Andolana originals

ಅಲ್ಲಲ್ಲಿ ಗುಂಡಿಬಿದ್ದ ರಸ್ತೆಯಲ್ಲಿ ಸಂಚಾರ ಬಲು ದುಸ್ತರ

ಎಂ. ಆರ್. ಚಕ್ರಪಾಣಿ
ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಪ್ರತಿನಿತ್ಯ ಓಡಾಡಲು ಹರಸಾಹಸ ಪಡಬೇಕಾದ ದುಸ್ಥಿತಿ ಎದುರಾಗಿದೆ.

ಪಟ್ಟಣದ ಪೇಟೆ ಬೀದಿ ರಸ್ತೆ ಅಗಲೀಕರಣ ಆಗುವ ಸೂಚನೆಯನ್ನು ಶಾಸಕರು, ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿತ್ತು. ಆದರೆ, ರಸ್ತೆ ಅಗಲೀಕರಣ ಆಗುವ ತನಕವಾದರೂ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿಲ್ಲ. ಈ ರಸ್ತೆಯಲ್ಲಿ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಈ ರಸ್ತೆ ಕಿರಿದಾಗಿದ್ದು ರಸ್ತೆಯು ಉದ್ದಕ್ಕೂ ಗುಂಡಿಮಯವಾ ಗಿರುವುದರಿಂದ ವಾಹನಗಳು ಇಲ್ಲಿ ಸಂಚರಿಸಲು ಹರಸಾಹಸಪಡಬೇಕಾಗಿದೆ. ಈ ರಸ್ತೆಯ ಸ್ಥಿತಿಯನ್ನು ನೋಡಿ ಸಾರ್ವಜನಿಕರು, ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ.

ಗುಂಡಿ ಮುಚ್ಚದೆ ಹಾಗೇ ಬಿಟ್ಟಿದ್ದಾರೆ: ಬಹುತೇಕ ಬಡಾವಣೆಗಳಲ್ಲಿ ರಸ್ತೆಗಳ ಬದಿಗಳಲ್ಲಿ ಕುಡಿಯುವ ನೀರಿನ ಪೈಪ್, ವಿದ್ಯುತ್ ತಂತಿಗಳನ್ನು ಹೂಳಲು ಗುಂಡಿ ತೆಗೆಯಲಾಗಿದೆ. ಕೆಲವು ಕಡೆ ಅವುಗಳನ್ನು ಮುಚ್ಚದೆ ಇರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಕಿರಿಕಿರಿಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಽಕಾರಿಗಳು ಇತ್ತ ಗಮನಹರಿಸಿ ಹೆಚ್ಚಿನ ಅನಾಹುತಕ್ಕೂ ಮುನ್ನ ಸಾರ್ವಜನಿಕರ ಸುಗಮ ಸಂಚಾರಕ್ಕೆ ಶೀಘ್ರದಲ್ಲೇ ಡಾಂಬರೀಕರಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಸುರಿದ ಮಳೆಯಿಂದ ಮದ್ದೂರು ಪಟ್ಟಣದ ಮುಖ್ಯ ರಸ್ತೆಯ ಗುಂಡಿಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಶಾಸಕರ ಗಮನಕ್ಕೂ ತಂದಿದ್ದು, ಶೀಘ್ರದಲ್ಲೇ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. -ಕೋಕಿಲ ಅರುಣ್, ಅಧ್ಯಕ್ಷರು, ಪುರಸಭೆ ಮದ್ದೂರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

10 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

11 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

12 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

17 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

17 hours ago