇ ಉಲ್ಲಾಸ. ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ ೬ರಿಂದ ಸಂಜೆ ೪.೩೦ರೊಳಗೆ ಮಾತ್ರ ಪ್ರವೇಶಾವಕಾಶ ಇರುವುದರಿಂದ ಅಲ್ಲಿಗೆ ದೊಡ್ಡ ಸಂಖ್ಯೆಯ ಭಕ್ತರು ಹೊಸ ಸಂವತ್ಸರದಂದು ಬರುವ ನಿರೀಕ್ಷೆ ಸಹಜವಾದದ್ದಾಗಿದೆ.

” ಬಂಡೀಪುರದಲ್ಲಿನ ಖಾಸಗಿ ರೆಸಾರ್ಟ್, ಹೋಂಸ್ಟೇಗಳಲ್ಲಿ ರಾತ್ರಿ ೧೦ ಗಂಟೆ ನಂತರ ಫೈರ್ ಕ್ಯಾಂಪ್, ಲೈಟಿಂಗ್ಸ್ ಹಾಗೂ ಅಧಿಕ ಶಬ್ದ ಹೊರಸೂಸುವ ಡಿಜೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಪ್ರಭಾಕರನ್, ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ

” ಹೊಸ ವರ್ಷದ ಹಿನ್ನೆಲೆಯಲ್ಲಿ ೧೫ ದಿನಗಳಿಂದಲೇ ಭಕ್ತಾದಿಗಳು, ಪ್ರವಾಸಿಗರು ಆನ್‌ಲೈನ್‌ನಲ್ಲಿ ೨೫೦ ವಸತಿಗೃಹಗಳನ್ನು ಕಾಯ್ದಿರಿಸಿದ್ದಾರೆ. ಆಫ್ಲೈನ್ ನಲ್ಲಿಯೂ ಕೊಠಡಿಗಳಿಗೆ ಬೇಡಿಕೆ ಹೆಚ್ಚಾಗಿದೆ.”‌

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

ಆಂದೋಲನ ಡೆಸ್ಕ್

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

11 mins ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

21 mins ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

31 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

48 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

1 hour ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago