Andolana originals

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ

ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ 

ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳನ್ನು ಕಂಡು ಪುಳಕಿತರಾದರು.

ಕಳೆದ ವರ್ಷ ತಾಯಿ ಹುಲಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೇ ಇದ್ದ ಮೂರು ಮರಿಗಳೂ ಇದೇ ಮೊದಲ ಬಾರಿಗೆ ಹೊರಗೆಕಾಣಿಸಿಕೊಂಡಿರುವುದು ವಿಶೇಷ. ಕಳೆದ ನವೆಂಬರ್‌ನಲ್ಲಿ ಸಫಾರಿ ಬಂದ್ ಆಗಿದ್ದರಿಂದ ಯಾವುದೇ ವಾಹನಗಳ ಓಡಾಟವಿಲ್ಲದೆ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ವನ್ಯಜೀವಿಗಳು ಸಫಾರಿ ಆರಂಭವಾದ ನಂತರ ಪ್ರವಾಸಿಗರಿಗೆ ಕಾಣಿಸತೊಡಗಿವೆ.

ಸೋಮವಾರ ಬೆಳಿಗ್ಗೆ ಸಫಾರಿ ಸಂದರ್ಭದಲ್ಲಿ ಕಿರುಬನ ಕೊಳಚಿ ಕೆರೆ ಸಮೀಪ ಕೇತಳ್ಳಿ ಕೆರೆ ಬಳಿ ತಾಯಿ ಹುಲಿ ತನ್ನ ಎರಡು ಮರಿಗಳ ಜತೆ ಮಲಗಿರುವುದು ಹಾಗೂ ಅದೇ ಕೆರೆಯಲ್ಲಿ ನೀರು ಕುಡಿಯುತ್ತಿದ್ದ ಮೂರ್ಕೆರೆ ತಾಯಿ ಹುಲಿಯ ಮೂರು ಮರಿಗಳು ಕಾಡಿನತ್ತ ಓಡಿಹೋದ ವಿಡಿಯೋ ವೈರಲ್ ಆಗುತ್ತಿದೆ.

ಅರಣ್ಯ ಇಲಾಖೆಯ ಪಾಲನೆ: ಕಳೆದ ವರ್ಷ ತನ್ನ ಮೂರು ಮರಿಗಳ ಜತೆಗೆ ಪ್ರವಾಸಿಗರಿಗೆ ಆಗಾಗ್ಗೆ ದರ್ಶನ ನೀಡುತ್ತಿದ್ದ ಮೂರ್ಕೆರೆ ಫೀಮೇಲ್ ಹೆಸರಿನ ಹೆಣ್ಣುಹುಲಿ ಅಕ್ಟೋಬರ್ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು. ಎಡ ಕಾಲಿಗೆ ಆದ ಗಾಯದಿಂದ ಕುಂಟುತ್ತಿದ್ದ ತಾಯಿ ತನ್ನ ೧೦ ತಿಂಗಳ ಮರಿಗಳನ್ನು ತೊರೆದುಹೋಗಿತ್ತು. ಅರಣ್ಯ ಇಲಾಖೆ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದೆ ಅದು ಬದುಕಿದೆಯೋ ಸತ್ತಿದೆಯೇ ಎಂಬುದೇ ತಿಳಿಯದಂತಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಿಗಳ ರಕ್ಷಣೆ ಹಾಗೂ ಪಾಲನೆಗೆ ಮುಂದಾಗಿತ್ತು.

ಬೇಟೆಯಾಡುವ ಕೌಶಲ ಕಲಿಯದೆ ತಮ್ಮ ಆಹಾರವನ್ನು ಸಂಪಾದಿಸಲು ಸಾಧ್ಯವಾಗದೆ ಅನಾಥವಾಗಿದ್ದ ಮರಿಗಳಿಗೆ ಆಹಾರ ನೀಡುವ ವ್ಯವಸ್ಥೆಯನ್ನೂ ಇಲಾಖೆ ಮಾಡಿತ್ತು. ಜತೆಗೆ ಕಾಡಿನಲ್ಲಿರುವ ಇತರ ಹುಲಿ, ಚಿರತೆಗಳಿಂದ ಅಪಾಯವಾಗದಂತೆ ಥರ್ಮಲ್ ಡ್ರೋನ್ ಕ್ಯಾಮೆರಾಗಳ ಮೂಲಕ ಕಣ್ಗಾವಲಿರಿಸಿ ಸಂರಕ್ಷಿಸಿತ್ತು. ನಿಧಾನಕ್ಕೆ ಬೆಳೆಯುತ್ತಾ ಬಂದ ಮರಿಗಳಿಗೆ ಸದ್ಯ ಒಂದೂವರೆ ವರ್ಷ ವಯಸ್ಸಾಗಿದ್ದು ಇವು ಪ್ರಸ್ತುತ ಬೇಟೆಯಾಡುವ ಸಾಮರ್ಥ್ಯ ಬೆಳೆಸಿಕೊಂಡಿವೆ. ಜಿಂಕೆಗಳನ್ನು ಬೇಟೆಯಾಡಿ ತಿನ್ನುತ್ತಿವೆ.

” ಇದೇ ಮೊದಲ ಬಾರಿಗೆ ಮೂರ್ಕೆರೆ ಫೀಮೇಲ್‌ನ ಮೂರು ಮರಿಗಳು ಹಾಗೂಕೇತಹಳ್ಳಿ ಕೆರೆ ಫೀಮೇಲ್ ಮರಿಗಳು ಒಟ್ಟಾಗಿ ಕಿರುಬನ ಕೊಳಚಿಯಲ್ಲಿ ಕಾಣಿಸಿಕೊಂಡಿವೆ. ತಾಯಿಯಿಲ್ಲದೆ ಅನಾಥವಾಗಿದ್ದ ಮೂರು ಮರಿಗಳು ತಮ್ಮ ಬೇಟೆಯನ್ನು ಸಂಪಾದಿಸುವ ಸಾಮರ್ಥ್ಯ ಬೆಳೆಸಿಕೊಂಡಿವೆ.”

ಎನ್.ಸಿ.ಮಹದೇವ, ಆರ್‌ಎಫ್‌ಒ, ಬಂಡೀಪುರ ವಲಯ

 

 

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

4 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

8 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

8 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

8 hours ago