Andolana originals

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ.

ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ ಹೊಸ ವರ್ಷದ ಕಾರಣಕ್ಕೆ ಸಹಜವಾಗಿಯೇ ಬೇಡಿಕೆ ಉಂಟಾಗಿದೆ. ಜನತೆ, ನೂತನ ಸಂವತ್ಸರವನ್ನು ಅವರದ್ದೇ ಆದ ರೀತಿಯಲ್ಲಿ ಬರಮಾಡಿಕೊಳ್ಳುತ್ತಾರೆ. ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ವರ್ಷವಿಡೀ ಒಳ್ಳೆಯದಾಗಲೆಂದು ಪ್ರಾರ್ಥನೆ ಮಾಡುವವರಿದ್ದಾರೆ. ಪಬ್, ಪಾರ್ಟಿ ಹೀಗೆ ಆಯ್ದ ಸ್ಥಳಗಳಿಗೆ ಹೋಗಿ ಮೋಜು ಮಾಡಿ ವರ್ಷದ ಮೊದಲ ದಿನವನ್ನು ಬರಮಾಡಿಕೊಳ್ಳುವವರೂ ಇದ್ದಾರೆ. ಏನೆಲ್ಲಾ ನಿರ್ಬಂಧ, ಎಚ್ಚರಿಕೆ ನಡುವೆಯೂ ೨೦೨೬ಕ್ಕೆ ಕಾಲಿಡುವ ಕ್ಷಣದಲ್ಲಿ ಪಟಾಕಿ, ಬಾಣ ಬಿರುಸುಗಳು ಅಲ್ಲಲ್ಲಿ ಸದ್ದು ಮಾಡುತ್ತವೆ.

ತಾವು ಇರುವೆಡೆಯೇ ಕೇಕ್ ಕತ್ತರಿಸಿ ಮನೆ ಮಂದಿಯೆಲ್ಲಾ  ಪರಸ್ಪರ ಸಿಹಿ ಮೆಲ್ಲುತ್ತಾ ಸಂತೋಷದಿಂದ ಹೊಸ ದಿನ ಬರಮಾಡಿಕೊಳ್ಳುವ ದೊಡ್ಡ ವರ್ಗವೂ ಇದೆ. ಹಾಗೆಯೇ, ವರ್ಷದ ಮೊದಲ ದಿನ ಹೊಸ ಬಟ್ಟೆ ಧರಿಸಿ ಇಡೀ ವರ್ಷ ಹರ್ಷದಿಂದ ಇರಲೆಂದು ಆಶಿಸಿ ಮಲೆಮಹದೇಶ್ವರ ಬೆಟ್ಟ ಅಥವಾ ಇತರ ಧಾರ್ಮಿಕ ಕೇಂದ್ರಗಳಿಗೆ ಹೊಸ ವರ್ಷದ ಮುನ್ನಾ ದಿನವೇ ಹೋಗಿ ಉಳಿದು ದೇವರ ದರ್ಶನ ಪಡೆಯುವವರೂ ಇದ್ದು ಇಂತಹವರು ಕುಟುಂಬ ಸಮೇತರಾಗಿ ಧಾರ್ಮಿಕ ಸ್ಥಳಗಳಿಗೆ ಧಾವಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮಾತ್ರವಲ್ಲದೇ ರಾಜ್ಯ ಹಾಗೂ ನೆರೆ-ಹೊರೆರಾಜ್ಯಗಳಿಂದಲೂ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟವನ್ನು ಆಯ್ಕೆ ಮಾಡಿಕೊಂಡು ವಸತಿ ಗೃಹಗಳನ್ನು ಕಾಯ್ದಿರಿಸಿದ್ದಾರೆ. ಇನ್ನು, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ಕಣ್ತುಂಬಿಕೊಳ್ಳುವುದೇ ಆನಂದ. ಚಳಿಯ ನಡುವೆ ಮಂಜು ಕವಿದ ವಾತಾವರಣದಲ್ಲಿ ಹೊಸ ವರ್ಷವನ್ನು ಎದುರು ನೋಡುವುದೇ ಉಲ್ಲಾಸ. ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ ೬ರಿಂದ ಸಂಜೆ ೪.೩೦ರೊಳಗೆ ಮಾತ್ರ ಪ್ರವೇಶಾವಕಾಶ ಇರುವುದರಿಂದ ಅಲ್ಲಿಗೆ ದೊಡ್ಡ ಸಂಖ್ಯೆಯ ಭಕ್ತರು ಹೊಸ ಸಂವತ್ಸರದಂದು ಬರುವ ನಿರೀಕ್ಷೆ ಸಹಜವಾದದ್ದಾಗಿದೆ.

” ಬಂಡೀಪುರದಲ್ಲಿನ ಖಾಸಗಿ ರೆಸಾರ್ಟ್, ಹೋಂಸ್ಟೇಗಳಲ್ಲಿ ರಾತ್ರಿ ೧೦ ಗಂಟೆ ನಂತರ ಫೈರ್ ಕ್ಯಾಂಪ್, ಲೈಟಿಂಗ್ಸ್ ಹಾಗೂ ಅಧಿಕ ಶಬ್ದ ಹೊರಸೂಸುವ ಡಿಜೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಪ್ರಭಾಕರನ್, ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ

” ಹೊಸ ವರ್ಷದ ಹಿನ್ನೆಲೆಯಲ್ಲಿ ೧೫ ದಿನಗಳಿಂದಲೇ ಭಕ್ತಾದಿಗಳು, ಪ್ರವಾಸಿಗರು ಆನ್‌ಲೈನ್‌ನಲ್ಲಿ ೨೫೦ ವಸತಿಗೃಹಗಳನ್ನು ಕಾಯ್ದಿರಿಸಿದ್ದಾರೆ. ಆಫ್ಲೈನ್ ನಲ್ಲಿಯೂ ಕೊಠಡಿಗಳಿಗೆ ಬೇಡಿಕೆ ಹೆಚ್ಚಾಗಿದೆ.”‌

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

8 mins ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

41 mins ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

1 hour ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

2 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago