Andolana originals

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ.

ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ ಹೊಸ ವರ್ಷದ ಕಾರಣಕ್ಕೆ ಸಹಜವಾಗಿಯೇ ಬೇಡಿಕೆ ಉಂಟಾಗಿದೆ. ಜನತೆ, ನೂತನ ಸಂವತ್ಸರವನ್ನು ಅವರದ್ದೇ ಆದ ರೀತಿಯಲ್ಲಿ ಬರಮಾಡಿಕೊಳ್ಳುತ್ತಾರೆ. ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಪುನಸ್ಕಾರ ನೆರವೇರಿಸಿ ವರ್ಷವಿಡೀ ಒಳ್ಳೆಯದಾಗಲೆಂದು ಪ್ರಾರ್ಥನೆ ಮಾಡುವವರಿದ್ದಾರೆ. ಪಬ್, ಪಾರ್ಟಿ ಹೀಗೆ ಆಯ್ದ ಸ್ಥಳಗಳಿಗೆ ಹೋಗಿ ಮೋಜು ಮಾಡಿ ವರ್ಷದ ಮೊದಲ ದಿನವನ್ನು ಬರಮಾಡಿಕೊಳ್ಳುವವರೂ ಇದ್ದಾರೆ. ಏನೆಲ್ಲಾ ನಿರ್ಬಂಧ, ಎಚ್ಚರಿಕೆ ನಡುವೆಯೂ ೨೦೨೬ಕ್ಕೆ ಕಾಲಿಡುವ ಕ್ಷಣದಲ್ಲಿ ಪಟಾಕಿ, ಬಾಣ ಬಿರುಸುಗಳು ಅಲ್ಲಲ್ಲಿ ಸದ್ದು ಮಾಡುತ್ತವೆ.

ತಾವು ಇರುವೆಡೆಯೇ ಕೇಕ್ ಕತ್ತರಿಸಿ ಮನೆ ಮಂದಿಯೆಲ್ಲಾ  ಪರಸ್ಪರ ಸಿಹಿ ಮೆಲ್ಲುತ್ತಾ ಸಂತೋಷದಿಂದ ಹೊಸ ದಿನ ಬರಮಾಡಿಕೊಳ್ಳುವ ದೊಡ್ಡ ವರ್ಗವೂ ಇದೆ. ಹಾಗೆಯೇ, ವರ್ಷದ ಮೊದಲ ದಿನ ಹೊಸ ಬಟ್ಟೆ ಧರಿಸಿ ಇಡೀ ವರ್ಷ ಹರ್ಷದಿಂದ ಇರಲೆಂದು ಆಶಿಸಿ ಮಲೆಮಹದೇಶ್ವರ ಬೆಟ್ಟ ಅಥವಾ ಇತರ ಧಾರ್ಮಿಕ ಕೇಂದ್ರಗಳಿಗೆ ಹೊಸ ವರ್ಷದ ಮುನ್ನಾ ದಿನವೇ ಹೋಗಿ ಉಳಿದು ದೇವರ ದರ್ಶನ ಪಡೆಯುವವರೂ ಇದ್ದು ಇಂತಹವರು ಕುಟುಂಬ ಸಮೇತರಾಗಿ ಧಾರ್ಮಿಕ ಸ್ಥಳಗಳಿಗೆ ಧಾವಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮಾತ್ರವಲ್ಲದೇ ರಾಜ್ಯ ಹಾಗೂ ನೆರೆ-ಹೊರೆರಾಜ್ಯಗಳಿಂದಲೂ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟವನ್ನು ಆಯ್ಕೆ ಮಾಡಿಕೊಂಡು ವಸತಿ ಗೃಹಗಳನ್ನು ಕಾಯ್ದಿರಿಸಿದ್ದಾರೆ. ಇನ್ನು, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ಕಣ್ತುಂಬಿಕೊಳ್ಳುವುದೇ ಆನಂದ. ಚಳಿಯ ನಡುವೆ ಮಂಜು ಕವಿದ ವಾತಾವರಣದಲ್ಲಿ ಹೊಸ ವರ್ಷವನ್ನು ಎದುರು ನೋಡುವುದೇ ಉಲ್ಲಾಸ. ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ ೬ರಿಂದ ಸಂಜೆ ೪.೩೦ರೊಳಗೆ ಮಾತ್ರ ಪ್ರವೇಶಾವಕಾಶ ಇರುವುದರಿಂದ ಅಲ್ಲಿಗೆ ದೊಡ್ಡ ಸಂಖ್ಯೆಯ ಭಕ್ತರು ಹೊಸ ಸಂವತ್ಸರದಂದು ಬರುವ ನಿರೀಕ್ಷೆ ಸಹಜವಾದದ್ದಾಗಿದೆ.

” ಬಂಡೀಪುರದಲ್ಲಿನ ಖಾಸಗಿ ರೆಸಾರ್ಟ್, ಹೋಂಸ್ಟೇಗಳಲ್ಲಿ ರಾತ್ರಿ ೧೦ ಗಂಟೆ ನಂತರ ಫೈರ್ ಕ್ಯಾಂಪ್, ಲೈಟಿಂಗ್ಸ್ ಹಾಗೂ ಅಧಿಕ ಶಬ್ದ ಹೊರಸೂಸುವ ಡಿಜೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಪ್ರಭಾಕರನ್, ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ

” ಹೊಸ ವರ್ಷದ ಹಿನ್ನೆಲೆಯಲ್ಲಿ ೧೫ ದಿನಗಳಿಂದಲೇ ಭಕ್ತಾದಿಗಳು, ಪ್ರವಾಸಿಗರು ಆನ್‌ಲೈನ್‌ನಲ್ಲಿ ೨೫೦ ವಸತಿಗೃಹಗಳನ್ನು ಕಾಯ್ದಿರಿಸಿದ್ದಾರೆ. ಆಫ್ಲೈನ್ ನಲ್ಲಿಯೂ ಕೊಠಡಿಗಳಿಗೆ ಬೇಡಿಕೆ ಹೆಚ್ಚಾಗಿದೆ.”‌

ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago